ಕಿದು ಕೇಂದ್ರದ ಬೆನ್ನು ಬಿಟ್ಟಿಲ್ಲ ಸ್ಥಳಾಂತರ ಭೂತ!

ವಿದ್ಯುತ್‌ ಕಡಿತಗೊಳಿಸುವಂತೆ ಮೆಸ್ಕಾಂಗೆ ಅರಣ್ಯ ಇಲಾಖೆ ಪತ್ರ

Team Udayavani, Sep 9, 2019, 5:44 AM IST

0809SUB3C

ಸುಬ್ರಹ್ಮಣ್ಯ: ಕಿದುವಿನ ಅಂತಾರಾಷ್ಟ್ರೀಯ ತೆಂಗು ಅಭಿವೃದ್ಧಿ ಕೇಂದ್ರದ ಭವಿಷ್ಯ ಮತ್ತೆ ತೂಗುಯ್ಯಾ ಲೆಯಲ್ಲಿದೆ. ಇಲ್ಲಿಗೆ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸುವಂತೆ ಕೋರಿ ಮೆಸ್ಕಾಂಗೆ ಅರಣ್ಯ ಇಲಾಖೆ ಪತ್ರ ನೀಡಿದ್ದು, ಸಂಶೋಧನ ಕೇಂದ್ರಕ್ಕೆ ಮೆಸ್ಕಾಂನ ಸೂಚನ ಪತ್ರ ಸೆ. 6ರಂದು ತಲುಪಿದೆ.

ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಯಿಂದ ಮೆಸ್ಕಾಂ ಪುತ್ತೂರು ವಿಭಾಗಕ್ಕೆ ಆ. 31ರಂದು ಪತ್ರ ಬರೆದಿದ್ದು, ಕಿದು ಕೇಂದ್ರವು ಲೀಸ್‌ ಪಡೆದ ಭೂಮಿಯ ಸಂಬಂಧ ಅರಣ್ಯ ಇಲಾಖೆಗೆ ಪಾವತಿಸಲು ಬಾಕಿ ಇರಿಸಿರುವ ಮೊತ್ತವನ್ನು ಉಲ್ಲೇಖೀಸಲಾಗಿದೆ. ಈ ಸಂಬಂಧ ಅದು ಕೇಂದ್ರದ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸುವಂತೆ ಮೆಸ್ಕಾಂಗೆ ಸೂಚಿಸಿದೆ.

1972ರಲ್ಲಿ ಕಿದು ರಕ್ಷಿತಾರಣ್ಯದಲ್ಲಿ 300 ಎಕರೆ ಭೂಮಿಯನ್ನು ಅರಣ್ಯ ಇಲಾಖೆಯಿಂದ 30 ವರ್ಷಗಳ ಅವಧಿಗೆ ಲೀಸಿಗೆ ಪಡೆದು ಸಂಶೋಧನ ಉಪಕೇಂದ್ರವನ್ನು ಸ್ಥಾಪಿಸಲಾಗಿತ್ತು. ಲೀಸ್‌ ಅವಧಿ 2000ನೇ ಇಸವಿಗೆ ಮುಗಿದಿತ್ತು. ಈ ಭೂಮಿಯನ್ನು ಮರಳಿ ಪಡೆಯಬೇಕು ಎಂಬ ಸುಪ್ರೀಂ ಕೋರ್ಟ್‌ ಆದೇಶದಂತೆ ಅರಣ್ಯ ಇಲಾಖೆ ಈ ಹಿಂದೆ ನೋಟಿಸ್‌ ಜಾರಿಗೊಳಿಸಿತ್ತು. ಲೀಸ್‌ ಅವಧಿ ಮುಗಿದಿದ್ದರೂ ನವೀಕರಿಸದೆ, ಮೊತ್ತವನ್ನೂ ಬಾಕಿ ಇರಿಸಿರುವುದರಿಂದ ಅರಣ್ಯ ಭೂಮಿ ಯನ್ನು ಹಿಂಪಡೆಯುವುದಾಗಿ ಅರಣ್ಯ ಇಲಾಖೆ ತಿಳಿಸಿತ್ತು. ಜಾಗ ಮರಳಿಸುವುದು ಅಥವಾ ಬದಲಾಗಿ 300 ಎಕರೆ ಖಾಲಿ ಜಾಗ ದಲ್ಲಿ ಅರಣ್ಯ ಬೆಳೆಸಲು ತಗಲುವ 12 ಕೊ.ರೂ. ಭರಿಸಿ ಮತ್ತೆ 30 ವರ್ಷಗಳ ಅವಧಿಗೆ ಲೀಸ್‌ ಮುಂದುವರಿಸಲು ಅವಕಾಶ ಕಲ್ಪಿಸಿತ್ತು.

ಎಚ್ಚರಿಸಿದ್ದ ‘ಉದಯವಾಣಿ’ ವರದಿ
ಲೀಸಿನ ಅವಧಿ ಮುಗಿದಿದ್ದರೂ ಸಿಪಿಸಿಆರ್‌ಐಯ ಹಿರಿಯ ಅಧಿಕಾರಿಗಳು ಭೂಮಿ ನವೀಕರಣಕ್ಕೆ ಆಸಕ್ತಿ ತೋರದೆ, ಆಂಧ್ರಕ್ಕೆ ಸ್ಥಳಾಂತರಿಸುವ ಹುನ್ನಾರ ನಡೆಸಿದ್ದ ಬಗ್ಗೆ ‘ಉದಯವಾಣಿ’ ವರದಿ ಪ್ರಕಟಿಸಿತ್ತು. ಬಳಿಕ ಸ್ಥಳೀಯರು, ಕೃಷಿಕರು ಎಚ್ಚೆತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು. ಕೇಂದ್ರ ಸರಕಾರದ ಮಟ್ಟದಲ್ಲೂ ಕೇಂದ್ರ ಸ್ಥಳಾಂತರಿಸದಂತೆ ಪ್ರಯತ್ನಗಳು ನಡೆದಿದ್ದವು.

ಆದರೂ ಮುಚ್ಚುಗಡೆ ಆತಂಕ ದೂರವಾಗಿಲ್ಲ. ಲೀಸ್‌ ನವೀಕರಣ, ಶುಲ್ಕ ಭರಿಸುವ ಪ್ರಕ್ರಿಯೆಗಳು ನನೆಗುದಿಗೆ ಬಿದ್ದಿವೆ. ಸರಕಾರದ ಮಟ್ಟದಲ್ಲಿ ನಿರೀಕ್ಷಿತ ಬೆಳವಣಿಗೆ ನಡೆಯದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹೆಚ್ಚುತ್ತಿದೆ. ಹೀಗಾಗಿ ಅದು ಒಂದೊಂದೇ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ.

ಮಾಹಿತಿ ನೀಡಿದ್ದೇವಷ್ಟೆ
ಅರಣ್ಯ ಇಲಾಖೆಯಿಂದ ಪತ್ರ ಬಂದದ್ದು ನಿಜ. ಅದರ ಮಾಹಿತಿಯನ್ನು ಕೇಂದ್ರಕ್ಕೆ ತಲುಪಿಸಿದ್ದೇವೆ.– ನರಸಿಂಹ, ಇ.ಇ., ಮೆಸ್ಕಾಂ ಪುತ್ತೂರು ಉಪ ವಿಭಾಗ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.