BPL ಚೀಟಿದಾರರಿಗೆ ಉಚಿತ ಚಿಕಿತ್ಸೆ


Team Udayavani, Jul 27, 2018, 1:55 AM IST

ration-card-600.jpg

ಪುತ್ತೂರು: ಎಲ್ಲ ಆರೋಗ್ಯ ಸಂಬಂಧಿಸಿದ ಯೋಜನೆಗಳನ್ನು ವಿಲೀನಗೊಳಿಸಿ ರಾಜ್ಯ ಸರಕಾರ ನೂತನವಾಗಿ ಜಾರಿಗೆ ತಂದಿರುವ ಆರೋಗ್ಯ ಕರ್ನಾಟಕ (ಯುನಿವರ್ಸಲ್‌ ಹೆಲ್ತ್‌ಕೇರ್‌) ಯೋಜನೆಯ ಮೂಲಕ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಉಚಿತ ಚಿಕಿತ್ಸೆ ಹಾಗೂ APL ಪಡಿತರ ಚೀಟಿದಾರರಿಗೆ ಶೇ. 30ರಷ್ಟು ಚಿಕಿತ್ಸಾ ವೆಚ್ಚವನ್ನು ಸರಕಾರ ಪಾವತಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೋಡಲ್‌ ಅಧಿಕಾರಿ ಜಗನ್ನಾಥ ಹೇಳಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ವತಿಯಿಂದ ಗುರುವಾರ ನಗರದ ಕೋ -ಆಪರೇಟಿವ್‌ ಟೌನ್‌ ಬ್ಯಾಂಕ್‌ ಸಭಾಂಗಣದಲ್ಲಿ ತಾಲೂಕಿನ ಸಹಕಾರಿ ಸಂಘಗಳ ಕಾರ್ಯ ನಿರ್ವಹಣಾಧಿಕಾರಿಗಳಿಗಾಗಿ ನಡೆದ ಆರೋಗ್ಯ ಕರ್ನಾಟಕ ಯೋಜನೆ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.

ಜನಸಾಮಾನ್ಯರಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸರಕಾರ ‘ಆರೋಗ್ಯ ಕರ್ನಾಟಕ’ ಯೋಜನೆಯಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಆರೋಗ್ಯ ಸೇವೆಗಳನ್ನು ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಅಥವಾ ಅತ್ಯಲ್ಪ ಸೇವಾ ಶುಲ್ಕದೊಂದಿಗೆ ಪಡೆಯಬಹುದಾಗಿದೆ. ಕ್ಲಿಷ್ಟಕರ ದ್ವಿತೀಯ ಹಂತ ಮತ್ತು ತೃತೀಯ ಹಂತದ ಸೇವೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಅಥವಾ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು. ಅಲ್ಲಿ ಸೇವೆ ಲಭ್ಯ ಇಲ್ಲದಿದ್ದರೆ, ವೈದ್ಯರ ಶಿಫಾರಸು ಮೂಲಕ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು.

ಅರ್ಹತಾ ರೋಗಿ ಮತ್ತು ಸಾಮಾನ್ಯ ರೋಗಿ ಎಂದು ಎರಡು ವರ್ಗಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆ 2013ರಡಿ BPL ಪಡಿತರ ಚೀಟಿ ಹೊಂದಿರುವ ಅರ್ಹತಾ ರೋಗಿಗಳಿಗೆ ಬಹುತೇಕ ಉಚಿತ ಚಿಕಿತ್ಸೆ ದೊರೆಯಲಿದೆ. APL ಪಡಿತರ ಅಥವಾ ಯಾವುದೇ ಪಡಿತರ ಚೀಟಿ ಇಲ್ಲದ ಸಾಮಾನ್ಯ ರೋಗಿಗಳಿಗೆ ಪ್ಯಾಕೇಜ್‌ ದರದ ಶೇ. 30ನ್ನು ಸರಕಾರ ಭರಿಸುತ್ತದೆ. ಆ. 15ರಿಂದ ಕೇಂದ್ರ ಸರಕಾರದ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಯಾಗಲಿದ್ದು, ಬಳಿಕ ಈ ಯೋಜನೆಯ ಜತೆಗೆ ವಿಲೀನಗೊಳ್ಳಲಿದ್ದು, 5 ಲಕ್ಷ ರೂ. ತನಕ ಉಚಿತ ಚಿಕಿತ್ಸೆ ದೊರೆಯಲಿದೆ ಎಂದು ಹೇಳಿದರು.

