ಪರಪು-ಕೊಯ್ಯೂರು ರಸ್ತೆಗೆ ಶಿಲಾನ್ಯಾಸ
Team Udayavani, Mar 2, 2018, 1:38 PM IST
ಬೆಳ್ತಂಗಡಿ: ಜನರ ಒತ್ತಾಯದ ಮೇರೆಗೆ 1.10 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ವಸಂತ ಬಂಗೇರ ತಿಳಿಸಿದರು. ಅವರು ಗುರುವಾರ ಪರಪ್ಪು – ಕೊಯ್ಯೂರು ರಸ್ತೆ ಕಾಮಗಾರಿಗೆ ಪರಪ್ಪು ಹಾಗೂ ಎರಕಡಪ್ಪು ಎಂಬಲ್ಲಿ ಚಾಲನೆ ನೀಡಿ ಮಾತನಾಡಿದರು.
ಈ ಬಾರಿ ಪ್ಯಾಚ್ವರ್ಕ್ ಮಾಡಿ, ಡಾಮರು ನಡೆಸಲಾಗುವುದು. ಬಳಿಕ ಈ ರಸ್ತೆ ಮೇಲ್ದರ್ಜೆಗೇರಲಿದೆ. ಸರಕಾರದ ಹಣವನ್ನು ಯಾರೂ ದುರುಪಯೋಗ ಮಾಡಬಾರದು. ಸ್ಥಳೀಯವಾಗಿ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿಭಟನಕಾರರಿಗೆ ತರಾಟೆ
ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಅಭಿವೃದ್ಧಿ ಮಾಡುವುದಾಗಿ ಸ್ಥಳಕ್ಕೆ ಆಗಮಿಸಿ ತಿಳಿಸಿದ್ದರೂ ಉದ್ದೇಶಪೂರ್ವಕವಾಗಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ನಡೆಸಿದವರು ಈಗ ಅಭಿವೃದ್ಧಿ ಕಾರ್ಯನಡೆಸುವಾಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.
ಸುದಿನ ಫಲಶ್ರುತಿ
ಸುಮಾರು 7 ವರ್ಷಗಳಿಂದ ರಸ್ತೆ ದುರವಸ್ಥೆಯಿಂದ ಕೂಡಿದ್ದು, ಈ ಬಗ್ಗೆ ಸುದಿನದಲ್ಲಿ ವರದಿ ಪ್ರಕಟಿಸಿ ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿತ್ತು.
ಸ್ಥಳದಲ್ಲಿ ಜಿ.ಪಂ. ಮಾಜಿ ಸದಸ್ಯ ಸುಂದರ ಗೌಡ ಇಚ್ಚಿಲ, ಗ್ರಾ.ಪಂ. ಅಧ್ಯಕ್ಷ ಶರತ್ ಕುಮಾರ್, ತಾಪಂ ಸದಸ್ಯ ಪ್ರವೀಣ್ ಕುಮಾರ್, ವಕ್ಫ್ ಬೋರ್ಡ್ ಸದಸ್ಯ ಕರೀಂ, ಸ್ಥಳೀಯ ಗ್ರಾ.ಪಂ. ಸದಸ್ಯರು ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