ಭಾರತದಲ್ಲಿ ಆಹಾರ ಮಾರುಕಟ್ಟೆ ಅನಿಯಂತ್ರಿತ: ಅಮರ್‌


Team Udayavani, Feb 10, 2019, 5:02 AM IST

10-february-4.jpg

ಮೂಡುಬಿದಿರೆ: ಭಾರ‌ತದಲ್ಲಿ ಶೇ. 31ರಷ್ಟು ಜನ ಕಡಿಮೆ ತೂಕದವರಾಗಿದ್ದಾರೆ. ದಿನವೂ 300 ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಇದಕ್ಕೆಲ್ಲ ಇಲ್ಲಿನ ಆಹಾರ ಮಾರುಕಟ್ಟೆಯ ಶೇ. 90ರಷ್ಟು ಭಾಗ ಯಾವುದೇ ನಿಯಂತ್ರಣಗಳನ್ನು ಪಾಲಿಸದೆ ಇರುವುದೇ ಕಾರಣ ಎಂದು ಭಾರತ ಮತ್ತು ಶ್ರೀಲಂಕಾದ ಗಾಮ್ಮ ಫಿಝಾl ಕ್ರಾಫ್ಟ್‌ ಪ್ರೈ. ಲಿ.ನ ಆಡಳಿತ ನಿರ್ದೇಶಕ ಅಮರ್‌ ರಾಜ್‌ ಸಿಂಗ್‌ ಆಭಿಪ್ರಾಯಪಟ್ಟರು.

ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ನ ಆಳ್ವಾಸ್‌ ಕಾಲೇಜಿನ ‘ಆಹಾರ ವಿಜ್ಞಾನ, ಪೌಷ್ಟಿಕತೆ’ಯ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗಗಳ ಸಹಭಾಗಿತ್ವದಲ್ಲಿ ವಿದ್ಯಾಗಿರಿಯ ಡಾ| ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ಏರ್ಪಡಿಸಲಾದ ‘ಆಹಾರ ಭದ್ರತೆ: ಕಾರ್ಯವಿಧಾನಗಳು, ಪೋಷಕಾಂಶಗಳು- ಅಗತ್ಯ, ಪ್ರಸ್ತುತತೆ, ಸವಾಲುಗಳು ಹಾಗೂ ಆಯಾಮಗಳು’ ಕುರಿತಾದ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಹಾರ ವಿಷಯದಲ್ಲಿ ಮಾರ್ಗದರ್ಶಿ ನಿಬಂಧನೆಗಳನ್ನು ಪಾಲಿಸುವ ಜತೆಗೆ ಆಹಾರ ವಿಜ್ಞಾನದಲ್ಲಿ ಭಾರತೀಕರಣ (ಇಂಡಿಯನೈಸೇಶನ್‌) ಸಾಧಿಸುವುದೂ ಅಗತ್ಯವಾಗಿದೆ. ಬರಿಯ ಉದ್ಯೋಗಾವಕಾಶಗಳ ಬಗ್ಗೆ ಚಿಂತಿಸದೆ ರಾಷ್ಟ್ರದಲ್ಲಿ ಮಾರ್ಪಾಡು ತರಬಲ್ಲ ಅಭಿವೃದ್ಧಿ ಸಾಧಿಸಲು, ಸಂಶೋಧನೆ ನಡೆಸಲು ಅಗತ್ಯವಾದ ಆರ್ಥಿಕ ಸಂಪನ್ಮೂಲ ಒದಗಿಸಬೇಕಾಗಿದೆ ಎಂದು ಅವರು ಹೇಳಿದರು.

ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ ಟ್ರಸ್ಟಿ ವಿವೇಕ್‌ ಆಳ್ವ ಅಧ್ಯಕ್ಷತೆ ವಹಿಸಿ, ಅನ್ಯದೇಶಗಳ ಶೋಧನ ತಂತ್ರಜ್ಞಾನಕ್ಕೆ ಗೋಚರಿಸದಂತೆ ಸಂರಕ್ಷಣ ಕ್ರಮಗಳನ್ನು ಭಾರತ ಅಳವಡಿಸಿಕೊಳ್ಳಬೇಕಾಗಿದೆ ಎಂದು ಎಚ್ಚರಿಸಿದರು.

ಟೇಸ್ಟಿ ಮತ್‌ಲಬ್‌ ಗಂಜಿ ಚಟ್ನಿ
ಪರಂಪರೆಯ ಆಹಾರ ಅಭ್ಯಾಸಗಳೊಂದಿಗೆ ಜೀವಿಸಿದ ಭಾರತೀಯ ಹಿರಿಯರು ಶತಾಯುಷಿಗಳಾಗಿದ್ದರೆ, ಅವನ್ನೆಲ್ಲ ಬದಿಗಿಟ್ಟು ಜೀವನ ಶೈಲಿಯನ್ನೇ ಬದಲಾಯಿಸಿಕೊಂಡವರು ಅಲ್ಪಾಯುಷಿಗಳಾಗುತ್ತಿರುವ ಚಿತ್ರಣ ನೀಡಿದ ಅವರು, ಥಂಡಾ ಮತ್‌ಲಬ್‌ ಕೋಕಕೋಲಾ ಎನ್ನುವ ಈ ಕಾಲದಲ್ಲಿ ಟೇಸ್ಟಿ ಮತ್‌ಲಬ್‌ ಗಂಜಿ ಚಟ್ನಿ ಎಂಬ ಪ್ರಚಾರಾಂದೋಲನ ನಡೆಸಬೇಕಾಗಿದೆ ಎಂದು ಅವರು ಹೇಳಿದರು. ಆಳ್ವಾಸ್‌ ಕಾಲೇಜಿನ ಪ್ರಾಚಾರ್ಯ ಡಾ| ಕುರಿಯನ್‌ ಉಪಸ್ಥಿತರಿದ್ದರು.

ವಿಚಾರಸಂಕಿರಣದ ಮುಖ್ಯ ಸಂಯೋಜಕಿ, ಅಳ್ವಾಸ್‌ ಆಹಾರ ವಿಜ್ಞಾನ ಸ್ನಾತಕೋತ್ತರ ವಿಭಾಗ ಮುಖ್ಯಸ್ಥೆ ಡಾ| ಅರ್ಚನಾ ಪ್ರಭಾತ್‌ ಸ್ವಾಗತಿಸಿದರು. ಆಶಿತಾ ಎಂ.ಡಿ. ವಂದಿಸಿದರು. ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ವಿವಿಧ ರಾಷ್ಟ್ರಗಳಿಂದ 700 ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು.

ಪದಾರ್ಥ ಬೆಳೆಸುವ ಸಾಧ್ಯತೆ
ಮುಖ್ಯ ಅತಿಥಿ, ಮಂಗಳೂರು ವಿ.ವಿ. ಯೋಜನಾ ನಿರ್ದೇಶಕ ಡಾ| ಕೆ. ಎಸ್‌. ಜಯಪ್ಪ ಮಾತನಾಡಿ, ಏರುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಬೆಳೆಗಳನ್ನು ಬೆಳೆಸುವ ತುರ್ತು ಇರುವ ಪ್ರಸಕ್ತ ಸನ್ನಿವೇಶದಲ್ಲಿ ಸಾಗರೋತ್ಪ್ಪನ್ನ ಮತ್ತು ಅಕ್ವಾ ಕಲ್ಚರ್‌ನ ಮೂಲಕ ಆಹಾರ ಪದಾರ್ಥಗಳನ್ನು ಬೆಳೆಸುವ ಸಾಧ್ಯತೆಗಳನ್ನು ಹೆಚ್ಚಾಗಿ ಶೋಧಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.