ಮಾರ್ನಮಿಕಟ್ಟೆ , ಮಂಗಳಾದೇವಿ ಪರಿಸರದಲ್ಲಿ ವಿಶೇಷ ಶ್ರಮದಾನ


Team Udayavani, Jul 23, 2018, 11:45 AM IST

23-july-5.jpg

ಮಹಾನಗರ : ರಾಮಕೃಷ್ಣ ಮಿಷನ್‌ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ ನಾಲ್ಕನೇ ಹಂತದ ಕೊನೆಯ ವಾರದಲ್ಲಿ ವಿಶೇಷ ಶ್ರಮದಾನ ವನ್ನು ಮಾರ್ನಮಿಕಟ್ಟೆ ಹಾಗೂ ಮಂಗಳಾದೇವಿ ಪರಿಸರದಲ್ಲಿ ರವಿವಾರ ಹಮ್ಮಿಕೊಳ್ಳಲಾಯಿತು. ಮಾರ್ನಮಿಕಟ್ಟೆಯ ರೈಲು ಸೇತುವೆಯ ಬಳಿಯಿದ್ದ ಕಸ ಹಾಕುವ ಕಾಂಕ್ರೀಟ್‌ ತೊಟ್ಟಿ ಹಾಗೂ ಅದರ ಸುತ್ತಮುತ್ತಲಿನ ಜಾಗಗಳನ್ನು ಶುಚಿಗೊಳಿಸಲಾಯಿತು. ಮೊದಲಿಗೆ ಸಿಮೆಂಟಿನಿಂದ ಮಾಡಿದ್ದ ಕಸದ ತೊಟ್ಟಿಯನ್ನು ಕಿತ್ತುತೆಗೆದು ಅದರ ಪಕ್ಕದಲ್ಲಿ ನಿಷ್ಪ್ರಯೋಜಕವಾಗಿ ಪಾಳುಬಿದ್ದಿದ್ದ ಪುಟ್ಟ ಅಂಗಡಿಯನ್ನು ತೆರವುಗೊಳಿಸಲಾಯಿತು. ಅನಂತರ ಆ ಸ್ಥಳವನ್ನು ಜೇಸಿಬಿ ಬಳಸಿ ಸಮತಟ್ಟು ಮಾಡಲಾಯಿತು. ಇದೀಗ ಅಲ್ಲಿ ಯಾರೂ ಕಸ ಹಾಕದಂತೆ ಹೂಗಿಡಗಳನ್ನು ಇಡಲಾಗಿದೆ. ಮುಂದಿನ ವಾರದಲ್ಲಿ ಮತ್ತಷ್ಟು ಶ್ರಮದಾನ ಮಾಡಿ ಆ ಇಡೀ ಜಾಗವನ್ನು ಸುಂದರಗೊಳಿಸಲು ನಿರ್ಧರಿಸಲಾಯಿತು.

ಮಂಗಳಾದೇವಿ ರಥಬೀದಿಯಲ್ಲಿ ಸ್ವಚ್ಛತೆ
ಮಂಗಳಾದೇವಿ ರಥಬೀದಿಯಲ್ಲಿ ಕಾರ್ಯಕರ್ತರು ಸ್ವಚ್ಛತೆ ಕೈಂಕರ್ಯ ನಡೆಸಿದರು. ಅಲ್ಲಿರುವ ಮನೆಮನೆಗೆ ತೆರಳಿ ಜಾಗೃತಿ ಕಾರ್ಯ ನಡೆಸಿದರು. ಹಿರಿಯರಾದ ಪುಣೆಯ ಚಂದ್ರಕಾಂತ ಕುಲಕರ್ಣಿ, ಸುರೇಶ್‌ ಶೆಟ್ಟಿ, ಕಮಲಾಕ್ಷ ಪೈ, ವಿಠ್ಠಲ ದಾಸ್‌ ಪ್ರಭು, ಅನಿರುದ್ಧ ನಾಯಕ್‌ ಮತ್ತಿತರ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಶ್ರಮದಾನದ ಬಳಿಕ ರಾಮಕೃಷ್ಣ ಮಠದಲ್ಲಿ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

