ಗುಂಡ್ಯ: ಅರಣ್ಯ ಸಚಿವರ ಭೇಟಿ
Team Udayavani, Jun 26, 2018, 3:02 PM IST
ಉಪ್ಪಿನಂಗಡಿ/ ನೆಲ್ಯಾಡಿ: ರಾಜ್ಯ ಅರಣ್ಯ ಸಚಿವ ಆರ್. ಶಂಕರ್ ಸೋಮವಾರ ಸಂಜೆ ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಗುಂಡ್ಯ ಅರಣ್ಯ ಇಲಾಖಾ ಪ್ರವಾಸಿ ಧಾಮಕ್ಕೆ ಭೇಟಿ ನೀಡಿ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದರು.
ಸಚಿವರು ತಮ್ಮ ಭೇಟಿಯ ಸ್ಮರಣಾರ್ಥ ಪ್ರವಾಸಿ ಧಾಮದ ಪರಿಸರದಲ್ಲಿ ಸಸಿಯೊಂದನ್ನು ನೆಟ್ಟು ನೀರೆರೆದರು. ಮಂಗಳೂರು ಜಿಲ್ಲಾ ಅರಣ್ಯಾಧಿಕಾರಿ ಡಾ| ಕರಿಕಲನ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಇ.ಡಿ. ಕಮಲಾ ಕರಿಕಲನ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಡಿಎಂ ಕಿಶೋರ್ ಕುಮಾರ್ ಹಾಗೂ ಹೂವಯ್ಯ, ಪುತ್ತೂರು ಎಸಿಎಫ್ ಸುಬ್ರಹ್ಮಣ್ಯ ರಾವ್, ಸುಳ್ಯ ಎಸಿಎಫ್ ಜಗನ್ನಾಥ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಸಂಧ್ಯಾ ಸಚಿವರನ್ನು ಎದುರುಗೊಂಡರು.
ದ.ಕ. ಜಿಲ್ಲಾ ಅರಣ್ಯದ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ಕಾಡಾನೆಗಳ ಹಾವಳಿ ಬಗ್ಗೆಯೂ ಅಧಿಕಾರಿಗಳೊಂದಿಗೆ ವಿಚಾರ ವಿಮರ್ಶೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು