ಲಂಡನ್ ಪ್ರತಿಷ್ಠಿತ ಎಫ್ಆರ್ ಸಿಆರ್ ಪರೀಕ್ಷೆಯಲ್ಲಿ ಡಾ| ರಾಮಕಿಶೋರ್ ಕಾನಾವು ತೇರ್ಗಡೆ
Team Udayavani, Jan 26, 2020, 3:10 PM IST
ಸುಳ್ಯ: ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ರೆಡಿಯೋಲಾಜಿಸ್ಟ್ ಆಗಿರುವ ಡಾ| ರಾಮಕಿಶೋರ್ ಕಾನಾವು ಅವರು ಲಂಡನ್ ಪ್ರತಿಷ್ಠಿತ ರಾಯಲ್ ಕಾಲೇಜು ಆಫ್ ರೆಡಿಯೋಲಾಜಿಸ್ಟ್ಸ್ ವೈದ್ಯಕೀಯ ಪರೀಕ್ಷೆಯಲ್ಲಿ (ಎಫ್ ಆರ್ ಸಿಆರ್ ಯುಕೆ) ಉತ್ತಮ ಅಂಕ ಪಡೆದು ತೇರ್ಗಡೆ ಹೊಂದಿ ಸಾಧನೆ ತೋರಿದ್ದಾರೆ.
ಪ್ರಗತಿಪರ ಕೃಷಿಕ ತಿರುಮಲೇಶ್ವರ ಭಟ್ ಕಾನಾವು ಮತ್ತು ಅನಿತಾ ಟಿ. ಭಟ್ ಕಾನಾವು ಅವರ ಪುತ್ರನಾಗಿರುವ ಇವರು, ಮುಕ್ಕೂರು ಸ.ಹಿ.ಪ್ರಾ.ಶಾಲೆ, ಚೊಕ್ಕಾಡಿ ಸತ್ಯಸಾಯಿ ವಿದ್ಯಾಕೇಂದ್ರ, ಅಳಿಕೆ ಸತ್ಯಸಾಯಿ ವಿದ್ಯಾ ಕೇಂದ್ರಗಳಲ್ಲಿ ಪ್ರಾಥಮಿಕ, ಪ್ರೌಢ, ಪಿಯು ಶಿಕ್ಷಣ ಪೂರೈಸಿ ಆ ಬಳಿಕ ಎಸ್ಎಸ್ ಮೆಡಿಕಲ್ ಕಾಲೇಜು ದಾವಣೆಗೆರೆಯಲ್ಲಿ ಎಂಬಿಬಿಎಸ್ ಪದವಿ ಪಡೆದರು. ಅನಂತರ ಅರ್ ಮೇನಿಯಾದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ (ಎಂ.ಡಿ) ಪಡೆದರು.
ಆ ಬಳಿಕ ಪ್ರತಿಷ್ಠಿತ ವೆಲ್ಲೂರು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ರೆಡಿಯೋಲಾಜಿಸ್ಟ್ ಆಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದರು. ಪ್ರಸ್ತುತ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ರೆಡಿಯೋಲಾಜಿಸ್ಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಹಾಗೂ ಪುತ್ತೂರು ಸಿಟಿ ಆಸ್ಪತ್ರೆ (ಪಿಸಿಎಚ್) ಇದರ ಪಾಲುದಾರರಾಗಿದ್ದಾರೆ.
ಪತ್ನಿ ಡಾ|ಅಂಬಿಕಾ ಕಾನಾವು ಅವರು ದೇರಳಕಟ್ಟೆ ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಕಣ್ಣಿನ ವೈದ್ಯಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