ಸಭಾಭವನದಿಂದಪಾರ್ಕಿಂಗ್ ಸಮಸ್ಯೆ,ಶಬ್ದ ಮಾಲಿನ್ಯ;ಮುಚ್ಚಲುಪುರಸಭೆಸೂಚನೆ
Team Udayavani, May 26, 2018, 12:42 PM IST
ಮೂಡಬಿದಿರೆ: ಮಾಸ್ತಿ ಕಟ್ಟೆಯ ಸಭಾಭವನವೊಂದರಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಬಳಸುವ ಧ್ವನಿವರ್ಧಕ ಗಳಿಂದ ಪರಿಸರದಲ್ಲಿ ಶಬ್ದಮಾಲಿನ್ಯ, ಉಂಟಾಗುವುದರಿಂದ ಬಗ್ಗೆ ಪುರಸಭೆಯು ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಪುರಸಭೆಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಭಾಭವನವನ್ನು ಮುಚ್ಚುವಂತೆ ಮುಖ್ಯಾಧಿಕಾರಿ ರೇಖಾ ಶೆಟ್ಟಿ ಅವರು ನೋಟಿಸ್ ನೀಡಿದ್ದಾರೆ.
ಸಭಾಭವನದಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು ಈ ವೇಳೆ ಧ್ವನಿವರ್ಧಕಗಳ ಶಬ್ದ ಜೋರಾಗಿ ಕೇಳಿ ಬರುತ್ತಿದ್ದು, ಜನರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಅಲ್ಲದೆ ಅಲ್ಲಿ ಸಮಾರಂಭ ನಡೆಯುವ ಸಂದರ್ಭ ಅಧಿಕ ವಾಹನಗಳನ್ನು ನಿಲ್ಲಿಸಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತಿರುವ ಹಿನ್ನೆಲೆಯಲ್ಲಿ ಪುರಸಭೆಗೆ ದೂರು ನೀಡಿದ್ದರು. ಮುಖ್ಯಾಧಿಕಾರಿ ರೇಖಾ ಶೆಟ್ಟಿ ಅವರು ದೂರುದಾರರನ್ನು ಪುರಸಭೆಗೆ ಕರೆಸಿ ಪುರಸಭೆಯ ಸಿಬಂದಿ ಜತೆ ಚರ್ಚಿಸಿ ಸಭಾಭವನವನ್ನು ಮುಚ್ಚುವಂತೆ ಸಂಬಂಧಪಟ್ಟವರಿಗೆ ಸೂಚಿಸಿ ಕ್ರಮಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಪುರಸಭಾ ಕಂದಾಯ ಅಧಿಕಾರಿ ಧನಂಜಯ, ಮ್ಯಾನೇಜರ್ ಸೂರ್ಯ ಕಾಂತ ಖಾರ್ವಿ, ಪರಿಸರ ಅಭಿಯಂತೆ ಶಿಲ್ಪಾ, ಸಿಬಂದಿ ಸುಧೀಶ್ ಹೆಗ್ಡೆ ಸಭಾಭವನಕ್ಕೆ ಸಂಬಂಧಪಟ್ಟ ಅಶೋಕ್ ಮತ್ತು ಹಲವು ನಾಗರಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