ಉಳ್ಳಾಲ, ಧರ್ಮಸ್ಥಳ ಮಾರ್ಗವಾಗಿ ಸೌಹಾರ್ದ ಸರಕಾರಿ ಬಸ್: ಖಾದರ್
Team Udayavani, Jun 17, 2019, 5:29 AM IST
ಉಳ್ಳಾಲ: ಸರ್ವಧರ್ಮದ ಧಾರ್ಮಿಕ ಕೇಂದ್ರಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಉಳ್ಳಾಲ, ಧರ್ಮಸ್ಥಳ ಮಾರ್ಗವಾಗಿ ಜಾವಗಲ್ ಗುಲ್ಬರ್ಗಕ್ಕೆ ತೆರಳುವ ಸೌಹಾರ್ದ ಸರಕಾರಿ ಬಸ್ ವ್ಯವಸ್ಥೆ ಆರಂಭಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಸರಕಾರದೊಂದಿಗೆ ಮಾತುಕತೆ ನಡೆಸಿ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದರು.
ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ಬಳಿ ರಾಜ್ಯ ಸರಕಾರದ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರೀ ನಿವಾಸಕ್ಕೆ ರವಿವಾರ ಶಂಕುಸ್ಥಾಪನೆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಳ್ಳಾಲದಲ್ಲಿ ಸರ್ವಧರ್ಮದ ಧಾರ್ಮಿಕ ಕೇಂದ್ರಗಳಿದ್ದು, ಪ್ರಸಿದ್ಧ ಯಾತ್ರಾ ಸ್ಥಳವಾಗಿದೆ. ಧಾರ್ಮಿಕ ಕೇಂದ್ರಗಳೊಂದಿಗೆ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಉಳ್ಳಾಲಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಯಾತ್ರಾರ್ಥಿ ಗಳಿಗೆ ಇಲ್ಲಿನ ಧರ್ಮ ಕೇಂದ್ರಗಳನ್ನು ಸಂದರ್ಶಿಸುವ ನಿಟ್ಟಿನಲ್ಲಿ ಎಲ್ಲ ಧರ್ಮದ ಧಾರ್ಮಿಕ ಕೇಂದ್ರದ ಮುಖ್ಯಸ್ಥರನ್ನು ಕರೆದು ಸಭೆ ನಡೆಸಿ ಚರ್ಚಿಸಲಾಗುವುದು. ಇದರೊಂದಿಗೆ ಪರವೂರಿನಿಂದ ಲಾರಿ, ಟೆಂಪೋಗಳ ಮೂಲಕ ಬರುವ ಪ್ರವಾಸಿಗರಿಗೆ ಪೂರಕವಾಗಿ ಉಳ್ಳಾಲ ದರ್ಗಾ, ಸಂತ ಸೆಬಾಸ್ತಿಯನ್ನರ ಚರ್ಚ್, ಧರ್ಮಸ್ಥಳ, ಮಾರ್ಗವಾಗಿ ಜಾವಗಲ್ ಸಂಪರ್ಕಿಸುವ ಸೌಹಾರ್ದ ಸರಕಾರಿ ಬಸ್ಗೆ ಆದ್ಯತ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್