ಸಿದ್ಧರಾಮಯ್ಯ ಹೆಸರು ಬಳಸಿ ವಂಚನೆ
Team Udayavani, Aug 7, 2022, 2:06 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೆಕ್ಷನ್ ಆಫೀಸರ್ ಎಂದು ನಂಬಿಸಿ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳಾ ಹೋಂಗಾರ್ಡ್ ಹಾಗೂ ಅವರ ಸ್ನೇಹಿತರಿಂದ 11.80 ಲಕ್ಷ ರೂ. ಪಡೆದು ವಂಚಿಸಿದ ಆರೋಪಿ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಹೋಂಗಾರ್ಡ್ ಆಗಿರುವ ಲಕ್ಷ್ಮಮ್ಮ ಕೊಟ್ಟ ದೂರಿನ ಆಧಾರದ ಮೇಲೆ ಆರೋಪಿ ಪ್ರಕಾಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಕ್ಷ್ಮಮ್ಮ ಅವರಿಗೆ ಕಳೆದ 4 ತಿಂಗಳ ಹಿಂದೆ ಪ್ರಕಾಶ್ ಪರಿಚಯವಾಗಿದ್ದ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ವಿಧಾನಸೌಧದಲ್ಲಿ ಸೆಕ್ಷನ್ ಆಸರ್ ಆಗಿ ಕೆಲಸ ಮಾಡಿಕೊಂಡಿರುತ್ತೇನೆ ಎಂದು ಪ್ರಕಾಶ್ ತನ್ನನ್ನು ಪರಿಚಯಿಸಿಕೊಂಡಿದ್ದ.
6 ಲಕ್ಷ ರೂ. ಕೊಟ್ಟರೆ ನಿಮ್ಮ ಪುತ್ರನಿಗೆ ಸರ್ಕಾರಿ ಡಿ ಗ್ರೂಪ್ ಕೆಲಸ ಕೊಡಿಸುವುದಾಗಿ ಪ್ರಕಾಶ್ ಭರವಸೆ ನೀಡಿದ್ದ. ಅದರಂತೆ ಲಕ್ಷ್ಮಮ್ಮ ಆತನಿಗೆ 6 ಲಕ್ಷ ರೂ. ಕೊಟ್ಟಿದ್ದಳು. ಈ ವಿಚಾರವನ್ನು ಲಕ್ಷ್ಮಮ್ಮ ತನ್ನ ಸ್ನೇಹಿತೆ ಚೆನ್ನಮ್ಮನಿಗೂ ತಿಳಿಸಿದ್ದಳು. ಪ್ರಕಾಶ್ನನ್ನು ಸಂಪರ್ಕಿಸಿದ ಚೆನ್ನಮ್ಮ ನನ್ನ ಮಗನಿಗೂ ಸರ್ಕಾರಿ ಕೆಲಸ ಕೊಡಿಸುವಂತೆ 3 ಲಕ್ಷ ರೂ. ಕೊಟ್ಟಿದ್ದರು. ಇದಾದ ಬಳಿಕ ಲಕ್ಷ್ಮಮ್ಮ ಅವರ ಪತಿಯ ಸಹೋದರಿ ಮಗನಿಗೂ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಪ್ರಕಾಶ್, ಅವರಿಂದ 2.80 ಲಕ್ಷ ರೂ. ಪಡೆದಿದ್ದ. ಇದಾದ ಬಳಿಕ ಕೆಲ ತಿಂಗಳುಗಳೇ ಕಳೆದರೂ ಪ್ರಕಾಶ್ ಕೆಲಸ ಕೊಡಿಸಿರಲಿಲ್ಲ. ಲಕ್ಷ್ಮಮ್ಮ ತಾವು ಕೊಟ್ಟ ಹಣ ಹಿಂತಿರುಗಿಸುವಂತೆ ಸೂಚಿಸಿದ್ದರು.
ಮತ್ತೆ ಪ್ರಕಾಶ್ಗೆ ಕರೆ ಮಾಡಿದಾಗ ಆತನ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ದೂರಿನಲ್ಲಿ ಲಕ್ಷ್ಮಮ್ಮ ಉಲ್ಲೇಖೀಸಿದ್ದಾಳೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಪ್ರಕಾಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಆತ ಎಷ್ಟು ಜನರಿಗೆ ವಂಚಿಸಿದ್ದಾನೆ ಎಂಬುದು ಬೆಳಕಿಗೆ ಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