ವೈದ್ಯರ ಮೇಲೆ ರೇಗಿದ ಜಿ.ಪಂ. ಅಧ್ಯಕ್ಷೆ: ಶಾಸಕರಿಗೆ ದೂರು


Team Udayavani, Jul 1, 2019, 5:49 AM IST

Udayavani Kannada Newspaper

ಪುತ್ತೂರು: ಕೌಡಿಚ್ಚಾರಿನ ಅಪ್ರಾಪ್ತೆಯ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಶನಿವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿದ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಆಸ್ಪತ್ರೆಯ ಪರಿಸ್ಥಿತಿಯನ್ನು ಅವಲೋಕಿಸದೆ ತಮ್ಮನ್ನು ತತ್‌ಕ್ಷಣ ಭೇಟಿಯಾಗದ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿರುವ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸಂಜೆ ಸಮಯದಲ್ಲಿ ಆಸ್ಪತ್ರೆಗೆ ಜಿ.ಪಂ. ಅಧ್ಯಕ್ಷರು ಭೇಟಿ ನೀಡಿದ್ದಾರೆ. ವೈದ್ಯರ ಕೊರತೆ ಇರುವ ಕಾರಣ ರೋಗಿಗಳನ್ನು ಪರೀಕ್ಷಿಸುತ್ತಿದ್ದ ವೈದ್ಯರು ತಮ್ಮನ್ನು ತತ್‌ಕ್ಷಣ ಭೇಟಿಯಾಗಿಲ್ಲ ಎಂದು ಜಿ.ಪಂ. ಅಧ್ಯಕ್ಷರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪರಿಸ್ಥಿತಿ ಗಮನಿಸಿಲ್ಲ

ಸರಕಾರಿ ಆಸ್ಪತ್ರೆಯಲ್ಲಿ 13 ವೈದ್ಯರ ಹುದ್ದೆಗಳಿದ್ದು, 8 ವೈದ್ಯರು ಮಾತ್ರ ಇದ್ದಾರೆ. ಅದೂ ಸದ್ಯ ನಾಲ್ವರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವೈದ್ಯರ ಮೇಲೆ ಒತ್ತಡ ಇರುವುದನ್ನು ಗಮನಿಸದ ಅಧ್ಯಕ್ಷರು ಅಧಿಕಾರ ಚಲಾಯಿಸುವುದು, ರೇಗುವುದು ಸರಿಯಲ್ಲ ಎಂದು ಆಸ್ಪತ್ರೆಯ ಕೆಲವು ವೈದ್ಯರು, ಸಿಬಂದಿ ಅಲವತ್ತುಕೊಂಡಿದ್ದಾರೆ.

ಹೇಳಿಕೆ ನೀಡುವುದಿಲ್ಲ

ಈ ಹಿನ್ನೆಲೆಯಲ್ಲಿ ವೈದ್ಯರು ಜಿ.ಪಂ. ಅಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಸುತ್ತಾರೆ ಎನ್ನುವ ಸುದ್ದಿ ಕೇಳಿಬಂದಿತ್ತು. ಆದರೆ ಇದನ್ನು ನಿರಾಕರಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಆಶಾ ಪುತ್ತೂರಾಯ, ನಾವು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಕುರಿತು ಮೌಖೀಕವಾಗಿ ಶಾಸಕರಿಗೆ ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಸರಿಪಡಿಸುತ್ತೇವೆ

ಆಸ್ಪತ್ರೆಯ ವೈದ್ಯರ ಕಡೆಯಿಂದ ಇಂತಹದೊಂದು ಮೌಖೀಕ ದೂರು ಬಂದಿದೆ. ಯಾವ ಪರಿಸ್ಥಿಯಲ್ಲಿ, ಏಕೆ ಹೀಗೆ ನಡೆಯಿತು ಎಂದು ಗೊತ್ತಿಲ್ಲ. ಈ ಕುರಿತು ಮಾತುಕತೆ ನಡೆಸಿ ಸರಿಪಡಿಸುತ್ತೇವೆ.
– ಸಂಜೀವ ಮಠಂದೂರು, ಶಾಸಕರು
ವೈದ್ಯರು ಉದ್ಧಟತನ ತೋರಿದ್ದಾರೆ

ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ದಲಿತ ಸಮುದಾಯದ ಬಾಲಕಿಯನ್ನು ಭೇಟಿ ಮಾಡಿ ವಿಚಾರಿಸಿದ ಸಂದರ್ಭದಲ್ಲಿ ಆಕೆಗೆ ಸ್ಕೇಲ್ನಲ್ಲಿ ಕೆನ್ನೆಗೆ ಹೊಡೆದಿದ್ದು, ಬೆತ್ತದಲ್ಲಿ ಬಡಿದಿದ್ದು, ಸೊಂಟದಲ್ಲಿ ಬಲ ಇಲ್ಲ ಎಂದು ದೂರಿಕೊಂಡಿದ್ದಾರೆ. ಈ ಕುರಿತು ಖಚಿತಪಡಿಸಿಕೊಳ್ಳಲು ಆಕೆಯನ್ನು ತಪಾಸಣೆ ಮಾಡಿದ ವೈದ್ಯರಿಂದ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಅವರನ್ನು ಕರೆದೆ. ಅಲ್ಲಿಯೇ ಓಡಾಡಿಕೊಂಡಿದ್ದ ವೈದ್ಯರು ಮುಕ್ಕಾಲು ಗಂಟೆ ಕಾದರೂ ಬರಲಿಲ್ಲ.
ಡಿಎಚ್ಒಗೆ ದೂರು ನೀಡಿದೆ. ಅವರ ಕರೆಗೂ ವೈದ್ಯರು ಸ್ಪಂದನೆ ನೀಡಿಲ್ಲ. ಜಿ.ಪಂ. ಅಧ್ಯಕ್ಷರಿಗೇ ಬೆಲೆ ಕೊಡದವರು ಸಾರ್ವಜನಿಕರಿಗೆ ಸ್ಪಂದಿಸುತ್ತಾರಾ? ಬಳಿಕ ನಾನೇ ವೈದ್ಯರ ಬಳಿಗೆ ಹೋಗಿದ್ದೇನೆ.
– ಮೀನಾಕ್ಷಿ ಶಾಂತಿಗೋಡು, ದ.ಕ. ಜಿ.ಪಂ. ಅಧ್ಯಕ್ಷರು

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.