ದುರಸ್ತಿ ಮರೆತರು, ಶಿಲಾನ್ಯಾಸ ಮಾಡಿ ಕೈಬಿಟ್ಟರು!


Team Udayavani, Nov 12, 2018, 10:39 AM IST

12-november-3.gif

ಸುಳ್ಯ: ಒಂದು ಹೊಳೆಯ ಎರಡು ಕರುಣಾಜನಕ ಕಥೆಗಳು; ಒಂದೆಡೆ 10 ವರ್ಷಗಳಿಂದ ಪಾಳುಬಿದ್ದಿರುವ ಹಾಗೂ ಇನ್ನೊಂದೆಡೆ ಎರಡು ವರ್ಷಗಳಿಂದ ಗುದ್ದಲಿ ಪೂಜೆ ಆಗಿದ್ದರೂ ಕಾಮಗಾರಿ ಆರಂಭವಾಗದ ಕಿಂಡಿ ಅಣೆಕಟ್ಟಿನ ಬಗ್ಗೆ ಇಲಾಖೆ, ಜನಪ್ರತಿನಿಧಿಗಳು ತಳೆದ ನಿರ್ಲಕ್ಷ್ಯದ ಉದಾಹರಣೆಯಿದು.

ಪೆರುವಾಜೆ ಗ್ರಾ.ಪಂ. ವ್ಯಾಪ್ತಿಯ ಪೆರುವಾಜೆ ಗ್ರಾಮದಲ್ಲಿ ಹರಿಯುವ ಗೌರಿ ಹೊಳೆಯಲ್ಲಿ ಬೇಸಗೆ ಕಾಲದಲ್ಲಿ ನೀರಿನ ಆಧಾರಕ್ಕೆಂದು ಅಡ್ಯತಕಂಡ ಎಂಬಲ್ಲಿ ಕಟ್ಟಲಾದ ಹಾಗೂ ಚೆನ್ನಾವರ ಎಂಬಲ್ಲಿ ಕಟ್ಟಲು ಉದ್ದೇಶಿಸಿದ ಎರಡು ಕಿಂಡಿ ಅಣೆಕಟ್ಟುಗಳು ಅಪೂರ್ಣವಾಗಿರುವ ಕಥೆ. ಇದರಿಂದ ಈ ಬೇಸಗೆಯಲ್ಲೂ ಹನಿ ನೀರಿಗೆ ಈ ಭಾಗದ ಜನರ ಪರದಾಟ ಮುಂದುವರಿಯಲಿದೆ.

ಎರಡು ಕಟ್ಟ ಅಪೂರ್ಣ!
ಅಡ್ಯತಕಂಡ ಬಳಿ ನಿರ್ಮಾಣಗೊಂಡಿದ್ದ ಕಿಂಡಿ ಅಣೆಕಟ್ಟು ಕುಸಿದು ಬರೋಬ್ಬರಿ 10 ವರ್ಷಗಳೇ ಕಳೆದಿವೆ. 1999ರಲ್ಲಿ ನಿರ್ಮಿಸಿದ ಈ ಕಟ್ಟ 2008ರಲ್ಲಿ ನಿರುಪಯುಕ್ತ ಸ್ಥಿತಿಗೆ ತಲುಪಿತ್ತು. ಹಲವು ಕುಟುಂಬಗಳ ಕೃಷಿ ಭೂಮಿ ಮತ್ತು ಕುಡಿಯುವ ನೀರಿಗೆ ನೀರಾವರಿ ಮೂಲವಾಗಿದ್ದ ಈ ಕಟ್ಟ ಪುನರುಜ್ಜೀವನಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರೂ ಸಣ್ಣ ನೀರಾವರಿ ಇಲಾಖೆ, ಕ್ಷೇತ್ರದ ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಹೀಗಾಗಿ ಸಂಗ್ರಹಿಸಿಟ್ಟಿರುವ ಲಕ್ಷಾಂತರ ರೂ. ಮೌಲ್ಯದ ಹಲಗೆಗಳು ಗೆದ್ದಲು ಹಿಡಿದು ಹಾಳಾಗಿವೆ. ತಡೆಗೋಡೆ, ಪಿಲ್ಲರ್‌ ನಿರ್ವಹಣೆಯಿಲ್ಲದೆ ಶಿಥಿಲಗೊಂಡಿವೆ.

ಹೊಸ ಕಟ್ಟಕ್ಕೆ ಶಿಲಾನ್ಯಾಸ
ಅಡ್ಯತಕಂಡ ಕುಸಿದ ಅಣೆಕಟ್ಟಿನಿಂದ 1 ಕಿ.ಮೀ.ಮೇಲ್ಭಾಗದ ಚೆನ್ನಾವರ ಸೇತುವೆ ಬಳಿ ಹೊಸ ಅಣೆಕಟ್ಟು ನಿರ್ಮಾಣಕ್ಕೆ ಎರಡು ವರ್ಷಗಳ ಹಿಂದೆ ಗುದ್ದಲಿಪೂಜೆ ಮಾಡಲಾಗಿತ್ತು. ಸಣ್ಣ ನೀರಾವರಿ ಇಲಾಖೆ ವತಿಯಿಂದ ನಿರ್ಮಾಣ ಆಗಲಿರುವ ಕಾಮಗಾರಿಗೆ ಶಾಸಕ ಅಂಗಾರ ಶಿಲಾನ್ಯಾಸ ನೆರವೇರಿಸಿದ್ದರು. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಸ್ಥಳದಲ್ಲಿದ್ದ ಇಲಾಖೆ ಎಂಜಿನಿಯರ್‌ ಜನರಿಗೆ ಭರವಸೆ ನೀಡಿದ್ದರು. ಅದಾಗಿ ಈ ಬೇಸಗೆಗೆ ಎರಡು ವರ್ಷಗಳು ಆಗುತ್ತಿವೆ. ಕಾಮಗಾರಿ ಆರಂಭಗೊಳ್ಳುವ ಕಾಣುತ್ತಿಲ್ಲ.

