“ಸಾಮಾಜಿಕ ಸೇವೆಯಿಂದ ಭವಿಷ್ಯ ಸುಂದರ’
ಎನ್ನೆಸ್ಸೆಸ್,ಯೂತ್ ರೆಡ್ಕ್ರಾಸ್: ಚಟುವಟಿಕೆ ಸಮಾರೋಪ
Team Udayavani, Apr 16, 2019, 6:44 AM IST
ಕಿನ್ನಿಗೋಳಿ: ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಳ್ಳುವುದರಿಂದ ಭವಿಷ್ಯದಲ್ಲಿ ವ್ಯಕ್ತಿತ್ವವು ಸುಂದರವಾಗಿರುವುದು ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್ನ ನಿಕಟ ಪೂರ್ವ ಅಧ್ಯಕ್ಷೆ ಶಾಂಭವಿ ಶಿವರಾಮ್ ಶೆಟ್ಟಿ ಹೇಳಿದರು.
ಪೊಂಪೈ ಕಾಲೇಜು ಐಕಳ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯೂತ್ ರೆಡ್ಕ್ರಾಸ್ ಘಟಕಗಳ 2018- 19ನೇ ಸಾಲಿನ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸೋಮ ವಾರ ಮಾತನಾಡಿದ ಅವರು, ವಿದ್ಯಾರ್ಥಿಗಳ ಬದುಕನ್ನೇ ಹೊಸತಾಗಿ ರೂಪಿಸಬಲ್ಲದು ಎಂದರು.
ಘಟಕಗಳಿಗೆ ವಿಶೇಷ ಸೇವೆಯನ್ನು ಸಲ್ಲಿಸಿದ ನಿಕಟಪೂರ್ವ ನಾಯಕನಾದ ವಿಶಾಲ್ ಬಿ. ಕುಲಾಲ್, ತೃತೀಯ ಬಿ.ಕಾಂ. ಬಿ. ಮತ್ತು ವಿಶೇಷ ಅಭಿಮಾನದೊಂದಿಗೆ ಘಟಕಗಳ ಕಾರ್ಯಕ್ರಮಗಳನ್ನು ಸಂಘ ಟಿ ಸುವಲ್ಲಿ ಮುತುವರ್ಜಿವಹಿಸಿದ ಸಂತೋಷ್ ಕ್ರಾಸ್ತ ತೃತೀಯ ಬಿ.ಕಾಂ. ಎ. ಇವ ರಿಗೆ ಪೊಂಪೈ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕವು ನೀಡುವ ವಾರ್ಷಿಕ ವಿಶೇಷ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಹಿರಿಯ ವಿದ್ಯಾರ್ಥಿಗಳಾದ ಪೃಥ್ವಿ, ಅಶ್ವಿತಾ, ರಶ್ಮಿ ತೃತೀಯ ಬಿ.ಕಾಂ ಎ. ಅವರನ್ನು ಸಮ್ಮಾನಿಸಲಾಯಿತು. ಕಾಲೇಜಿನ ನ್ಯಾಕ್ ಸಂಯೋಜನಾಧಿಕಾರಿಯಾದ ಯೋಗಿಂದ್ರ ಬಿ. ಸಮ್ಮಾನ ಕಾರ್ಯಕ್ರಮ ನೆರವೇರಿ ಸಿಕೊಟ್ಟರು.
ಕಾಲೇಜಿನ ಪ್ರಾಚಾರ್ಯ ಕೆ. ಜಗದೀಶ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿ ಕ್ಲೀಟಾ ಮೆಲಿಟಾ ಫೆರ್ನಾಂಡಿಸ್ಎರಡೂ ಘಟಕಗಳ ವಾರ್ಷಿಕ ವರದಿಯನ್ನು ವಾಚಿಸಿದರು. ಯೂತ್ ರೆಡ್ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಸಿಲ್ವಿಯ ಪಾಯ್ಸ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿ ಕಾರಿ ಡಾ| ಇ. ವಿಕ್ಟರ್ ವಾಜ್ ವಂದಿಸಿದರು. ರಾಜ್ಕುಮಾರ್ ದ್ವಿತೀಯ ಬಿ.ಎ. ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನ ಘಟಕದ ನಾಯಕರಾದ ಶ್ರವಣ್ ಶೆಟ್ಟಿ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ನಾಯಕಿಯಾದ ತೃಷಾ ಕಾರ್ಯಕ್ರಮ ಸಂಘಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