ಮುರ ರೈಲ್ವೇ ಮೇಲ್ಸೇತುವೆಗಾಗಿ ಬ್ಯಾರಿಕೇಡ್‌ ಮಾಯ!


Team Udayavani, Apr 16, 2018, 2:25 PM IST

16-April-16.jpg

ನಗರ: ಮಾಣಿ- ಮೈಸೂರು ರಾಜ್ಯ ಹೆದ್ದಾರಿ ಈಗ ರಾಷ್ಟ್ರೀಯ ಹೆದ್ದಾರಿಗೆ ಹಸ್ತಾಂತರವಾಗಿದೆ. ಈ ಪ್ರಕ್ರಿಯೆ ನಡೆಯುತ್ತಿರುವ ನಡುವೆ ಮುರ ಜಂಕ್ಷನ್‌ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳು ಮಾಯವಾಗಿವೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ರಸ್ತೆ ಹಸ್ತಾಂತರ ಆಗಿರುವುದಕ್ಕೂ ಬ್ಯಾರಿಕೇಡ್‌ ಮಾಯವಾಗಿರುವುದಕ್ಕೂ ಸಂಬಂಧ ಇದೆಯೇ ಎನ್ನುವುದು ಗೊತ್ತಿಲ್ಲ. ಆದರೆ ಬ್ಯಾರಿಕೇಡ್‌ ಇಲ್ಲದೇ ಇರುವುದರಿಂದ ಒಂದಷ್ಟು ಸಮಸ್ಯೆ ಉಲ್ಬಣಿಸಿದ್ದು ಸುಳ್ಳಲ್ಲ. ತಕ್ಕಮಟ್ಟಿಗೆ ಪೇಟೆಯ ರೂಪು ಪಡೆಯುತ್ತಿರುವ ಮುರದಂತಹ ಸ್ಥಳಗಳಲ್ಲಿ ಬ್ಯಾರಿಕೇಡ್‌ನ‌ ಪ್ರಸ್ತುತತೆ ತುಂಬಾ ಇದೆ. ಏಕಾಏಕಿ ನುಗ್ಗಿ ಬರುವ ವಾಹನಗಳನ್ನು ತಪ್ಪಿಸಿಕೊಂಡು ರಸ್ತೆ ದಾಟುವುದೇ ಇಲ್ಲಿ ಹರಸಾಹಸ. ವಾಹನಗಳ ವೇಗಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಬ್ಯಾರಿಕೇಡ್‌ಗಳು ಬೇಕೇ ಬೇಕು. ಇದನ್ನು ಗಮನಿಸಿಯೇ ಪೊಲೀಸ್‌ ಇಲಾಖೆ ಬ್ಯಾರಿಕೇಡ್‌ ಹಾಕಿತ್ತು. ಆದರೆ ಅವು ಈಗ ಮಾಯವಾಗಿವೆ.

ಇನ್ನೊಂದೆಡೆ ಮುರ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ರೈಲ್ವೇ ಇಲಾಖೆ ಮುತುವರ್ಜಿಯಲ್ಲಿ ಮೇಲ್ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಸದ್ಯಕ್ಕೆ ಕಾಮಗಾರಿ ನಿಂತಿದೆ. ಆದರೆ ಈ ಕಾಮಗಾರಿಗಾಗಿ ರಸ್ತೆಯ ದಿಕ್ಕನ್ನೇ ಬದಲಾಯಿಸಲಾಗಿದೆ. ಹಿಂದೆ ಮುರ ಜಂಕ್ಷನ್‌ನಿಂದಲೇ ಕೆದಿಲ ಮಾರ್ಗ ಸಾಗುತ್ತಿತ್ತು. ಇದೀಗ ಈ ರಸ್ತೆಯನ್ನು ಸ್ವಲ್ಪ ಹಿಂದಕ್ಕೆ ಅಂದರೆ ಮೇಲ್ಸೇತುವೆಗೆ ಅನುಗುಣವಾಗಿ ನಿರ್ಮಿಸಲಾಗಿದೆ. ಇದಕ್ಕೆ ಪೂರಕವಾಗಿ ಬ್ಯಾರಿಕೇಡ್‌ ಇಡಬೇಕು ಎಂಬ ಹಿನ್ನೆಲೆ ಯಲ್ಲಿ ತೆಗೆದಿರಬಹುದೇ ಎಂಬ ನಿಟ್ಟಿನಲ್ಲಿ ಸಾರ್ವಜನಿಕರ ಗೊಂದಲ ಮುಂದುವರಿದಿದೆ.

