ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
Team Udayavani, May 9, 2019, 6:16 AM IST
ಮೂಲ್ಕಿ:ಕಾರ್ನಾಡು ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಜರಗಿತು.
ಮೂಲ್ಕಿ ಚರ್ಚ್ನ ಧರ್ಮಗುರು ವಂ| ಸಿಲ್ವೆಸ್ಟರ್ ಡಿ’ಕೋಸ್ತಾ, ಬಪ್ಪ ನಾಡು ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ಮತ್ತು ಮೂಲ್ಕಿ ನಗರ ಪಂಚಾಯತ್ನ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಕಾರ್ನಾಡು ಯು.ಬಿ.ಎಂ.ಸಿ. ಶಾಲೆಯ ಮುಖ್ಯೋಪಾಧ್ಯಾಯಿನಿ ಉಮಾವತಿ, ಕಾರ್ನಾಡು ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ಅರುಣ್ ಕೋಟ್ಯಾನ್, ಹೋಬಳಿ ರಿಕ್ಷಾ ಚಾಲಕ-ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕಾವ,, ಕಿಲ್ಪಾಡಿ ಪಂಚಾಯತ್ ಸದಸ್ಯ ಶರೀಫ್ ಕಿಲ್ಪಾಡಿ, ಸಂಘದ ಕಾರ್ಯದರ್ಶಿ ಹಮೀದ್ ಕಿಲ್ಪಾಡಿ ಮೊದಲಾದವರು ಉಪಸ್ಥಿತರಿದ್ದರು. ಗೋಪಾಲ್ ಶಿಮಂತೂರು ನಿರೂ ಪಿಸಿದರು.