ಮಲವಂತಿಗೆ: ಕಾಡಾನೆ ದಾಳಿ, ಕೃಷಿ ಹಾನಿ
Team Udayavani, Apr 22, 2018, 11:01 AM IST
ಬೆಳ್ತಂಗಡಿ: ಕಾಡಾನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಮಾಡಿರುವ ಘಟನೆ ಗುರುವಾರ ರಾತ್ರಿ ಮಲವಂತಿಗೆ ಗ್ರಾ.ಪಂ. ವ್ಯಾಪ್ತಿಯ ಆವರನಂದಿ ಕಾಡಿನ ಬಳಿ ನಡೆದಿದೆ.
ಗುರುವಾರ ರಾತ್ರಿ ಮಳೆ ಸುರಿಯುತ್ತಿದ್ದು, 3 ಕಾಡಾನೆಗಳು ಹಾಗೂ ಒಂದು ಮರಿಯಾನೆ ಚಂದಪ್ಪ ಮಲೆಕುಡಿಯ ಅವರ ತೋಟಕ್ಕೆ ನುಗ್ಗಿದ್ದು, 70ಕ್ಕೂ ಹೆಚ್ಚು ಫಸಲಿಗೆ ಬಂದ ಅಡಿಕೆ, 5 ತೆಂಗು ಹಾಗೂ ಬಾಳೆ ಗಿಡಗಳನ್ನು ನಾಶಪಡಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾರ್ಮಾಡಿ, ಭೈರತ್ತಿ, ಕುದುರೆಮುಖ ರಕ್ಷಿತಾರಣ್ಯ ಭಾಗದಲ್ಲಿ ಆನೆಗಳು ಓಡಾಡುತ್ತಿದ್ದು, ಆಗಾಗ ಕಡಿರುದ್ಯಾವರ, ಎಳನೀರು ಮೊದಲಾದೆಡೆ ದಾಳಿ ಮಾಡುತ್ತಿವೆ. 3 ತಿಂಗಳ ಹಿಂದೆಯಷ್ಟೇ ಇಲ್ಲಿ ಕಾಡಾನೆಗಳು ದಾಳಿ ಮಾಡಿದ್ದವು.
ಪ್ರಸ್ತುತ ಅವು ಸಮೀಪದ ಕಾಡಿಗೆ ಹಿಂದಿರುಗಿದ್ದು, ಮತ್ತೆ ಆಗಮಿಸುವ ಭಯದಲ್ಲಿ ಸಾರ್ವಜನಿಕರಿದ್ದಾರೆ. ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು