ಕೊರೊನಾ ಆತಂಕ ನಡುವೆ ಸಣ್ಣ ಗಾತ್ರದ ವಿಗ್ರಹಕ್ಕೆ ಹೆಚ್ಚಿನ ಬೇಡಿಕೆ


Team Udayavani, Aug 5, 2021, 3:40 AM IST

ಕೊರೊನಾ ಆತಂಕ ನಡುವೆ ಸಣ್ಣ ಗಾತ್ರದ ವಿಗ್ರಹಕ್ಕೆ ಹೆಚ್ಚಿನ ಬೇಡಿಕೆ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೇನು ಹಬ್ಬಗಳ ಸರದಿ ಆರಂಭಗೊಳ್ಳುತ್ತಿದ್ದು, ಸೆಪ್ಟಂಬರ್‌ ತಿಂಗಳಿನಲ್ಲಿ ನಡೆಯುವ ಗಣಪತಿ ಹಬ್ಬಕ್ಕೆ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ.

ಕೊರೊನಾ ಆತಂಕ ನಡುವೆಯೇ ಗಣೇಶ ಚತುರ್ಥಿಗೆ ಗಣಪನ ವಿಗ್ರಹಗಳ ಬೇಡಿಕೆ ಕೇಳಿಬರುತ್ತಿದ್ದು, ಕಲಾವಿದರು ಗಣಪತಿ ಮೂರ್ತಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈಗಾಗಲೇ ಮುಂಗಡ ಬುಕ್ಕಿಂಗ್‌ ಆರಂಭ ಗೊಂಡಿದ್ದರಿಂದ ವಿಗ್ರಹ ತಯಾರಿಕೆಗೆ ಕೊರೊನಾ ದೊಡ್ಡ ಮಟ್ಟದ ಪರಿಣಾಮ ಬೀರಿಲ್ಲ. ಸದ್ಯದ ಪರಿಸ್ಥಿತಿಯಂತೆ ಮನೆಗಳಲ್ಲಿ ಯಥಾ ಪ್ರಕಾರ ಹಬ್ಬದ ಆಚರಣೆ ನಡೆಯಲಿದ್ದು, ಸಣ್ಣ ಗಾತ್ರದ ಗಣೇಶ ವಿಗ್ರಹಕ್ಕೆ ಹೆಚ್ಚಿನ ಬೇಡಿಕೆ ಬರತೊಡಗಿದೆ. ಕಳೆದ ವರ್ಷ ಕೊರೊನಾ ಆತಂಕ ಇದ್ದರೂ ಮನೆಗಳಲ್ಲಿ ಸರಳವಾಗಿ ಗಣೇಶ ಪೂಜೆ ನಡೆದಿತ್ತು. ಅದೇ ರೀತಿ ಈ ಬಾರಿಯೂ ಸರಳ ಗಣೇಶ ಪೂಜೆಗೆ ಒತ್ತು ನೀಡಲಾಗುತ್ತಿದೆ. ಇನ್ನು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆಗೆ ವಿಗ್ರಹಕ್ಕೂ ಮುಂಗಡ ಬುಕ್ಕಿಂಗ್‌ ನಡೆಯುತ್ತಿದೆ.

ಆವೆ ಮಣ್ಣು ಜಿಎಸ್‌ಟಿ ವ್ಯಾಪ್ತಿಗೆ :

“ಗಣಪತಿ ವಿಗ್ರಹ ತಯಾರಿಕೆಗೆ ಆವೆ ಮಣ್ಣು ಬಳಕೆ ಮಾಡಲಾಗುತ್ತದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಆವೆ ಮಣ್ಣನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲಾಗಿದೆ ಹೆಚ್ಚಿನ ಜಿಎಸ್‌ಟಿ ವಿಧಿಸಲಾಗುತ್ತಿದ್ದು, ಮಣ್ಣು ಖರೀದಿಗೆ ದರ ಹೆಚ್ಚಾಗಿದೆ. ಇದರಿಂದಾಗಿ ಕೆಲವು ಕಡೆಗಳಲ್ಲಿ ಗಣಪತಿ ವಿಗ್ರಹಕ್ಕೂ ದರ ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಕುಂದಾಪುರದಲ್ಲಿ ಉತ್ತಮ ಗುಣಮಟ್ಟದ ಆವೆ ಮಣ್ಣು ಸಿಗುತ್ತದೆ. ಇದೇ ಕಾರಣಕ್ಕೆ ಹೆಚ್ಚಿನ ಮಂದಿ ಅಲ್ಲಿಂದ ಮಣ್ಣು ತರುತ್ತಾರೆ’ ಎನ್ನುತ್ತಾರೆ ಗಣಪತಿ ವಿಗ್ರಹ ತಯಾರಾಕರು.

ವಿದೇಶಗಳಿಗೂ ಮಂಗಳೂರಿನ ಗಣಪತಿ:

ಮಂಗಳೂರಿನಲ್ಲಿ ತಯಾರಾಗುವ ಗಣಪತಿ ವಿಗ್ರಹಕ್ಕೆ ದೇಶ-ವಿದೇಶಗಳಲ್ಲಿ ಬೇಡಿಕೆ ಇರುತ್ತದೆ. ಇಲ್ಲಿ ತಯಾರು ಮಾಡಿದ ವಿಗ್ರಹಗಳನ್ನು ವಿಮಾನದ ಮುಖೇನ ವಿದೇಶಗಳಿಗೆ ರವಾನಿಸಲಾಗುತ್ತದೆ. ಆದರೆ ಅಂತಾರಾಷ್ಟ್ರೀಯ ವಿಮಾನ ವ್ಯವಸ್ಥೆ ಇಲ್ಲದ ಕಾರಣ ಈ ಬಾರಿ ವಿದೇಶಗಳಿಗೆ ಬೇಡಿಕೆ ತುಸು ಕಡಿಮೆಯಾಗಿದೆ. ಕೆಲವರು ಜನವರಿಯಲ್ಲಿಯೂ ಗಣಪತಿ ಹಬ್ಬ ಆಚರಿಸುತ್ತಾರೆ. ಆ ವೇಳೆ ಮತ್ತೆ ಬುಕ್ಕಿಂಗ್‌ ಆರಂಭಗೊಳ್ಳಬಹುದೆಂಬ ನಿರೀಕ್ಷೆಯಲ್ಲಿ ವಿಗ್ರಹ ತಯಾರಕರಿದ್ದಾರೆ.

ಸಾರ್ವಜನಿಕ ಆಚರಣೆ ಅನುಮಾನ :

ಕೋವಿಡ್‌ ಮೂರನೇ ಅಲೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಗಣೇಶ ಹಬ್ಬ, ನಾಗರ ಪಂಚಮಿ, ಶ್ರೀಕೃಷ್ಣ ಜನ್ಮಾಷ್ಟಮಿ, ಮಹಾನವಮಿ, ವಿಜಯದಶಮಿ ಸಹಿತ ಹಬ್ಬಗಳ ಸಾರ್ವಜನಿಕ ಆಚರಣೆಗೆ ನಿರ್ಬಂಧ ಉಂಟಾಗುವ ಸಾಧ್ಯತೆ ಇದೆ. ಹಬ್ಬಗಳ ಆರಂಭಕ್ಕೂ ಮುನ್ನ ರಾಜ್ಯ ಸರಕಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ನಿರೀಕ್ಷೆ ಇದೆ ಎಂದು ಜಿಲಾಡಳಿತ ಮೂಲಗಳು ತಿಳಿಸಿವೆ.

ಕೊರೊನಾ ಆತಂಕ ಇದ್ದರೂ ಗಣಪತಿ ವಿಗ್ರಹಕ್ಕೆ ಬೇಡಿಕೆ ಕಡಿಮೆಯಾಗಿಲ್ಲ. ಮನೆಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಯಥಾಪ್ರಕಾರ ಗಣಪತಿ ವಿಗ್ರಹ ಖರೀದಿಸುತ್ತಿದ್ದಾರೆ. ಹೊರ ರಾಜ್ಯ, ವಿದೇಶಗಳಿಗೆ ಗಣಪತಿ ವಿಗ್ರಹ ರವಾನೆಗೆ ಈ ಹಿಂದೆ ಬೇಡಿಕೆ ಇತ್ತು. ಆದರೆ ಸದ್ಯ ಕುಗ್ಗಿದ್ದು, ಜನವರಿ ತಿಂಗಳಿನ ಮಾಘ ಮಾಸದಲ್ಲಿ ಬೇಡಿಕೆ ಬರುವ ಸಾಧ್ಯತೆ ಇದೆ.  -ಕಿಶೋರ್‌ ಪೈ, ಗಣಪತಿ ವಿಗ್ರಹ ತಯಾರಕರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.