ಗೌರಿ ಹತ್ಯೆ: 3 ಬಾರಿ ದ.ಕ.ಕ್ಕೆ ಬಂದ ಎಸ್‌ಐಟಿ


Team Udayavani, Oct 7, 2017, 11:46 AM IST

07-28.jpg

ಮಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣ ಕುರಿ ತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಎಸ್‌ಐಟಿ ಸನಾತನ ಸಂಸ್ಥೆಯ ಮೇಲೆ ಶಂಕೆ ವ್ಯಕ್ತಪಡಿಸಿದ್ದು, ಇದರ ಜಾಡು ಹಿಡಿದು ಪೊಲೀಸರು ಮೂರು ಬಾರಿ ದಕ್ಷಿಣ ಕನ್ನಡ ಜಿಲ್ಲೆಗೂ ಬಂದು ಹೋಗಿದ್ದಾರೆ. ಹೀಗಾಗಿ ಇಡೀ ರಾಜ್ಯವನ್ನು ಬೆಚ್ಚಿ ಬೀಳಿ ಸಿದ್ದ ಗೌರಿ ಲಂಕೇಶ್‌ ಹತ್ಯೆ ಪ್ರಕ ರಣದ ಹಿಂದೆ ದಕ್ಷಿಣ ಕನ್ನಡದ ನಂಟು ಇದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ. 

ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡದ ಪೊಲೀಸರು ಜಿಲ್ಲೆಯ ಪುತ್ತೂರು ತಾಲೂಕು ಕಡಬ ಪೊಲೀಸ್‌ ಠಾಣೆಗೆ ಇತ್ತೀಚೆಗೆ 3 ಬಾರಿ ಬಂದು ಮಾಹಿತಿ ಕಲೆ ಹಾಕಿದ್ದಾರೆ.  ಗಮನಾರ್ಹ ಸಂಗತಿ ಎಂದರೆ ಪ್ರಸ್ತುತ ಭೂಗತ ರಾಗಿರುವ ಮಾಲೆಗಾಂವ್‌ ಸ್ಫೋಟ ಪ್ರಕರಣದ ಶಂಕಿತ ಐವರು ಆರೋಪಿ ಗಳ ಪಟ್ಟಿಯಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕಡಬ ಸಮೀಪದ ನೂಜಿ ಬಾಳ್ತಿಲದ ಜಯ ಪ್ರಕಾಶ್‌ ಯಾನೆ ಅಣ್ಣ ಎಂಬ ವ್ಯಕ್ತಿಯ ಹೆಸರು ಇತ್ತು. ಆಗ ಕೂಡ ಪೊಲೀಸರು ಕಡಬಕ್ಕೆ ಬಂದು ಈತನ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಆದರೆ ಆತ ಎಲ್ಲಿದ್ದಾನೆಂದು ತಿಳಿದಿಲ್ಲ. ಈಗ ಗೌರಿ ಹತ್ಯೆ ಪ್ರಕರಣದಲ್ಲಿಯೂ ಜಯ ಪ್ರಕಾಶ್‌ ಕೈವಾಡ ಇರುವ ಬಗ್ಗೆ ಪೊಲೀಸರಿಗೆ ಅನುಮಾನ ಇದ್ದು, ಈ ಕಾರಣಕ್ಕೆ ಎಸ್‌ಐಟಿ ಅಧಿಕಾರಿ ಗಳು ಬರೋಬ್ಬರಿ ಮೂರು ಬಾರಿ ಕಡಬ ಪೊಲೀಸ್‌ ಠಾಣೆಗೆ ಬಂದು ಹೋಗಿದ್ದಾರೆ. ಆ ಮೂಲಕ ನಾಪತ್ತೆಯಾಗಿರುವ ಜಯ ಪ್ರಕಾಶ್‌ ವ್ಯಕ್ತಿಯ ಬಗ್ಗೆ ಸುಳಿವು ಪಡೆಯಲು ಪ್ರಯತ್ನಿಸಿದ್ದಾರೆ. 

ಜಯಪ್ರಕಾಶ್‌ ಸಹಿತ ಐವರ ಮೇಲೆ ಶಂಕೆ 
ನಾಪತ್ತೆಯಾಗಿರುವ ಕೋಲ್ಹಾಪುರದ ಪ್ರವೀಣ್‌ ಲಿಮ್ಕರ್‌ (34), ದಕ್ಷಿಣ ಕನ್ನಡ ಜಿಲ್ಲೆ ಕಡಬದ ಜಯ ಪ್ರಕಾಶ್‌ ಯಾನೆ ಅಣ್ಣ (45), ಪೂನಾದ ಸಾರಂಗ್‌ ಆಕೋಲ್ಕರ್‌ (38), ಸಾಂಗ್ಲಿಯ ರುದ್ರಾ ಪಾಟಿಲ್‌ (37), ಸತಾರಾದ ವಿನಯ್‌ ಪವಾರ್‌ (32) ಅವರು 2009ರಲ್ಲಿ ಗೋವಾದ ಮಾಲೆಗಾಂವ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟದ ಶಂಕಿತ ಆರೋಪಿಗಳಾಗಿದ್ದು, ಈ ಐವರ ತಂಡವೇ ಗೌರಿ ಹತ್ಯೆಯಲ್ಲೂ ಭಾಗಿಯಾಗಿರ ಬೇಕೆಂಬ ಶಂಕೆಯನ್ನು ಎಸ್‌ಐಟಿ ವ್ಯಕ್ತಪಡಿಸುತ್ತಿದೆ.

