ಜನಪದೀಯ ಕ್ರೀಡೆಗೆ ಸಮಾಜದ ಸ್ಪಂದನೆ ಅಗತ್ಯ


Team Udayavani, Dec 10, 2017, 2:54 PM IST

10-Dec12.jpg

ಸವಣೂರು: ಜನಪದೀಯ ಕ್ರೀಡೆಗಳ ಬೆಳವಣಿಗೆಗೆ ಸಮಾಜದ ಸ್ಪಂದನೆ ಅಗತ್ಯ.ನಮ್ಮ ಜೀವನದಲ್ಲಿ ಹಾಸುಹೊಕ್ಕಾಗಿದ್ದ ಜನಪದೀಯ ಕ್ರೀಡೆಗಳು ಈಗ ಕಾಣಲು ಅಪರೂಪವಾಗಿವೆ. ಈ ನಿಟ್ಟಿನಲ್ಲಿ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಮೂಲಕ ದೇಸಿ ಕ್ರೀಡೆ ಲಗೋರಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪಂದ್ಯಾಟ ನಡೆಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು.

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಶಿನಾರೆ ರಶ್ಮಿ ಜಿಲ್ಲಾ ಮಟ್ಟದ ಲಗೋರಿ ಪಂದ್ಯಾಟ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸಾಂಪ್ರದಾಯಿಕ ಕ್ರೀಡಾಕೂಟದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ತುಳು ಭಾಷೆ, ಪರಂಪರೆ, ಕ್ರೀಡೆಗಳು ಪ್ರಾಚೀನವಾದದ್ದು,ತುಳು ಭಾಷೆಗೆ ತನ್ನದೇ ಆದ ವಿಶೇಷತೆ ಇದೆ. 36 ಶಾಲೆಗಳಲ್ಲಿ ತುಳು ಭಾಷೆ ಪಠ್ಯ ಬೋಧಿಸಲಾಗುತ್ತಿದೆ. ಈ ಬಾರಿ ಎಸೆಸೆಲ್ಸಿ ಪರೀಕ್ಷೆಯಲ್ಲಿ 400 ವಿದ್ಯಾರ್ಥಿಗಳು ತುಳು ಭಾಷೆಯನ್ನು ತೃತೀಯ ಭಾಷೆಯಾಗಿ ಆಯ್ದುಕೊಂಡಿದ್ದಾರೆ. ನಮ್ಮ ಮಾತೃಭಾಷೆಯ ಪ್ರೀತಿ, ಅಭಿಮಾನ ಶಾಶ್ವತವಾಗಿರಬೇಕು ಎಂದರು.

ಸರ್ವರ ಸಹಕಾರ ಅಗತ್ಯ
ಮುಖ್ಯ ಅತಿಥಿ ಮಂಗಳೂರು ವಿಶ್ವ ವಿದ್ಯಾ ನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರಸನ್ನ ಬಿ.ಕೆ. ಮಾತನಾಡಿ,
ಜನಪದೀಯ ಸಂಸ್ಕೃತಿ ನಾಶವಾಗುತ್ತಿರುವ ಇಂದಿನ ಸನ್ನಿವೇಶದಲ್ಲಿ ಲಗೋರಿಯಂತಹ ಪಂದ್ಯಗಳ ಆಯೋಜನೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ.ಇದರ ಬೆಳವಣಿಗೆಗೆ ಸರ್ವರ ಸಹಕಾರ ಅಗತ್ಯ. ಲಗೋರಿ ಪಂದ್ಯಾಟವನ್ನು ವಿಶ್ವವಿದ್ಯಾನಿಲಯದಲ್ಲಿ ಸಾಂಪ್ರದಾಯಿಕ ಕ್ರೀಡೆಯಾಗಿ ಪ್ರಥಮ ಬಾರಿಗೆ ನಡೆಸಿದ ಹೆಗ್ಗಳಿಕೆ ಮಂಗಳೂರು ವಿಶ್ವವಿದ್ಯಾನಿಲಯದ್ದು. ಕ್ರೀಡೆ ಸಾಂಸ್ಕೃತಿಕವಾಗಿ ಬೆಳವಣಿಗೆಯಾದರೆ ಸಮಾಜ ಗುರುತಿಸುತ್ತದೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿ‌ನ್‌ ಎಲ್‌. ಶೆಟ್ಟಿ, ಟ್ರಸ್ಟಿ ಎನ್‌. ಸುಂದರ ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯ
ಸೀತಾರಾಮ ಕೇವಳ, ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್‌. ರೈ, ಸುಳ್ಯ ಪೆರಾಜೆ ಜ್ಯೋತಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರೆಮೇಲು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಘುನಾಥ್‌ ಬಿ.ಎಸ್‌., ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಪ್ರಸಾದ್‌ ಆಳ್ವ, ಬೇಬಿ ಎ. ಉಪಸ್ಥಿತರಿದ್ದರು.

ನವ್ಯಾ, ತಂಡದವರು ಆಶಯ ಗೀತೆ ಹಾಡಿದರು.ವಿದ್ಯಾರ್ಥಿ ನಾಯಕ ಮಹಮ್ಮದ್‌ ನಾಸೀರ್‌ ಸ್ವಾಗತಿಸಿ, ಕಾಲೇಜಿನ ಕ್ರೀಡಾ ಸಂಘದ ಜತೆ ಕಾರ್ಯದರ್ಶಿ ಸಂಧ್ಯಾ ಕೆ. ವಂದಿಸಿದರು. ಅನುಶ್ರೀ ನಿರೂಪಿಸಿದರು.

ನಮ್ಮ ಮಣ್ಣಿನ ಕ್ರೀಡೆ
ಪಂದ್ಯಾಟ ಉದ್ಘಾಟಿಸಿದ ಸಂಸ್ಥೆಯ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಮಾತನಾಡಿ, ಲಗೋರಿ ನಮ್ಮ ಮಣ್ಣಿನ ಕ್ರೀಡೆ. ಈ ಕ್ರೀಡೆಗೆ ಆಧುನಿಕ ಸ್ಪರ್ಶ ನೀಡುವ ಮೂಲಕ ಜನಪ್ರಿಯಗೊಳಿಸುವ ಅಗತ್ಯವಿದೆ. ವಿಶ್ವತುಳು ಸಮ್ಮೇಳನದಲ್ಲಿ ಡಾ| ವೀರೇಂದ್ರ ಹೆಗ್ಗಡೆ ಅವರು ಲಗೋರಿ ಪಂದ್ಯಾಟ ಆಯೋಜಿಸಿದ್ದರು. ಇದೇ ಲಗೋರಿ ಪಂದ್ಯಾಟ ನಡೆಸಲು ಪ್ರೇರಣೆ. ಶಾಲಾ, ಸಂಘಟನೆಗಳ ಕ್ರೀಡಾಕೂಟದಲ್ಲಿ ಈ ಪಂದ್ಯಾಟವನ್ನು ಸೇರಿಸಿದರೆ ಇನ್ನಷ್ಟು ಬೆಳೆಯಲು ಸಾಧ್ಯ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.