ಅಪಾಯಕರ ಕಾಲುಸಂಕ ಪಟ್ಟಿ ಸಿದ್ಧ; ಮಳೆಗಾಲಕ್ಕೆ ಮುನ್ನ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ


Team Udayavani, Nov 28, 2022, 7:13 AM IST

ಅಪಾಯಕರ ಕಾಲುಸಂಕ ಪಟ್ಟಿ ಸಿದ್ಧ; ಮಳೆಗಾಲಕ್ಕೆ ಮುನ್ನ ಪರ್ಯಾಯ ವ್ಯವಸ್ಥೆಗೆ ಸಿದ್ಧತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 55 ಕಾಲುಸಂಕಗಳು ಅಪಾಯಕರ ಸ್ಥಿತಿಯಲ್ಲಿವೆ, ಕಾಲು ಸಂಕಗಳನ್ನು ಒಟ್ಟು 3,136 ವಿದ್ಯಾರ್ಥಿಗಳು ಉಪಯೋಗಿಸುತ್ತಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಭಾರೀ ಮಳೆಯ ಸಂದರ್ಭ ಬೈಂದೂರಿನ ಬೀಜಮಕ್ಕಿಯಲ್ಲಿ ವಿದ್ಯಾರ್ಥಿನಿ ಸನ್ನಿಧಿ ಕಾಲುಸಂಕದಿಂದ ಜಾರಿಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಸರಕಾರ ವಿವಿಧ ಜಿಲ್ಲೆಗಳಲ್ಲಿರುವ ಕಾಲುಸಂಕಗಳನ್ನು ಪಟ್ಟಿ ಮಾಡುವಂತೆ ಶಿಕ್ಷಣ ಇಲಾಖೆ ಹಾಗೂ ತಾ.ಪಂ. ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಎರಡು ತಿಂಗಳುಗಳಲ್ಲಿ ಸಮೀಕ್ಷೆಯನ್ನು ಪೂರ್ಣ ಗೊಳಿಸಲಾಗಿದೆ. ತಿಂಗಳ ಹಿಂದೆಯೇ ಸಮೀಕ್ಷೆ ನಡೆಸಲಾಗಿದ್ದರೂ ಮಾಹಿತಿ ಸರಿ ಇಲ್ಲ ಎಂಬ ಕಾರಣಕ್ಕೆ ಮರು ಸಮೀಕ್ಷೆ ನಡೆಸಲಾಗಿತ್ತು.

ಈ ಕುರಿತು ಉದಯವಾಣಿಗೆ ಲಭ್ಯ ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 338 ಕಾಲು ಸಂಕಗಳಿವೆ.

ಇದರಲ್ಲಿ 227ರಷ್ಟು ಮರದ ಸಂಕಗಳು. 111 ಇತರ ಸಂಕಗಳು. ಹಿಡಿದುಕೊಳ್ಳಲು ಆಧಾರ ಇರುವಂತಹ ಕಾಲುಸಂಕಗಳು 290. ಆಧಾರ ಇಲ್ಲದವು 48 ಇವೆ. 283 ಸಂಕಗಳು ಸದೃಢವಾಗಿದ್ದರೆ 55 ಸದೃಢವಲ್ಲ.

ಪುತ್ತೂರಿನಲ್ಲಿ ಅತ್ಯಧಿಕ
ಜಿಲ್ಲೆಯಲ್ಲಿ ಕಾಲಸಂಕಗಳು ಅತ್ಯಧಿಕ ಇರುವುದು ಪುತ್ತೂರು ತಾಲೂಕಿನಲ್ಲಿ, 2ನೇ ಸ್ಥಾನದಲ್ಲಿ ಬೆಳ್ತಂಗಡಿ ಇದೆ. ಅಚ್ಚರಿ ಎಂದರೆ ಪುತ್ತೂರು ತಾಲೂಕಿನಲ್ಲಿ ಇರುವ ಎಲ್ಲ 156 ಕಾಲುಸಂಕಗಳೂ ಮರದ್ದೇ ಆಗಿವೆ ಎನ್ನುತ್ತದೆ ಸಮೀಕ್ಷೆ. ಈ ಸಂಕಗಳನ್ನು 2,182 ವಿದ್ಯಾರ್ಥಿಗಳು ಬಳಸುತ್ತಾರೆ.

ಬೆಳ್ತಂಗಡಿ ತಾಲೂಕಿನಲ್ಲಿ 43 ಮರದ ಹಾಗೂ 45 ಇತರ ಕಾಲುಸಂಕಗಳಿವೆ. ಆಧಾರ ಇಲ್ಲದ ಕಾಲು ಸಂಕಗಳು 37. ಕನಿಷ್ಠ ಕಾಲುಸಂಕ ಇರುವುದು ಮಂಗ ಳೂರು ನಗರ ಉತ್ತರದಲ್ಲಿ. ಇಲ್ಲಿ ಕೇವಲ 2 ಮರದ ಹಾಗೂ ಒಂದು ಕಾಂಕ್ರೀಟ್‌ ಕಾಲುಸಂಕ ಇದೆ.

