ಮಂಗಳೂರು: ಭೂಖರೀದಿ ನೆಪದಲ್ಲಿ ಬಜಪೆಯ ವೃದ್ಧೆಗೆ 60 ಲ.ರೂ.ಗೂ ಮಿಕ್ಕಿ ವಂಚನೆ


Team Udayavani, May 5, 2022, 9:15 PM IST

Untitled-1

ಸಾಂದರ್ಭಿಕ ಚಿತ್ರ

ಮಂಗಳೂರು: ವೃದ್ಧೆಯೊಬ್ಬರ ಭೂಮಿ ಮಾರಾಟಕ್ಕೆ ನಕಲಿ ದಾಖಲೆ ಸೃಷ್ಟಿಸಿ 60 ಲ.ರೂಪಾಯಿಗೂ ಅಧಿಕ ವಂಚನೆ ಎಸಗಿದ ಬಗ್ಗೆ ನಗರದ ಸೈಬರ್‌ ಹಾಗೂ ಆರ್ಥಿಕ ಅಪರಾಧಗಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು ಮೂಲದ, ಪ್ರಸ್ತುತ ಬಜಪೆ ಬಳಿಯ ಕೊಂಪದವಿನಲ್ಲಿ ವಾಸವಾಗಿರುವ ಕ್ರಿಸ್ಟಿನ್‌ ಎಡ್ವಿನ್‌ ಜೋಸೆಫ್ ಗೊನ್ಸಾಲ್ವಿಸ್‌ (84) ಎಂಬವರು ವಂಚನೆಗೊಳಗಾದವರು.

ನಕಲಿ ದಾಖಲೆ ಸೃಷ್ಟಿಸಿ, ನಕಲಿ ಸಹಿ ಮಾಡಿ ವಂಚಿಸಿದ ಉಡುಪಿಯ ಅಶೋಕ್‌ ಕುಮಾರ್‌, ರೇಷ್ಮಾ ವಾಸುದೇವ ನಾಯಕ್‌ ಮತ್ತು ರಾಮ ಪೂಜಾರಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಕ್ರಿಸ್ಟಿನ್‌ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕ್ಸಿತೆಗೆಂದು ಮಂಗಳೂರಿಗೆ ಬಂದು ವಾಸವಾಗಿದ್ದರು. ಅವರಿಗೆ ಉಡುಪಿ ಜಿಲ್ಲೆ ಮೂಡುತೋನ್ಸೆ ಗ್ರಾಮದಲ್ಲಿ 77 ಸೆಂಟ್ಸ್‌ ಭೂಮಿ ಇದ್ದು, ಮಾರಬಯಸಿದ್ದರು. ಈ ವಿಚಾರವನ್ನು ತಮ್ಮ ಪರಿಚಯದ ರಾಮ ಪೂಜಾರಿಗೆ ತಿಳಿಸಿದ್ದರು. ಅಶೋಕ್‌ ಕುಮಾರ್‌ ಮತ್ತು ರೇಷ್ಮಾ ನಾಯಕ್‌ ಎನ್ನುವವರು ಜಮೀನು ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂದು ರಾಮಪೂಜಾರಿ ಅವರಿಬ್ಬರನ್ನು ಕರೆತಂದಿದ್ದರು. ಮಾತುಕತೆ ಬಳಿಕ ಸೆಂಟ್ಸ್‌ಗೆ 2,27,275 ರೂ.ನಂತೆ ಹಣ ನೀಡಲು ಒಪ್ಪಿದ್ದರು.

ಮಾ.3ರಂದು ಮಾರಾಟದ ಬಗ್ಗೆ ಕರಾರುಪತ್ರ ಮಾಡಲಾಗಿತ್ತು. ಆ ಸಂದರ್ಭ ಮುಂಗಡವಾಗಿ ಚೆಕ್‌ ಮೂಲಕ 30 ಲಕ್ಷ ರೂ. ನೀಡಿದ್ದು, ಉಳಿದ ಹಣವನ್ನು 6 ತಿಂಗಳೊಳಗೆ ಕೊಟ್ಟು ಕ್ರಯಪತ್ರ ರಿಜಿಸ್ಟರ್‌ ಮಾಡಿಸಿಕೊಳ್ಳುವುದಾಗಿ ತಿಳಿಸಿದ್ದರು.

ಇದಾದ ನಂತರ ಖರೀದಿದಾರರು ತಮ್ಮಲ್ಲಿ ಹಣದ ಕೊರತೆ ಇರುವುದರಿಂದ ಮೊದಲು 40 ಸೆಂಟ್ಸ್‌ ನೋಂದಣಿ ಮಾಡಿಸಿ ಹಣ ನೀಡಿ, ಉಳಿದ 37 ಸೆಂಟ್ಸ್‌ ಮೊತ್ತ ಹೊಂದಾಣಿಕೆ ಆದ ಬಳಿಕ ನೋಂದಣಿ ಮಾಡಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಅದರಂತೆ 40 ಸೆಂಟ್ಸ್‌ಗೆ ಸಂಬಂಧಿಸಿದ ದಸ್ತಾವೇಜು ತಯಾರು ಮಾಡಿ, ದಾಖಲೆಗಳಿಗೆ ಸಹಿ ಮಾಡಿಸಿಕೊಂಡಿದ್ದಾರೆ. ನಂತರ ಎಡ್ವಿನ್‌ ಅವರನ್ನು ಬೆಂಗಳೂರಿಗೆ ಕಳುಹಿಸಿ, ನೋಂದಣಿಯಾದ ದಾಖಲೆ ಪತ್ರಗಳನ್ನು ಪೋಸ್ಟ್‌ನಲ್ಲಿ ಕಳುಹಿಸುವುದಾಗಿ ತಿಳಿಸಿದ್ದಾರೆ.

