DK: ತ್ಯಾಜ್ಯ ಸಮಸ್ಯೆಗೆ ದ.ಕ. ಜಿಲ್ಲಾಡಳಿತದ ಪರಿಹಾರ ಯೋಜನೆ

ನಗರ ಸ್ಥಳೀಯ ಸಂಸ್ಥೆಯಲ್ಲೂ ಎಂಆರ್‌ಎಫ್‌ ಘಟಕ

Team Udayavani, Oct 1, 2023, 2:21 AM IST

waste 1

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ಯುಕ್ತವಾಗಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣ ಕೇಂದ್ರ (ಮೆಟೀರಿಯಲ್‌ ರಿಕವರಿ ಫೆಸಿಲಿಟಿ-ಎಂಆರ್‌ಎಫ್‌) ಘಟಕ ಗಳನ್ನು ನಿರ್ಮಿಸಲು ಮುಂದಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಯಡಿ ಎಂಆರ್‌ಎಫ್‌ ಘಟಕ ಜಿಲ್ಲೆಯ ಎಡಪದವಿನಲ್ಲಿ ಈಗಾ ಗಲೇ ಕಾರ್ಯಾ ಚರಿಸುತ್ತಿದೆ. ಬಂಟ್ವಾಳ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿಯೂ ಸಿದ್ಧವಾಗು ತ್ತಿದ್ದು ಶೀಘ್ರ ಕಾರ್ಯಾ ರಂಭಿಸಲಿವೆ. ಆದರೆ ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ ಯಾವುದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘಟಕಗಳಿಲ್ಲ.

ಮಂಗಳೂರು ನಗರಕ್ಕೆ ಹತ್ತಿರವಿರುವ ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಸಂಗ್ರಹಿಸಲಾದ ತ್ಯಾಜ್ಯವನ್ನು ಮಹಾನಗರ ಪಾಲಿಕೆಯ ಪಚ್ಚನಾಡಿ ತಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತಿದೆ. ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಟಣ ಪಂಚಾಯತ್‌ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಗಳ ರಚನೆಯಾಗಿಲ್ಲ. ಪ್ರಯತ್ನ ನಡೆಯು ತ್ತಿದ್ದರೂ ಜಮೀನು ಅಂತಿಮವಾಗಿಲ್ಲ. ಇದು ತಾಜ್ಯ ವಿಲೇವಾರಿ ಪ್ರಕ್ರಿಯೆಗೆ ಅಡ್ಡಿಯಾಗಿದ್ದು, ಮನೆ, ಅಂಗಡಿ, ಹೊಟೇಲ್‌ಗ‌ಳ ತ್ಯಾಜ್ಯ ರಸ್ತೆ ಬದಿಯಲ್ಲಿ ಸಂಗ್ರಹಗೊಂಡು ನಗರದ ಸೌಂದರ್ಯಕ್ಕೆ ಅಡ್ಡಿಯಾಗಿದೆ.

ಆದ್ದರಿಂದ ತ್ಯಾಜ್ಯ ವಿಲೇ ವಾರಿ ಮೂಲಕ ಕಸದ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ನಿವಾರಿಸಲು ಉದ್ದೇಶಿ ಸಲಾಗಿದೆ. ಆ ಹಿನ್ನೆಲೆಯಲ್ಲಿ ಕಾರ್ಕಳ ನಿಟ್ಟೆಯಲ್ಲಿರುವ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ರಾಜ್ಯದ ಮೊದಲ ಎಂಆರ್‌ಎಫ್‌ ಘಟಕಕ್ಕೆ ಅಧಿಕಾರಿಗಳು, ಎಂಜಿನಿಯರ್‌ಗಳು ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಬಳಿಕ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳಲ್ಲಿ ಸಂಗ್ರಹವಾಗುವ ತಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ಘಟಕ ನಿರ್ಮಾಣವಾಗಲಿದೆ.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿದೆ

ಉಡುಪಿ ಜಿಲ್ಲೆಯಲ್ಲಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಮಿನಿ ಎಂಆರ್‌ಎಫ್‌ಗಳನ್ನು ನಿರ್ಮಿಸಿ ಘನ ತ್ಯಾಜ್ಯವನ್ನು ವ್ಯವಸ್ಥಿತವಾಗಿ ವಿಲೇವಾರಿ ಮಾಡಲಾಗುತ್ತಿದೆ. ಪ್ರಸ್ತುತ ಸ್ವಸಹಾಯ ಸಂಘಗಳ ಮೂಲಕ 7 ಘಟಕಗಳು ಕಾರ್ಯಾಚರಿಸುತ್ತಿವೆ. ಉಡುಪಿ ನಗರಸಭೆ ಹೊರತು ಪಡಿಸಿ ಬೇರೆ ಪುರಸಭೆ, ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಎಂಆರ್‌ಎಫ್‌ ಘಟಕಗಳಿಲ್ಲ ಎಂದು ಪೌರಾಯುಕ್ತ ರಾಯಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎಂಆರ್‌ಎಫ್‌ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಕಾರ್ಕಳ ನಿಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಘಟಕ್ಕೆ ಎಂಜಿನಿಯರ್‌ಗಳು, ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆಯನ್ನು ಅವಲೋಕಿಸಲಿದ್ದಾರೆ. ಜಾಗದ ಲಭ್ಯತೆ, ಅನುದಾನ ಮೊದಲಾದವುಗಳನ್ನು ಅವಲಂಬಿಸಿ ಘಟಕ ನಿರ್ಮಿಸಲಾಗುವುದು.
– ಅಭಿಷೇಕ್‌ ವಿ., ಯೋಜನಾ ನಿರ್ದೇಶಕರು, ದ.ಕ. ಜಿಲ್ಲಾ ನಗರಾಭಿವೃದ್ಧಿ ಕೋಶ

 ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.