ಹೆಬ್ರಿ ಮೂಲದ ಭೂಗತ ಪಾತಕಿ ಸುರೇಶ್ ಪೂಜಾರಿ ಗಡಿಪಾರು
Team Udayavani, Dec 16, 2021, 7:25 AM IST
ಮಂಗಳೂರು: ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಭೂಗತ ಪಾತಕಿ ಸುರೇಶ್ ಪೂಜಾರಿಯನ್ನು ಫಿಲಿಫೈನ್ಸ್ ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.
ಥಾಣೆ, ಕಲ್ಯಾಣ, ಉಲ್ಲಾ ಸನಗರ, ಡೊಂಬಿವಿಲಿ ಮೊದಲಾದೆಡೆಗಳಲ್ಲಿ ನಡೆದ ಸುಲಿಗೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಈತನನ್ನು ಮಂಗಳವಾರ ರಾತ್ರಿ ಹೊಸದಿಲ್ಲಿಗೆ ಕರೆತರಲಾಗಿದೆ.
ವಿಮಾನ ನಿಲ್ದಾಣದಲ್ಲಿ ಬೇಹುಗಾರಿಕೆ ದಳ ಹಾಗೂ ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಳಿಕ ಆತನನ್ನು ಕಸ್ಟಡಿಗೆ ತೆಗೆದು ಕೊಳ್ಳಲು ಮುಂಬಯಿ ಅಪರಾಧ ವಿಭಾಗದ ತಂಡ ಈಗಾಗಲೇ ದಿಲ್ಲಿಗೆ ತೆರಳಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ರೆಡ್ ಕಾರ್ನರ್ ನೋಟಿಸ್
ಮುಂಬಯಿ ಹಾಗೂ ಥಾಣೆ ಪೊಲೀಸರು 2017, 2018ರಲಿ ಸುರೇಶ್ ಪೂಜಾರಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದರು. ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು ಅಕ್ಟೋಬರ್ನಲ್ಲಿ ಫಿಲಿಫೈನ್ಸ್ನಲ್ಲಿ ಬಂಧಿಸಲಾಗಿತ್ತು. ಈತ ಮೂಲತಃ ಕಾರ್ಕಳ ತಾಲೂಕಿನ ಹೆಬ್ರಿಯವನಾಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ:2022ರೊಳಗೆ 11 ಲಕ್ಷ ಮನೆ ನಿರ್ಮಾಣ ಪೂರ್ಣ: ಸಚಿವ ವಿ.ಸೋಮಣ್ಣ
ರವಿ ಪೂಜಾರಿಯ ಬಂಟ
ಸುರೇಶ್ ಪೂಜಾರಿ ಗ್ಯಾಂಗ್ಸ್ಟರ್ ರವಿ ಪೂಜಾರಿ ಜತೆ ನಿಕಟ ಸಂಪರ್ಕದಲ್ಲಿದ್ದ ವ್ಯಕ್ತಿ. ಈತನ ವಿರುದ್ಧ ಮುಂಬ ಯಿಯಲ್ಲಿ 15, ಥಾಣೆಯಲ್ಲಿ 7 ಸೇರಿ ಮಹಾರಾಷ್ಟ್ರಾದ್ಯಂತ ಒಟ್ಟು 24 ಸುಲಿಗೆ ಪ್ರಕರಣ ಗಳಿವೆ. ಎನ್ಸಿಪಿ ನಾಯಕರ ಮೇಲೆ ಹಲ್ಲೆ, ವಕೀಲ ಮಜೀದ್ ಮೆಮನ್ ಮೇಲೆ ಹಲ್ಲೆ ಸೇರಿ ಅನೇಕ ಪ್ರಕರಣಗಳು ಕೂಡ ದಾಖಲಾಗಿವೆ. ಕರ್ನಾ ಟಕದಲ್ಲೂ ಈತನ ವಿರುದ್ಧ ಅನೇಕ ವಂಚನೆ ಪ್ರಕರಣಗಳು ಬಾಕಿಯಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!