ಕೆಲವು ದಿನಗಳ ಬಳಿಕ ನೋಂದಣಿ ದಾಖಲೆಯ ನಕಲು ಪ್ರತಿ ಬೆಂಗಳೂರಿಗೆ ಕಳುಹಿಸಿದ್ದು, 40 ಸೆಂಟ್ಸ್‌ ಮಾತ್ರ ನೋಂದಣಿ ಆಗಿದೆ ಎಂದು ತಿಳಿದು ಕ್ರಿಸ್ಟಿನ್‌ ಬಾಕಿ ಹಣಕ್ಕಾಗಿ ಕಾಯುತ್ತಿದ್ದರು. ನೋಂದಣಿ ಸಂದರ್ಭ 40 ಸೆಂಟ್ಸ್‌ಗೆ ಸಂಬಂಧಿಸಿದ 46 ಲಕ್ಷ ರೂಪಾಯಿಗೆ ಚೆಕ್‌ ನೀಡಿದ್ದರು. ಅಲ್ಲದೆ ಕ್ರಯ ಪತ್ರದಲ್ಲಿ 4.16 ಲಕ್ಷ ರೂ. ನಗದು ಕೊಡಲಾಗಿದೆ ಎಂದು ಬರೆದಿದ್ದು, ಅದನ್ನೂ ನೀಡಿರಲಿಲ್ಲ. ಅವರು ನೀಡಿದ ಚೆಕ್‌ಗಳನ್ನು ಬ್ಯಾಂಕ್‌ಗೆ ಸಲ್ಲಿಸಿದಾಗ ಕೆಲವು ನಗದು ಆಗಿದ್ದು, ಉಳಿದವು ಬೌನ್ಸ್‌ ಆಗಿದೆ. ಈ ಬಗ್ಗೆ ವಿಚಾರಿಸಿದಾಗ ತಾವು ಮೂವರೂ ಬೆಂಗಳೂರಿಗೆ ಬಂದು ಹಣ ಕೊಡುತ್ತೇವೆ ಎಂದು ತಿಳಿಸಿದ್ದರು.

ಕೆಲ ದಿನಗಳ ಹಿಂದೆ ಪರಿಚಯಸ್ಥರೊಬ್ಬರು ನಿಮ್ಮ ಜಾಗ ಬೇರೆಯವರಿಗೆ ಮಾರಾಟ ಮಾಡಿದ್ದೀರಾ ಎಂದು ಕೇಳಿದಾಗ ಪರಿಶೀಲಿಸಲು ಹೇಳಿದ್ದು, ಈ ವೇಳೆ ಎಲ್ಲ 77 ಸೆಂಟ್ಸ್‌ ಜಾಗಕ್ಕೂ ಕ್ರಯಪತ್ರ ಮಾಡಿರುವುದು ತಿಳಿದು ಬಂದಿದೆ. ಆ ಮೂಲಕ ಮೂವರು ಸೇರಿ ಸುಮಾರು 60 ಲಕ್ಷ ರೂ.ಗೂ ಅಧಿಕ ಹಣ ವಂಚನೆ ಮಾಡಿದ್ದಾರೆ. ಸಹಿ ನಕಲು ಮಾಡಿ ಜಾಗವನ್ನು ಲಪಟಾಯಿಸಿ, ಗಮನಕ್ಕೆ ತಾರದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಭೂ ಉಪಯೋಗ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಸಹಿಯನ್ನು ಫೋರ್ಜರಿ ಮಾಡಿ, ಪ್ರಮಾಣ ಪತ್ರ, ಘೋಷಣೆ ಪತ್ರಗಳನ್ನು ತಯಾರಿಸಿ ನೋಟರಿ ಮಾಡಿಸಿ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಪತ್ರ ನೀಡುವಾಗಲೂ ಸಹಿಯನ್ನ ನಕಲು ಮಾಡಲಾಗಿದೆ. ಭೂಉಪಯೋಗ ಬದಲಾವಣೆಗೆ ಸಲ್ಲಿಸಬೇಕಾದ ನಕ್ಷೆಯನ್ನು ಇಂಜಿನಿಯರ್‌ ಬಳಿ ತಯಾರಿಸಿ, ನಕ್ಷೆಯಲ್ಲಿ ನಕಲಿ ಸಹಿ ಮಾಡಲಾಗಿದೆ. ದಿನ ಪತ್ರಿಕೆಯಲ್ಲಿ ಈ ಬಗ್ಗೆ ಜಾಹೀರಾತು ನೀಡಲಾಗಿದೆ ಎಂದು ಕ್ರಿಸ್ಟಿನ್‌ ಎಡ್ವಿನ್‌ ದೂರಿನಲ್ಲಿ ವಿವರಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.