ಕರಾವಳಿಯಾದ್ಯಂತ ಗಣೇಶೋತ್ಸವ ಸಂಭ್ರಮ


Team Udayavani, Sep 10, 2021, 7:15 AM IST

ಕರಾವಳಿಯಾದ್ಯಂತ ಗಣೇಶೋತ್ಸವ ಸಂಭ್ರಮ

ಉಡುಪಿ/ಮಂಗಳೂರು: ಶುಕ್ರವಾರ ಎಲ್ಲೆಡೆ ಗಣೇಶ ಚತುರ್ಥಿ ಹಬ್ಬದ ಸಂಭ್ರಮ. ಆದರೆ ಕೊರೊನಾ ಕಾಟದಿಂದ ಹಿಂದಿನ ಸಡಗರವಿಲ್ಲ. ಜನರು ಜಾಗರೂಕತೆಯಿಂದ ಹಬ್ಬವನ್ನು ಆಚರಿಸುವಂತೆ ಸರಕಾರ ಮತ್ತು ಜಿಲ್ಲಾಡಳಿತಗಳು ಕಿವಿಮಾತು ಹೇಳಿವೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷ 33 ಉತ್ಸವಗಳು ಕಡಿಮೆ ಆಗಿ 420ಕ್ಕೆ ಇಳಿದಿತ್ತು. ಈ ಬಾರಿ ಒಟ್ಟು 374 ಉತ್ಸವಗಳಿಗೆ ಅನುಮತಿ ನೀಡಲಾಗಿದೆ. ಉಡುಪಿ ನಗರಸಭೆ ಯಲ್ಲಿ 16, ಕುಂದಾಪುರ ಪುರಸಭೆಯಲ್ಲಿ 11, ಕಾರ್ಕಳ ಪುರಸಭೆಯಲ್ಲಿ 6, ಕಾಪು ಪುರಸಭೆಯಲ್ಲಿ 2, ಸಾಲಿಗ್ರಾಮ ಪ.ಪಂ.ಗಳಲ್ಲಿ 6 ಸೇರಿದಂತೆ ಒಟ್ಟು 41 ಗಣೇಶೋತ್ಸವಗಳಿಗೆ ಅನುಮತಿ ನೀಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಉಡುಪಿ ತಾಲೂಕಿನಲ್ಲಿ 43, ಕಾಪುವಿನಲ್ಲಿ 30, ಬ್ರಹ್ಮಾವರದಲ್ಲಿ 54, ಬೈಂದೂರಿನಲ್ಲಿ 23, ಕಾರ್ಕಳದಲ್ಲಿ 126, ಹೆಬ್ರಿಯಲ್ಲಿ 20, ಕುಂದಾಪುರ ತಾಲೂಕಿನಲ್ಲಿ 37 ಒಟ್ಟು 333 ಕಡೆ ಗಣೇಶೋತ್ಸವಗಳಿಗೆ ಅನುಮತಿ ನೀಡಲಾಗಿದೆ.

ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ ಕಳೆದ ವರ್ಷ ಉತ್ಸವಗಳ ಸಂಖ್ಯೆ 21 ಕಡಿಮೆಯಾಗಿ 159ಕ್ಕೆ, ದ.ಕ. ಗ್ರಾಮಾಂತರದಲ್ಲಿ 71 ಉತ್ಸವಗಳು ಕಡಿಮೆಯಾಗಿ 149ಕ್ಕೆ ಇಳಿದಿದ್ದವು. ಈ ವರ್ಷ ಕಮಿಷನರೆಟ್‌ ವ್ಯಾಪ್ತಿಯಲ್ಲಿ 157, ಗ್ರಾಮಾಂತರದಲ್ಲಿ 179 ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 336 ಗಣೇಶೋತ್ಸವಗಳಿಗೆ ಅನುಮತಿ ನೀಡಲಾಗಿದೆ.

ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕೆಲವು ಗಣೇಶೋತ್ಸವ ಗಳಿಗೆ 40-50 ವರ್ಷಗಳ ಇತಿಹಾಸವಿದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಉತ್ಸವ ಒಂದೇ ದಿನದ ಪೂಜೆಗೆ ಸೀಮಿತವಾಗಿದೆ. ಕೆಲವೆಡೆ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯೊಳಗೆ ವಿಸರ್ಜಿಸುವ ಬೆಳವಣಿಗೆ ನಡೆದಿದೆ. ವಿಗ್ರಹದ ಆಗಮನ ಮತ್ತು ವಿಸರ್ಜನೆಗೆ ಮೆರವಣಿಗೆ ನಡೆಯುತ್ತಿಲ್ಲ. ಆರೇಳು ಅಡಿ ಎತ್ತರದ ವಿಗ್ರಹಗಳು 2, 2.5 ಅಡಿಗೆ ಇಳಿದಿವೆ. ಮನೆಗಳಲ್ಲಿ ನಡೆಯುವ ಪೂಜೆಗಳಿಗೆ ಕಳೆದ ವರ್ಷ ಪರಸ್ಥಳದವರು ಬಂದಿರಲಿಲ್ಲ. ಆದರೆ ಈ ಬಾರಿ ಪರಸ್ಥಳದವರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಭೋಜನ ಪ್ರಸಾದವೂ ನಡೆಯುತ್ತಿಲ್ಲ. ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಮಿತಿಯವರನ್ನು ಕರೆದು ಸಭೆ ನಡೆಸಿ ಸರಳ ರೀತಿಯಲ್ಲಿ ಆಚರಿಸಲು ಸೂಚನೆ ನೀಡಲಾಗಿದೆ. ಬಹುತೇಕ ಕಡೆಗಳಲ್ಲಿ ಆಮಂತ್ರಣ ಪತ್ರಿಕೆಯೂ ಮುದ್ರಣವಾಗಿಲ್ಲ, ದೇಣಿಗೆ ಸಂಗ್ರಹವೂ ನಡೆದಿಲ್ಲ. ಧಾರ್ಮಿಕ ಕಟ್ಟಳೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ.

ವಿವಿಧ ಗಣೇಶೋತ್ಸವಗಳು, ಹೆಚ್ಚಿಗೆ ಜನ ಸೇರುವ ಗಣಪತಿ ದೇವಸ್ಥಾನಗಳಲ್ಲಿ ಪೊಲೀಸರು ಸೂಕ್ತ ಬಂದೋಬಸ್ತು ಏರ್ಪಡಿಸಿದ್ದಾರೆ.

1893ರಲ್ಲಿ ಆರಂಭ :

ಬಾಲಗಂಗಾಧರ ತಿಲಕರಿಂದ 1893ರಲ್ಲಿ ಪುಣೆಯ ಮೂರು ಕಡೆ ಮತ್ತು ಮುಂಬಯಿ ಗಿರ್‌ಗಾಂವ್‌ನ ಕೇಶವ್‌ಜಿ ನಾಯಕ್‌ ಚೌಕ್‌ನಲ್ಲಿ ಆರಂಭಗೊಂಡ ಗಣೇಶೋತ್ಸವ ಮುಂಬಯಿ ಕರ್ನಾಟಕ, ಹೈದರಾಬಾದ್‌ ಕರ್ನಾಟಕದಲ್ಲಿ ತಳವೂರಿ ಕರಾವಳಿ ನಾಡಿಗೆ ಬಂದದ್ದು 1948ರಲ್ಲಿ. ಕರಾವಳಿಯ ಪ್ರಥಮ ಗಣೇಶೋತ್ಸವ ಮಂಗಳೂರು ಪ್ರತಾಪನಗರದ ಸಂಘನಿಕೇತನದ್ದು. ಅನಂತರ 1967ರಲ್ಲಿ ಉಡುಪಿಯಲ್ಲಿ (ಕಡಿಯಾಳಿ) ಆರಂಭಗೊಂಡಿತು. ಕಾಸರಗೋಡಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾಸರಗೋಡು ಜಿಲ್ಲೆಯಲ್ಲಿ ಅತಿ ಹಿರಿದಾದುದು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.