ಗ್ಯಾಸ್ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆ
Team Udayavani, Jan 20, 2019, 4:05 AM IST
ಮಂಗಳೂರು: ನಗರದ ಮರೋಳಿ-ಪಡೀಲ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬಂದಿ ಸಕಾಲಿಕ ಕಾರ್ಯಾಚರಣೆ ನಡೆಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ. ಚಾಲಕ ಶರವಣನ್ ಸಿ. (28) ತರಚು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಎಂಆರ್ಪಿಎಲ್ನಿಂದ ಬಿ.ಸಿ.ರೋಡ್- ಹಾಸನ ಮಾರ್ಗವಾಗಿ ಶಿವಮೊಗ್ಗ ಕಡೆ ಸಾಗುತ್ತಿದ್ದ ಟ್ಯಾಂಕರ್ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅನಿಲ ಸೋರಲಾರಂಭಿಸಿತು. ಪಾಂಡೇಶ್ವರ, ಕದ್ರಿ, ಬಂಟ್ವಾಳ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು.
ಮಧ್ಯಾಹ್ನ 2.15 ಕ್ಕೆ ಘಟನೆ ನಡೆದಿದ್ದು, ಕೂಡಲೇ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ತೆರಳಿ ಪಲ್ಟಿಯಾದ ಟ್ಯಾಂಕರ್ಗೆ ನೀರು ಸಿಂಪಡಿಸಿ ಕೂಲಿಂಗ್ ಮಾಡಿದರು. ಬಳಿಕ ಎಚ್ಪಿಸಿಎಲ್ ಕಂಪೆನಿಯ ತಂತಜ್ಞರು ಆಗಮಿಸಿ ಖಾಲಿ ಟ್ಯಾಂಕರನ್ನು ತರಿಸಿ ಅನಿಲವನ್ನು ಅದಕ್ಕೆ ವರ್ಗಾಯಿಸುವ ಕಾರ್ಯವನ್ನು ಸಂಜೆ 4.30ರ ವೇಳೆಗೆ ಆರಂಭಿಸಿದರು. ಈ ಕಾರ್ಯಾಚರಣೆ ರಾತ್ರಿ ಇಡೀ ಮುಂದುವರಿಯುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.ಐಒಸಿ ಕಂಪೆನಿಗೆ ಸೇರಿದ ಈ ಟ್ಯಾಂಕರ್ನಲ್ಲಿ ಸುಮಾರು 11 ಟನ್ ಗ್ಯಾಸ್ ತುಂಬಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