ರುದ್ರಾ ಪಾಟಿಲ್‌, ಸಾರಂಗ್‌ ಆಕೋಲ್ಕರ್‌ ಮತ್ತು ವಿನಯ್‌ ಪವಾರ್‌ ಅವರು 2013ರ ಆಗಸ್ಟ್‌ 20ರಂದು ಮಹಾರಾಷ್ಟ್ರದ ಕೋಲ್ಹಾಪುರದಲ್ಲಿ ನಡೆದ ವಿಚಾರವಾದಿ ನರೇಂದ್ರ ದಾಬೋಲ್ಕರ್‌ ಕೊಲೆ ಪ್ರಕರಣದಲ್ಲಿ ಭಾಗಿ ಯಾಗಿದ್ದರು ಎಂಬುದಾಗಿ ಸಿಬಿಐ ತನಿಖೆ ತಿಳಿಸಿತ್ತು. 2015ರ ಫೆ. 16ರಂದು ಪೂನಾದಲ್ಲಿ ನಡೆದ ವಿಚಾರವಾದಿ ಗೋವಿಂದ ಪನ್ಸಾರೆ ಹತ್ಯೆ ಮತ್ತು 2015ರ ಆಗಸ್ಟ್‌ 30ರಂದು ಧಾರವಾಡದಲ್ಲಿ ನಡೆದ ಕನ್ನಡ ವಿದ್ವಾಂಸ ಹಾಗೂ ಸಂಶೋಧಕ ಎಂ.ಎಂ. ಕಲಬುರಗಿ ಕೊಲೆ ಪ್ರಕರಣ ಗಳಲ್ಲಿಯೂ ಈ ಮೂವರು ಪಾಲ್ಗೊಂಡಿರಬೇಕೆಂದು ಈ ಪ್ರಕರಣಗಳ ತನಿಖೆ ನಡೆಸಿದ ಮಹಾರಾಷ್ಟ್ರ ಎಸ್‌ಐಟಿ ಮತ್ತು ಕರ್ನಾಟಕದ ಎಸ್‌ಐಟಿ ತಂಡಗಳು ಶಂಕೆ ವ್ಯಕ್ತಪಡಿಸಿದ್ದವು. 

ಸನಾತನ ಸಂಸ್ಥೆಯ ಕಾರ್ಯಕರ್ತ ರಾಗಿದ್ದ ಲಿಮ್ಕರ್‌, ಅಣ್ಣ, ಅಕೋಲ್ಕರ್‌ ಮತ್ತು ಪಾಟೀಲ್‌ ಅವರು 2009ರ ಅ. 9ರಂದು ನಡೆದ ಮಾಲೆ ಗಾಂವ್‌ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರೆಂದು ಶಂಕಿಸ ಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಈ ನಾಲ್ವರು ಶಂಕಿತರನ್ನು “ಮೋಸ್ಟ್‌ ವಾಂಟೆಡ್‌’ ವ್ಯಕ್ತಿಗಳೆಂದು ಗುರುತಿಸಿ ಅವರ ಪತ್ತೆಗಾಗಿ ರೆಡ್‌ ಕಾರ್ನರ್‌ ನೋಟಿಸು ಜಾರಿ ಮಾಡಿತ್ತು.

ಜಯಪ್ರಕಾಶ್‌ ಯಾನೆ ಅಣ್ಣ ಈ ಹಿಂದೆ ಸನಾತನ ಸಂಸ್ಥೆಯ ವಾಹನ ಚಾಲಕನಾಗಿ ದ.ಕ.ದಲ್ಲಿ ಕಾರ್ಯ ನಿರ್ವಹಿಸುತ್ತಿದ್ದನು. ಎಸ್‌ಐಟಿ ತಂಡ ಕಡಬ ಠಾಣೆಯಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭ ಜಯ ಪ್ರಕಾಶ್‌ ಮನೆಯ ಸದಸ್ಯರ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೆಲವು ವರ್ಷ ಗಳಿಂದ ಜಯ ಪ್ರಕಾಶ್‌ ಸಂಪರ್ಕ ಇಲ್ಲ ಎಂದು ಮನೆ ಮಂದಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಮಾಹಿತಿ ಇಲ್ಲ : ಐಜಿಪಿ ಹೇಮಂತ್‌
ಈ ಬಗ್ಗೆ ಉದಯವಾಣಿಯು ಪಶ್ಚಿಮ ವಲಯದ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಅವರ ಪ್ರತಿಕ್ರಿಯೆಯನ್ನು ಬಯಸಿದಾಗ ಎಸ್‌ಐಟಿ ತಂಡ ಬಂದು ಹೋದ ಬಗ್ಗೆ ತಮಗೇನೂ ಮಾಹಿತಿ ಇಲ್ಲ. ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿಯವರೇ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮಾಲೆಗಾಂವ್‌ ಸ್ಫೋಟ: ತನಿಖೆಗೆ ಬಂದಿದ್ದರು
ಮಾಲೆಗಾಂವ್‌ ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಪೊಲೀಸರು ಕಡಬಕ್ಕೆ ಬಂದು ವಿಚಾರಣೆ ನಡೆಸಿದ್ದರು. ಜಯಪ್ರಕಾಶ್‌ ನಾಪತ್ತೆ ಯಾಗಿದ್ದ ಕಾರಣ ಒಂದು ಪೋಸ್ಟರ್‌ನಲ್ಲಿ ಆತನ ಫೋಟೋ ಮತ್ತು ವಿವರ ಗಳನ್ನು ಬರೆದು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಅಂಟಿಸಿ ಹೋಗಿದ್ದರು. 

ಹಿಲರಿ ಕ್ರಾಸ್ತಾ 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.