Mangaluru ವಿ.ವಿ. ಗಣೇಶೋತ್ಸವ ವಿವಾದ : ರಾಜ್ಯಪಾಲರಿಗೆ ಸಂಸದ, ಶಾಸಕರ ಮನವಿ
Team Udayavani, Sep 9, 2023, 11:57 PM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಆಡಿ ಟೋರಿಯಂನಲ್ಲಿ ಗಣಪತಿ ಉತ್ಸವವನ್ನು ಆಚರಿಸುವ ವಿಚಾರದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಪದ್ಧತಿಯನ್ನು ಮುಂದುವರಿಸುವುದು ಸೂಕ್ತ. ಅದರಂತೆ ಸೆ. 19ರಂದು ಮಂಗಳ ಸಭಾಂಗಣದಲ್ಲಿ ಗಣೇಶೋತ್ಸವ ನಡೆಸಲು ಅನುವು ಮಾಡಿಕೊಡಬೇಕು ಎಂದು ಕರಾವಳಿ ಸಂಸದ, ಶಾಸಕರು, ಸಿಂಡಿಕೇಟ್ ಮಾಜಿ ಸದಸ್ಯರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.
2022ರ ಡಿ. 20ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಸುದೀರ್ಘ ಚರ್ಚೆ ಮಾಡಿ ಗಣೇಶೋತ್ಸವವನ್ನು ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇ ಶನಾಲಯದ ಮೂಲಕವೇ ನಡೆಸ ಬೇಕೆಂದು ನಿರ್ಣಯಿಸಲಾಗಿತ್ತು. ಆದರೆ ಮಂಗಳಾ ಆಡಿಟೋರಿಯಂನಲ್ಲಿ ಪೂಜಿಸದೆ ಸೂಕ್ತವಲ್ಲದ ಸ್ಥಳಕ್ಕೆ ಸ್ಥಳಾಂತರಿಸುವ ನಿರ್ಧಾರವು ಭಕ್ತರ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ತಿಳಿಸಲಾಗಿದೆ.
ಸಂಸದ ನಳಿನ್ ಕುಮಾರ್ ಕಟೀಲು, ದ.ಕ. ಮತ್ತು ಉಡುಪಿ ಜಿಲ್ಲೆಯ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ ಕಾಮತ್, ಡಾ| ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಗುರ್ಮೆ ಸುರೇಶ್ ಶೆಟ್ಟಿ, ನಿಕಟ ಪೂರ್ವ ಸಿಂಡಿಕೇಟ್ ಸದಸ್ಯ ರಮೇಶ ಕೆ. ನಿಯೋಗದಲ್ಲಿದ್ದರು.
ವಿದ್ಯಾರ್ಥಿಗಳು ಪ್ರತೀ ವರ್ಷವು ಪಾವತಿಸುವ ಸಾಂಸ್ಕೃತಿಕ ನಿಧಿಯಲ್ಲಿ ಗಣೇಶೋತ್ಸವಕ್ಕೆ ಖರ್ಚು ಮಾಡಲು ಹಣವಿದ್ದರೂ ಹಣವಿಲ್ಲವೆಂದು ಸಮಾಜಕ್ಕೆ ತಪ್ಪು ಸಂದೇಶ ನೀಡು ತ್ತಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