57 ವರ್ಷಗಳಲ್ಲೇ ಮೊದಲ ಬಾರಿಗೆ ಸುಳ್ಯಕ್ಕೆ ಮಂತ್ರಿ ಸ್ಥಾನದ ನಿರೀಕ್ಷೆ !

ಸಚಿವ ಸ್ಥಾನ ವಂಚಿತ ವಿಧಾನಸಭಾ ಕ್ಷೇತ್ರ

Team Udayavani, Jul 27, 2019, 5:08 AM IST

v-35

ಸುಳ್ಯ: ವಿಧಾನಸಭಾ ಕ್ಷೇತ್ರ ರಚನೆಯಾಗಿ 57 ವರ್ಷವಾದರೂ ಸುಳ್ಯದಿಂದ ಚುನಾಯಿತರಾದ ಶಾಸಕರಾರಿಗೂ ಇದುವರೆಗೆ ಮಂತ್ರಿಗಿರಿ ಲಭಿಸಿಲ್ಲ! ಪುತ್ತೂರು ವಿಧಾನಸಭಾ ಕ್ಷೇತ್ರದೊಂದಿಗೆ ಸೇರಿದ್ದ ಸುಳ್ಯ ತಾಲೂಕು ಪ್ರತ್ಯೇಕಗೊಂಡು ಹೊಸ ಕ್ಷೇತ್ರವಾದ ಅನಂತರ 14 ಬಾರಿ ಚುನಾವಣೆ ಎದುರಿಸಿದೆ. ಇಲ್ಲಿನ ಜನಪ್ರತಿನಿಧಿಗಳು ಆಡಳಿತ ಪಕ್ಷದ ಸದಸ್ಯರಾಗಿದ್ದರೂ ಅವರಿಗೆ ಗೂಟದ ಕಾರು ಏರುವ ಭಾಗ್ಯ ಸಿಕ್ಕಿಲ್ಲ. ಆದರೆ ಈ ಬಾರಿ ಬಿಜೆಪಿ ಸರಕಾರ ರಚನೆಗೊಂಡಲ್ಲಿ ಮೀಸಲು ಕ್ಷೇತ್ರವಾಗಿರುವ ಸುಳ್ಯವನ್ನು ಸತತ ಆರನೇ ಬಾರಿಗೆ ಪ್ರತಿನಿಧಿಸುತ್ತಿರುವ ಎಸ್‌. ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚು ಅನ್ನುವ ಚರ್ಚೆ ಬಿರುಸು ಪಡೆದಿದೆ. ಎಸ್‌. ಅಂಗಾರ ಅವರು ಜಿಲ್ಲೆಯ ಹಿರಿಯ ಶಾಸಕರಾಗಿರುವುದೂ ಈ ವಾದಕ್ಕೆ ಪುಷ್ಟಿ ನೀಡಿದೆ.

ವಿಧಾನಸಭಾ ಕ್ಷೇತ್ರದ ವಿವರ
1952ರ ಪ್ರಥಮ ಮತ್ತು 1957ರದ್ವಿತೀಯ ಚುನಾವಣೆಗಳಲ್ಲಿ ಸುಳ್ಯವುಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸೇರಿತ್ತು. 1962ರಲ್ಲಿ ಪ್ರತ್ಯೇಕಗೊಂಡು ಹೊಸ ವಿಧಾನಸಭಾ ಕ್ಷೇತ್ರವಾಯಿತು. 1962ರ ಅನಂತರ 14 ಚುನಾವಣೆಗಳು ನಡೆದು 7 ಬಾರಿ ಬಿಜೆಪಿ, 5 ಬಾರಿ ಕಾಂಗ್ರೆಸ್‌, ತಲಾ ಒಂದು ಬಾರಿ ಸ್ವತಂತ್ರ ಪಕ್ಷ ಮತ್ತು ಜನತಾ ಪಕ್ಷದ ಅಭ್ಯರ್ಥಿ ಇಲ್ಲಿ ಗೆಲುವು ಸಾಧಿಸಿದ್ದಾರೆ.