ಶಿಲಾನ್ಯಾಸದ ಮೊದಲು ತಾತ್ಕಾಲಿಕ ಮಣ್ಣಿನ ಕಟ್ಟ ಹಾಕಿ ಹೊಳೆ ನೀರು ಸಂಗ್ರಹಿಸುತ್ತಿದ್ದರೂ ಹೊಸ ಅಣೆಕಟ್ಟಿನ ಶಿಲಾನ್ಯಾಸ ನಂಬಿ, ತಾತ್ಕಾಲಿಕ ಕಟ್ಟ ಹಾಕಿಲ್ಲ. ಹೊಸ ಕಟ್ಟದ ಸದ್ಯದ ಸ್ಥಿತಿ ಕಂಡಾಗ, ಮತ್ತೆ ಮಣ್ಣಿನ ಕಟ್ಟವೇ ಗತಿ ಎನ್ನುತ್ತಾರೆ ಸ್ಥಳೀಯರಾದ ವೆಂಕಟರಮಣ, ಕಾರ್ತಿಕ್‌.

40 ಕೋಟಿ ರೂ.!
ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆಂದು ಜಲಾನಯನ ಇಲಾಖೆಗೆ 40 ಕೋಟಿ ರೂ. ಅನುದಾನ ಬಂದಿದೆ. ಈ ಬಗ್ಗೆ ನಮ್ಮಲ್ಲಿ ಅಂಕಿ ಅಂಶ ಇದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ಪದಾಧಿಕಾರಿಗಳು. ಹಾಗಿದ್ದರೆ ಆ ಅನುದಾನ ಏನಾಯಿತು? ಯಾವುದಕ್ಕೆ ವಿನಿಯೋಗ ಆಗುತ್ತಿದೆ ಎಂಬ ಪ್ರಶ್ನೆ ಎದ್ದಿದೆ. ಶಿಲಾನ್ಯಾಸ ಹೆಸರಿನಲ್ಲಿ ದುರ್ಬಳಕೆ ಆಗುತ್ತಿದೆಯೇ ಎಂಬ ಸಂಶಯವು ಕಾಡಿದೆ.

ಅಂತರ್ಜಲಕ್ಕೆ ಅಪಾಯ ಎಚ್ಚೆತ್ತುಕೊಳ್ಳದ ಇಲಾಖೆ
ಎಲ್ಲ ಸ್ತರದ ಪಂಚಾಯತ್‌ ಆಡಳಿತಗಳು ಅಂತರ್ಜಲದ ಸಂರಕ್ಷಣೆಗೆ ಕಿಂಡಿ ಅಣೆಕಟ್ಟಿಗೆ ಒತ್ತು ನೀಡಬೇಕು ಎಂಬ ಬಗ್ಗೆ ಅಭಿಯಾನ, ಜಾಗೃತಿ ಕಾರ್ಯಕ್ರಮ ನಡೆಸುತ್ತಿವೆ. ಅದು ಕಾರ್ಯರೂಪಕ್ಕೆ ಬರುತ್ತಿಲ್ಲ ಅನ್ನುವುದಕ್ಕೆ ಈ ಎರಡು ಅಣೆಕಟ್ಟುಗಳೇ ಸಾಕ್ಷಿ. ಉದ್ಯೋಗ ಖಾತರಿ ಯೋಜನೆ ಅಥವಾ ಇತರೆ ಅನುದಾನ ಬಳಸಿ ಕಿಂಡಿ ಅಣೆಕಟ್ಟು ನಿರ್ಮಿಸಿದ್ದಲ್ಲಿ, ದಲಿತರು ಸಹಿತ ನೂರಾರು ಕುಟುಂಬಗಳಿಗೆ ಕುಡಿಯಲು, ಕೃಷಿ ಭೂಮಿಗೆ ಮತ್ತು ಅಂತರ್ಜಲ ವೃದ್ಧಿಗೆ ಪೂರಕ ಆಗುತ್ತಿದ್ದರೂ ಸಂಬಂಧಪಟ್ಟವರು ಮನಸ್ಸು ಮಾಡುತ್ತಿಲ್ಲ.

ತತ್‌ ಕ್ಷಣ ಕ್ರಮ
ಈ ಎರಡು ಕಿಂಡಿ ಅಣೆಕಟ್ಟುಗಳ ಕುರಿತಂತೆ ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆದು, ತತ್‌ಕ್ಷಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಂತರ್ಜಲದ ಸಂರಕ್ಷಣೆ ದೃಷ್ಟಿಯಲ್ಲಿ ಈ ಬಾರಿ ಹೊಸದಾಗಿ ಅಣೆಕಟ್ಟು ನಿರ್ಮಾಣದ ಗುರಿ ಹೊಂದಲಾಗಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಬಗೆಹರಿಸುವ ಪ್ರಯತ್ನ ಮಾಡಲಾಗುವುದು.
– ಸೆಲ್ವಮಣಿ
ಸಿಇಒ, ಜಿ.ಪಂ., ಮಂಗಳೂರು

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.