ಸ್ವಚ್ಛತಾ ದರ್ಶನ : ವಿಶೇಷ ಕಾರ್ಯಕ್ರಮ
ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನದ ಪ್ರಯುಕ್ತ ನಾಲ್ಕನೇ ಹಂತದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮನಸ್ಸು ಅಭಿಯಾನದ ಐದನೇ ಕಾರ್ಯಕ್ರಮ ಸ್ವಚ್ಛತಾ ದರ್ಶನ ಸುಮಾರು 100 ಪ್ರೌಢಶಾಲೆಗಳಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಮನೋಪರಿವರ್ತನೆ, ಆಲೋಚನೆ ಹಾಗೂ ಕ್ರಿಯಾತ್ಮಕ ಪ್ರತಿಕ್ರಿಯೆ ಆಧರಿಸಿ ನೂರು ಅಂಕಗಳ ಉತ್ತರ ಪತ್ರಿಕೆ ಸತತ ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿತ್ತು. ಮಂಗಳೂರು, ಪುತ್ತೂರು, ಬಂಟ್ವಾಳ ತಾಲೂಕಿನ ಸುಮಾರು ಹತ್ತು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಸುಮಾರು ಅರುವತ್ತು ಜನ ಸಂಪನ್ಮೂಲ ವ್ಯಕ್ತಿಗಳು ಶಾಲಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸ್ವಚ್ಛತೆಯ ಮಾಹಿತಿ ಹಾಗೂ ಈ ವಿಶೇಷ ಪರೀಕ್ಷೆಯ ಔಚಿತ್ಯ ತಿಳಿಸಿದರು. ಈಗಾಗಲೇ ಮೌಲ್ಯಮಾಪನ ಆರಂಭವಾಗಿದ್ದು, ಮುಂದಿನ ವಾರದಲ್ಲಿ ಅತ್ಯುತ್ತಮವಾಗಿ ಉತ್ತರಿಸಿದವರನ್ನು ಪುರಸ್ಕಾರ ನೀಡಿ ಗೌರವಿಸಲಾಗುವುದು. ಸ್ವಚ್ಛ ಮನಸ್ಸು ಮುಖ್ಯ ಸಂಯೋಜಕ ರಂಜನ್‌ ಬೆಳ್ಳಪಾಡಿ, ಗುರುಪ್ರಸಾದ್‌ ಮತ್ತು ಕಾಂಚನಾ ಅವರ ಸಹಕಾರದೊಂದಿಗೆ ಕಾರ್ಯಕ್ರಮಗಳನ್ನು ಸಂಯೋಜನೆ ಮಾಡಿದರು.

ಕುಡಿಯುವ ನೀರಿನ ಘಟಕಗಳ ವಿತರಣೆ
ಸ್ವಚ್ಛತಾ ಅಭಿಯಾನದ ಪ್ರಯುಕ್ತ ಸುಮಾರು ಹತ್ತು ಶಾಲೆಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಯಿತು. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶುದ್ಧ ಕುಡಿಯುವ ನೀರಿನ ಆವಶ್ಯಕತೆಯನ್ನು ಮನಗಂಡು ಹಾಗೂ ಶಾಲೆಗಳ ವಿನಂತಿಯನ್ನು ಪರಿಗಣಿಸಿ ಈ ಘಟಕಗಳನ್ನು ನೀಡಲಾಯಿತು. ಸರಕಾರಿ ಪ್ರೌಢಶಾಲೆ ರಥಬೀದಿ, ಸರಕಾರಿ ಪ್ರೌಢಶಾಲೆ ಬಲ್ಮಠ, ಮದನಿ ಪ್ರೌಢಶಾಲೆ ಉಳ್ಳಾಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾಮಂಜೂರು, ಸ್ವಾಮಿ ಸದಾನಂದ ಸರಸ್ವತಿ ಪ್ರೌಢಶಾಲೆ ನಂತೂರು ಪದವು, ಸರಕಾರಿ ಪ್ರೌಢಶಾಲೆ ಮೂಡುಶೆಡ್ಡೆ, ಭಗಿನಿ ಸಮಾಜ ಜೆಪ್ಪು, ಹಿರಿಯ ಪ್ರಾಥಮಿಕ ಶಾಲೆ ಬದ್ರಿಯಾ ನಗರ ಮಲ್ಲೂರು ಇತ್ಯಾದಿ ಶಾಲೆಗಳಲ್ಲಿ ಅಳವಡಿಸಲಾಯಿತು. ಕಾರ್ಯಕರ್ತರಾದ ಸಚಿನ ಶೆಟ್ಟಿ ನಲ್ಲೂರು ಹಾಗೂ ಅಭಿಷೇಕ ಎಸ್‌. ತರಣ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. 

ಸ್ವಚ್ಛತೆಗಾಗಿ ಜಾದೂ 
ಸ್ವಚ್ಛತೆಯ ಕುರಿತಂತೆ ಜನಮಾನಸದಲ್ಲಿ ಜಾಗೃತಿಯನ್ನುಂಟು ಮಾಡಲು ರಾಮಕೃಷ್ಣ ಮಿಷನ್‌ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಸ್ವಚ್ಛತೆಗಾಗಿ ಜಾದೂ ಎಂಬ ಕಾರ್ಯಕ್ರಮದ ಪ್ರದರ್ಶನಗಳನ್ನು ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು 100 ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್‌ ಮತ್ತು ಬಳಗದ ವತಿಯಿಂದ ನಲ್ವವತ್ತು ದಿನಗಳಿಂದ ಈ ಅಭಿಯಾನ ನಡೆಯುತ್ತಿದೆ. ಈ ವರೆಗೆ 56 ಶಾಲೆಗಳಲ್ಲಿ ಸ್ವಚ್ಛತೆಗಾಗಿ ಜಾದೂ ಪ್ರದರ್ಶನ ಯಶಸ್ವಿಯಾಗಿ ಜರಗಿದೆ. ಮನೋರಂಜನೆ ಹಾಗೂ ಸ್ವಚ್ಛತೆಯ ಕುರಿತು ಮಕ್ಕಳಲ್ಲಿ ಅರಿವನ್ನುಂಟು ಮಾಡಲು ಈ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ನವನೀತ ಶೆಟ್ಟಿ ಜಾದೂ ಪ್ರದರ್ಶನಗಳನ್ನು ಸಂಯೋಜನೆ ಮಾಡಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.