ಬಹುತೇಕ ಮರದ ಕಾಲುಸಂಕಗಳನ್ನು ಸ್ಥಳೀ ಯರೇ ನಿರ್ಮಿಸಿರುತ್ತಾರೆ, ಅನೇಕ ಕಾಂಕ್ರೀಟ್‌ ಕಾಲು ಸಂಕಗಳನ್ನು 5 ವರ್ಷ ಹಿಂದೆ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗಿತ್ತು.

ಹಿಂದಿನ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಈ ಮಾಹಿತಿ ಸಂಗ್ರಹಕ್ಕೆ ಸೂಚಿಸಿದ್ದರು. ಪ್ರಸ್ತುತ ಜಿ.ಪಂ. ನಿಂದ ಮುಂದಿನ ಮಳೆಗಾಲದೊಳಗೆ ಅಪಾಯ ಕಾರಿ ಕಾಲುಸಂಕ ಸುಧಾರಣೆ ಬಗ್ಗೆ ವರದಿ ಕೇಳಲಾಗಿದೆ.

ಗ್ರಾಮಬಂಧು ಯೋಜನೆ
ಇಷ್ಟೇ ಅಲ್ಲದೆ ಲೋಕೋಪಯೋಗಿ ಇಲಾಖೆ ಮುಖಾಂತರ ಯಾವೆಲ್ಲ ಕಡೆಗಳಲ್ಲಿ ಕಾಲುಸಂಕ ಇಲ್ಲವೋ ಅಲ್ಲಿ ಸಂಕ ನಿರ್ಮಾಣವನ್ನು “ಗ್ರಾಮಬಂಧು’ ಯೋಜನೆಯಡಿ ಕೈಗೆತ್ತಿ ಕೊಳ್ಳಲಾಗಿದೆ. 33.65 ಕೋಟಿ ರೂ. ಮೊತ್ತದ ಈ ಯೋಜನೆ ಯಡಿ 234 ಕಾಲುಸಂಕ ಆಯ್ಕೆ ಮಾಡಿಕೊಳ್ಳಲಾಗಿದೆ. 60 ಪೂರ್ಣಗೊಂಡಿದ್ದರೆ 167 ಪ್ರಗತಿಯಲ್ಲಿವೆ. ಇನ್ನೂ 7 ವಿವಿಧ ಹಂತಗಳಲ್ಲಿವೆ ಎಂದು ದ.ಕ. ಜಿಲ್ಲಾ ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್‌ ಯಶವಂತ್‌ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೆಷ್ಟು?
ಉಡುಪಿ ಜಿಲ್ಲೆಯಲ್ಲಿ ಕಾಲುಸಂಕ ಆವಶ್ಯಕತೆ ಹಿನ್ನೆಲೆಯಲ್ಲಿ ಗ್ರಾ.ಪಂ.ಗಳಲ್ಲಿ ವಿಶೇಷ ಗ್ರಾಮ ಸಭೆ ನಡೆಸಿ ಶಿಫಾರಸು ಪಡೆಯಲಾಗಿತ್ತು. ಮನ ರೇಗಾ ಯೋಜನೆಯೊಳಗೆ ಕಾಲುಸಂಕಗಳ ಕ್ರಿಯಾ ಯೋಜನೆಯನ್ನೂ ಸೇರಿಸಿ ಅನುಮೋದನೆ ಪಡೆಯ ಲಾಗಿದೆ. ಕೆಲಸ ಶೀಘ್ರ ಆರಂಭವಾಗಲಿದೆ ಎಂದು ಉಡುಪಿ ಜಿ.ಪಂ. ಸಿಇಒ ಪ್ರಸನ್ನ ಹೇಳಿದ್ದಾರೆ.

ಜಿಲ್ಲೆಯಲ್ಲಿನ ಕಾಲುಸಂಕಗಳ ಪಟ್ಟಿ ಮಾಡಲಾಗಿದೆ. ಇದರಲ್ಲಿ ಒಂದಷ್ಟು ಅಪಾಯಕಾರಿ ಕಾಲುಸಂಕ ಗಳೂ ಇವೆ. ಅವುಗಳಿಗೆ ಪರ್ಯಾಯ ವೇನು ಎಂಬ ಬಗ್ಗೆ ವರದಿ ಕೇಳಲಾಗಿದೆ, ಮುಂದಿನ ಮಳೆಗಾಲದೊಳಗೆ ಕ್ರಮ ಕೈಗೊಳ್ಳು ವಂತೆ ಎಂಜಿನಿಯರಿಂಗ್‌ ವಿಭಾಗಕ್ಕೆ ಸೂಚಿಸಲಾಗಿದೆ.
-ಡಾ| ಕುಮಾರ್‌, ಸಿಇಒ, ದ.ಕ. ಜಿ.ಪಂ.

-ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.