ಚಿಕಿತ್ಸಾ ವೆಚ್ಚ
ಐವರು ಸದಸ್ಯರಿರುವ ಒಂದು ಕುಟುಂಬಕ್ಕೆ ನಿರ್ದಿಷ್ಟ ದ್ವಿತೀಯ ಹಂತದ ಆರೋಗ್ಯ ಚಿಕಿತ್ಸೆಗಾಗಿ ವಾರ್ಷಿಕ 30 ಸಾವಿರ ರೂ. ವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುವುದು. ತೃತೀಯ ಹಂತದ ಆರೋಗ್ಯ ಚಿಕಿತ್ಸೆಗಳಿಗೆ ಕುಟುಂಬವೊಂದಕ್ಕೆ ವಾರ್ಷಿಕ 1.50 ಲಕ್ಷ ರೂ.ವರೆಗೆ ನೆರವು ಲಭ್ಯ. ನಿಗದಿತ ಮಿತಿ ಪೂರ್ಣವಾಗಿ ಉಪಯೋಗವಾದ ಅನಂತರ ತೃತೀಯ ಹಂತದ ತುರ್ತು ಚಿಕಿತ್ಸೆಗೆ ಹೆಚ್ಚಿನ 50 ಸಾವಿರ ರೂ.ಗಳ ನೆರವು ಮಂಜೂರಾದ ಪ್ಯಾಕೇಜ್‌ ದರಗಳಲ್ಲಿ ಲಭ್ಯ. ಬಿಪಿಎಲ್‌ ಕಾರ್ಡ್‌ದಾರರು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ಶಿಪಾರಸು ಪಡೆದು ಖಾಸಗಿ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಅನಂತರ ಯಾವುದೇ ಹಣ ಪಾವತಿಸುವಂತಿಲ್ಲ. APL ಕಾರ್ಡ್‌ದಾರರು ಹಾಗೂ ಯಾವುದೇ ಕಾರ್ಡ್‌ ಹೊಂದಿಲ್ಲದ ಸಾಮಾನ್ಯ ರೋಗಿಗಳಿಗೆ ಖಾಸಗಿ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಯೋಜನೆಯ ಪ್ಯಾಕೇಜ್‌ ದರದ ಶೇ. 30ನ್ನು ಮಾತ್ರ ಸರಕಾರ ಭರಿಸುತ್ತದೆ ಎಂದು ಮಾಹಿತಿ ನೀಡಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕ ಗೋಪಾಲಯ್ಯ, ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಸುರೇಶ್‌ ಭಟ್‌ ಉಪಸ್ಥಿತರಿದ್ದರು. ಸವಣೂರು ಸಿ.ಎ. ಬ್ಯಾಂಕ್‌ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್‌ ಸ್ವಾಗತಿಸಿ, ವಂದಿಸಿದರು.

104ಕ್ಕೆ ಕರೆ ಮಾಡಿ
ಟೋಲ್‌ ಫ್ರೀ ನಂ. 104ಕ್ಕೆ ಕರೆ ಮಾಡಿ ಆರೋಗ್ಯ ಕರ್ನಾಟಕ ಯೋಜನೆಯ ಕುರಿತು ಮಾಹಿತಿ ಪಡೆದುಕೊಳ್ಳಬಹುದು. 18004258330ಗೂ ಕರೆ ಮಾಡಿಯೂ ಮಾಹಿತಿ ಪಡೆದುಕೊಳ್ಳಬಹುದು. ಪುತ್ತೂರಿನಲ್ಲಿ ಆದರ್ಶ, ಪ್ರಗತಿ, ಚೇತನಾ, ಮಹಾವೀರ, ಮಂಗಳೂರಿನಲ್ಲಿ ಎ.ಜೆ. ಶೆಟ್ಟಿ, ಯೇನೆಪೋಯಾ, ಇಂಡಿಯಾನ, ಒಮೆಗಾ, ಯುನಿಟಿ, ಕಣಚ್ಚಾರು, ಕೆ.ಎಂ.ಸಿ. ಜ್ಯೋತಿ ಹಾಗೂ ಕೆಎಂಸಿ ಅತ್ತಾವರ ಆಸ್ಪತ್ರೆಗಳಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಸೌಲ್ಯಭ್ಯಗಳು ಅನ್ವಯವಾಗಲಿದ್ದು, ಸರಕಾರಿ ಆಸ್ಪತ್ರೆಯಿಂದ ಶಿಫಾರಸ್ಸು ಮಾಡಿದಲ್ಲಿ ಮಾತ್ರವೇ ಇಲ್ಲಿ ಯೋಜನೆ ಸೌಲಭ್ಯ ಪಡೆಯಬಹುದು.

ನೋಂದಣಿ ವಿಧಾನ
APL, BPL ಪಡಿತರ ಚೀಟಿದಾರರು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಅಧಾರ್‌ ಕಾರ್ಡ್‌ ಮತ್ತು ಪಡಿತರ ಚೀಟಿಯ ನಕಲು ಪ್ರತಿ ನೀಡಿ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಈ ಎರಡೂ ಕಾರ್ಡ್‌ ಇಲ್ಲದವರು ಆರೋಗ್ಯ ಕಾರ್ಡ್‌ ಪಡೆಯುವವರೆಗೂ ಆಧಾರ್‌ ಕಾರ್ಡ್‌ ತೋರಿಸಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಕರ್ನಾಟಕ ಕಾರ್ಡ್‌ ನೋಂದಾಯಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಸರಕಾರವೇ ಎಲ್ಲ ಶುಲ್ಕವನ್ನು ಭರಿಸುತ್ತಿದೆ. ನಿಗದಿತ ನೋಂದಣಿ ಕೌಂಟರ್‌ನಲ್ಲಿ ಕಾರ್ಡ್‌ ವೆಚ್ಚ 10 ರೂ. ಪಾವತಿಸಿ ಆರೋಗ್ಯ ಕಾರ್ಡ್‌ ಪಡೆಯಬಹುದು ಜಗನ್ನಾಥ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.