ಗಾಂಧಿ ತತ್ತ್ವ ಇಂದಿಗೂ ಪ್ರಸ್ತುತ: ಪಿ.ಸಿ.ವಿಷ್ಣುನಾಥನ್
ಮಹಾತ್ಮಾ ಗಾಂಧಿ 150ನೇ ಜಯಂತಿ: ಕಾಂಗ್ರೆಸ್ನಿಂದ ಬೃಹತ್ ಜಾಥಾ
Team Udayavani, Oct 3, 2019, 4:28 AM IST
ಕಾಲ್ನಡಿಗೆ ಜಾಥಾ ಸಮಾರೋಪ ಸಮಾರಂಭದಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥನ್ ಮಾತನಾಡಿದರು.
ಮಂಗಳೂರು: ಅಧರ್ಮದ ವಿರುದ್ಧ ಹೋರಾಡಲು ಅಹಿಂಸೆ ಪ್ರಮುಖ ಅಸ್ತ್ರ. ಪ್ರೀತಿಯಿಂದ ಎಲ್ಲರನ್ನೂ ಗೆಲ್ಲಬಹುದು ಎಂಬ ಗಾಂಧೀಜಿ ಅವರ ತತ್ತ್ವ ಇಂದಿಗೂ ಪ್ರಸ್ತುತ ಎಂದು ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥನ್ ಹೇಳಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 150ನೇ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಮಂಗಳೂರು ವತಿಯಿಂದ ಬುಧವಾರ ಮಂಗಳಾ ಕ್ರೀಡಾಂಗಣ ಸಮೀಪದ ಕರಾವಳಿ ಉತ್ಸವ ಮೈದಾನದಿಂದ ಪುರಭವನದವರೆಗೆ ನಡೆದ ಕಾಲ್ನಡಿಗೆ ಜಾಥಾ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮ ಆಯೋಜಿಸಿದ ದ.ಕ.ಜಿ. ಕಾಂಗ್ರೆಸ್ ನಾಯಕರು ರಾಜ್ಯಕ್ಕೆ ಮಾದರಿ ಎಂದರು.
ಗಾಂಧಿ ಹೃದಯ ಸಾಮ್ರಾಟ
“ಗಾಂಧೀ ಜೀವನ ಚರಿತ್ರೆ-ಚಿಂತನೆ’ ವಿಷಯದ ಬಗ್ಗೆ ಫಾರಂ ಫಾರ್ ಜಸ್ಟಿಸ್ನ ಜಿಲ್ಲಾಧ್ಯಕ್ಷ ದಯಾನಾಥ ಕೋಟ್ಯಾನ್ ಅವರು ಗಾಂಧೀಜಿ ಭಾರತೀಯರ ಹೃದಯ ಸಾಮ್ರಾಟ. ಪಾಶ್ಚಾತ್ಯರು ಗಾಂಧೀಜಿಯನ್ನು ಸುಲಭವಾಗಿ ಸ್ವೀಕರಿಸಲಿಲ್ಲ. ಭಾರತದಲ್ಲಿಯೂ ಅದೇ ಪರಿಸ್ಥಿತಿ ಇದೆ. ಸ್ವಾತಂತ್ರ್ಯ ಸಂಗ್ರಾಮ ಗಾಂಧೀಜಿಯವರ ದೊಡ್ಡ ಸಾಧನೆ ಎಂದು ಹೇಳಿದರು.
ಕರಾವಳಿ ಉತ್ಸವ ಮೈದಾನದಿಂದ ಜಾಥಾ ಹೊರಟು ಲಾಲ್ಬಾಗ್ ಜಂಕ್ಷನ್ನಲ್ಲಿ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಿ ಪಿವಿಎಸ್ ವೃತ್ತ, ಬಂಟ್ಸ್ ಹಾಸ್ಟೆಲ್ ವೃತ್ತ, ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ವೃತ್ತದ ಮೂಲಕ ಸಾಗಿ ಪುರಭವನಕ್ಕೆ ತಲುಪಿತು. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಮಾಜಿ ಸಚಿವ, ಶಾಸಕ ಯು.ಟಿ. ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಸಂತ ಬಂಗೇರ, ಗಂಗಾಧರ ಗೌಡ, ಮಾಜಿ ಶಾಸಕರಾದ ಬಿ.ಎ. ಮೊದಿನ್ ಬಾವಾ, ಬಿ. ಶಕುಂತಳಾ ಶೆಟ್ಟಿ, ಜೆ.ಆರ್. ಲೋಬೊ, ಕಾಂಗ್ರೆಸ್ ನಾಯಕರಾದ ಮಿಥುನ್ ರೈ, ಶಶಿಧರ ಹೆಗ್ಡೆ, ಭಾಸ್ಕರ್ ಕೆ., ಮಹಮ್ಮದ್ ಮೋನು, ಕೋಡಿಜಾಲ್ ಇಬ್ರಾಹಿಂ, ಬಿ.ಎಚ್. ಖಾದರ್, ಡಾ| ರಘು, ಸಾಹುಲ್ ಹಮೀದ್, ನಝೀರ್ ಬಜಾಲ್, ಶಾಲೆಟ್ ಪಿಂಟೋ, ಮಮತಾ ಗಟ್ಟಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್