ಈ ಮೊದಲು ಮುರ ರೈಲ್ವೇ ಹಳಿ ದಾಟಲು ಗೇಟ್‌ ಇಡಲಾಗಿತ್ತು. ಆದರೆ ಮುಂದೆ ಇದರ ಆವಶ್ಯಕತೆ ಇಲ್ಲ. ನೇರವಾಗಿ ಮೇಲ್ಸೇತುವೆ ಮೂಲಕ ವಾಹನಗಳು ಸಂಚರಿಸಬಹುದು. ಕೆದಿಲ ರಸ್ತೆಯಾಗಿ ಸಾಗಿದರೆ ಮಾಣಿಗೆ ಸುಲಭ ಹಾಗೂ ಹತ್ತಿರದ ಹಾದಿ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆಯೂ ಇದೆ. ಆದ್ದರಿಂದ ವಾಹನ ದಟ್ಟಣೆ ನಿಯಂತ್ರಿಸುವ ದೃಷ್ಟಿಯಿಂದ ಇಲ್ಲಿ ಬ್ಯಾರಿಕೇಡ್‌ಗಳು ತುಂಬಾ ಅಗತ್ಯ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಪಘಾತ ವಲಯ
ಪುತ್ತೂರಿನಲ್ಲಿ ದರ್ಬೆ ಹಾಗೂ ನೆಹರೂ ನಗರ ವೇಗವಾಗಿ ಬೆಳೆಯುತ್ತಿರುವ ಪಟ್ಟಣಗಳು. ನೆಹರೂನಗರಕ್ಕೆ ಒತ್ತಿಕೊಂಡೇ ಇರುವ ಮುರ ಸಾಕಷ್ಟು ಅಭಿವೃದ್ಧಿಗೆ ತೆರೆದುಕೊಂಡಿದೆ. ಆದ್ದರಿಂದ ಜನಜಂಗುಳಿ ಹೆಚ್ಚುತ್ತಿದೆ. ಸಾಲದೆಂಬಂತೆ ಹಿಂದೆ ರಾಜ್ಯ ಹೆದ್ದಾರಿ, ಈಗ ರಾಷ್ಟ್ರೀಯ ಹೆದ್ದಾರಿ ಸವರಿ ಕೊಂಡೇ ಹೋಗುತ್ತದೆ. ಇವಿಷ್ಟು ಕಾರಣ ಸಾಕು, ಅಪಘಾತಗಳ ಸಂಖ್ಯೆ ಹೆಚ್ಚಲು. ರಸ್ತೆ ದಾಟಲು ಸಾಧ್ಯವಿಲ್ಲ ಎನ್ನುವಷ್ಟು ವಾಹನ ದಟ್ಟಣೆ. ವೇಗವಾಗಿ ಬರುವ ವಾಹನಗಳಿಗೆ ಬ್ರೇಕ್‌ ಹಾಕುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ನಾಗರಿಕರದ್ದು.

ಪರ್ಯಾಯ ಮಾರ್ಗ ಹುಡುಕುತ್ತಿದ್ದೇವೆ
ಮುರದಲ್ಲಿ ಈ ಮೊದಲು ಬ್ಯಾರಿಕೇಡ್‌ ಹಾಕಲಾಗಿತ್ತು. ರಾಜ್ಯ ಹೆದ್ದಾರಿ ಅಥವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ ಇಡಬಾರದು ಎಂಬ ಸೂಚನೆ ಹಿನ್ನೆಲೆಯಲ್ಲಿ ಬ್ಯಾರಿಕೇಡನ್ನು ತೆರವು ಮಾಡಲಾಗಿತ್ತು. ಆದರೆ ಇದರ ಬಗ್ಗೆ ನಿಖರ ಮಾಹಿತಿ ತಿಳಿದಿಲ್ಲ. ಒಟ್ಟಿನಲ್ಲಿ ಮುರದಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕುವ ಆವಶ್ಯಕತೆ ಇದೆ. ಆದ್ದರಿಂದ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದೇವೆ. 
– ನಾರಾಯಣ ರೈ, ಎಸ್‌ಐ, ನಗರ ಸಂಚಾರಿ ಪೊಲೀಸ್‌ ಠಾಣೆ

ಹಂಪ್‌ ಹಾಕುವಂತಿಲ್ಲ
ಬ್ಯಾರಿಕೇಡ್‌ಗಳನ್ನು ಅವೈಜ್ಞಾನಿಕವಾಗಿ ಇಡುವುದರಿಂದ ಅಪಘಾತ ಸಂಭವಿಸಿದ ಉದಾಹರಣೆ ಸಾಕಷ್ಟಿದೆ. ಆದರೆ ಸೂಕ್ತ ಸ್ಥಳದಲ್ಲಿ, ಸಮರ್ಪಕವಾಗಿ ಬ್ಯಾರಿಕೇಡ್‌ಗಳನ್ನು ಇಟ್ಟರೆ ಅಪಘಾತಗಳನ್ನು ತಪ್ಪಿಸಬಹುದು. ಇದೀಗ ಬ್ಯಾರಿಕೇಡ್‌ಗಳನ್ನೇ ತೆರವು ಮಾಡಿದರೆ ಪರ್ಯಾಯ ಏನು? ಹೆದ್ದಾರಿಯಲ್ಲಿ ಹಂಪ್ಸ್‌ ಹಾಕುವಂತಿಲ್ಲ. ಸ್ಟಿಕ್ಕರ್‌ ಗಳಿಗೆ ವಾಹನ ಚಾಲಕರು ಕ್ಯಾರೇ ಎನ್ನುತ್ತಿಲ್ಲ. ಇದೀಗ ಚುನಾವಣೆಯೂ ಸಮೀಪ ಬರುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಶೀಘ್ರ ಪೊಲೀಸ್‌ ಹಾಗೂ ನಗರಸಭೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ.

ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.