ಸುಳ್ಯವು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮೀಸಲು ಕ್ಷೇತ್ರವಾದುದು 1962ರಲ್ಲಿ. ಆ ಬಳಿಕ ಇಲ್ಲಿಂದಪ್ರಥಮವಾಗಿ ಸ್ವತಂತ್ರ ಪಕ್ಷದ ರಾಮಚಂದ್ರ ಗೆದ್ದರು. ಅನಂತರ ಪಿ.ಡಿ. ಬಂಗೇರ, ಎ. ರಾಮಚಂದ್ರ, ಬಾಕಿಲ ಹುಕ್ರಪ್ಪ, ಕೆ. ಕುಶಲ, ಅಂಗಾರ ಅವರಿಗೆಗೆಲುವು ಲಭಿಸಿತ್ತು. ಎಸ್‌ ಅಂಗಾರ ಗರಿಷ್ಠ ಅವಧಿಯಿಂದ ಶಾಸಕರಾಗಿದ್ದಾರೆ.

ಸುಳ್ಯ ತಾಲೂಕಿನವರಾಗಿ, ಬೇರೆಕ್ಷೇತ್ರದಿಂದ ಗೆದ್ದವರು ಮುಖ್ಯಮಂತ್ರಿ,ಕೇಂದ್ರ-ರಾಜ್ಯದಲ್ಲಿ ಸಚಿವರಾದ ಉದಾಹರಣೆಗಳಿವೆ. ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವವರಿಗೆ ಆ ಭಾಗ್ಯ ಇನ್ನೂ ಸಿಕ್ಕಿಲ್ಲ. ಸುಳ್ಯವು ಪುತ್ತೂರು ವಿಧಾನಸಭಾ ಕ್ಷೇತ್ರದ ಭಾಗವಾಗಿದ್ದಾಗ 1952, 57 ಮತ್ತು 62ರಲ್ಲಿ ಬಾಳುಗೋಡು ನಿವಾಸಿ, ನ್ಯಾಯವಾದಿ ಕೂಜುಗೂಡು ವೆಂಕಟರಮಣ ಗೌಡ 3 ಅವಧಿಗೆ ಶಾಸಕರಾಗಿದ್ದರು. ಆಗ ಅವರಿಗೆ ನಿಜಲಿಂಗಪ್ಪ ಸರಕಾರದಲ್ಲಿ ಉಪ ಸಚಿವ ಸ್ಥಾನದಆಹ್ವಾನ ಬಂದಿತ್ತು. ಆದರೆ ಕ್ಯಾಬಿನೆಟ್ ಸ್ಥಾನ ನಿರೀಕ್ಷೆಯಲ್ಲಿದ್ದ ಗೌಡರು ಅವಕಾಶವನ್ನು ತಿರಸ್ಕರಿಸಿದ್ದರು. ಬಳಿಕ 2008ರ ಬಿಜೆಪಿ ಸರಕಾರದಲ್ಲಿ ಎಸ್‌.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆಯಿದ್ದರೂ ಹುಸಿಯಾಗಿತ್ತು.

ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರ

ಅವಿಭಜಿತ ಜಿಲ್ಲೆಯಲ್ಲಿ ಸುಳ್ಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ. 1987ರಲ್ಲಿ ಅಂಗಾರ ಮೊದಲ ಬಾರಿಗೆ ಸ್ಪರ್ಧಿಸಿ ಕಾಂಗ್ರೆಸ್‌ ಅಭ್ಯರ್ಥಿ ಕೆ. ಕುಶಲ ವಿರುದ್ಧ ಪರಾಜಿತರಾಗಿದ್ದರು. 1994ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ. ಕುಶಲ ವಿರುದ್ಧ ಗೆಲುವು ಪಡೆದಿದ್ದರು. 1999ರಲ್ಲಿ ಮತ್ತೆ ಕಾಂಗ್ರೆಸ್‌ನ ಕುಶಲರ ವಿರುದ್ಧ, 2004, 2008, 2013 ಮತ್ತು 2018ರಲ್ಲಿ ಕಾಂಗ್ರೆಸ್‌ನ ಡಾ| ರಘು ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಸ್ಥಾನಮಾನ ನಿಶ್ಚಿತ

ಬಿಜೆಪಿ ಸರಕಾರ ರಚನೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಚಿವ ಸ್ಥಾನದಂತಹ ಉನ್ನತ ಜವಾಬ್ದಾರಿಯನ್ನು ಪಕ್ಷ ನೀಡುವ ವಿಶ್ವಾಸ ಇದೆ. ಜಿಲ್ಲೆಯ ಹಿರಿಯ ಶಾಸಕರಾಗಿ, ಸತತ ಆರು ಅವಧಿಯಿಂದ ಮೀಸಲು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
– ವೆಂಕಟ ವಳಲಂಬೆಅಧ್ಯಕ್ಷರು, ಬಿಜೆಪಿ ಮಂಡಲ ಸಮಿತಿ, ಸುಳ್ಯ

• ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.