ಗೌರಿ ಹೊಳೆಯ ಸೇತುವೆ ಶಿಥಿಲ, ಪಿಲ್ಲರ್ ಕುಸಿಯುವ ಅಪಾಯ
Team Udayavani, May 17, 2018, 12:29 PM IST
ಸವಣೂರು: ಪುತ್ತೂರು ತಾ| ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾ| ನ ಪೆರುವಾಜೆ ಗ್ರಾಮವನ್ನು ಜೋಡಿಸುವ ಗೌರಿ ಹೊಳೆಗೆ ಅಡ್ಡಲಾಗಿ ನಿರ್ಮಿಸಿದ ಏಕೈಕ ಸೇತುವೆಯೊಂದು ತೀರಾ ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿಯುವ ಹಂತಕ್ಕೆ ಬಂದಿದ್ದು, ಈ ಭಾಗದ ಜನರು ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದ್ದಾರೆ. ಸೇತುವೆಯ ಪಿಲ್ಲರ್ ಶಿಥಿಲಾವಸ್ಥೆಗೆ ತಲುಪಿದ್ದು, ಜನರು ಭೀತಿಯಿಂದಲೇ ಸಾಗ ಬೇಕಾದ ಪರಿಸ್ಥಿತಿಯಿದೆ.
ಅಪಾಯಕಾರಿ
ಸೇತುವೆಯ ಎರಡೂ ಬದಿಯಲ್ಲೂ ಸರಿಯಾದ ತಡೆಗೋಡೆ ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ವಾಹನ ಸವಾರರಿಗೆ, ಪುಟ್ಟ ಮಕ್ಕಳಿಗೆ ಅಪಾಯಕಾರಿ ಸ್ಥಿತಿಯನ್ನು ತಂದೊಡ್ಡಿದೆ. ಮಳೆಗಾಲದಲ್ಲಿ ಹೊಳೆಯಲ್ಲಿ ನೀರು ತುಂಬಿ ಹರಿಯುತ್ತಿರುವುದರಿಂದ ಸ್ವಲ್ಪ ಎಡವಟ್ಟಾದರೂ ಜೀವಕ್ಕೆ ಅಪಾಯ ತಂದೊಡ್ಡುವ ಸ್ಥಿತಿಯಲ್ಲಿದೆ.
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಇಲ್ಲಿ ಸುಮಾರು 25 ವರ್ಷಗಳ ಹಿಂದೆ ಜನರ ಬೇಡಿಕೆಯಂತೆ ಇಲ್ಲಿ ಕಿರು ಸೇತುವೆಯೊಂದನ್ನು ನಿರ್ಮಿಸಲಾಗಿತ್ತು. ಗುಣಮಟ್ಟದ ಕೊರತೆ, ನೀರಿನ ಪ್ರಮಾಣ ಹೆಚ್ಚಳದಿಂದ ಈ ಸೇತುವೆ ಈಗ ಕುಸಿಯುವ ಹಂತಕ್ಕೆ ಬಂದು ತಲುಪಿದೆ.
ಇದು ಕಿರು ಸೇತುವೆಯಾದ ಕಾರಣ ಘನ ವಾಹನಗಳು ಹೋಗುವಂತಿಲ್ಲ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ ಪಾಲ್ತಾಡಿ ಭಾಗದಿಂದ ಸವಣೂರು, ಕಾಣಿಯೂರು, ಪೆರುವಾಜೆಗೆ ಹೋಗಲು ಪುತ್ತೂರು ಅಥವಾ ಬೆಳ್ಳಾರೆ ಮೂಲಕ ಸುತ್ತಿ ಬಳಸಿ ಹೋಗಬೇಕಾದ ಪರಿಸ್ಥಿತಿ ಬರಲಿದೆ.
ಈ ಸೇತುವೆ ದಾಟಿ ಮಕ್ಕಳು ಚೆನ್ನಾವರ ಕಿ.ಪ್ರಾ. ಶಾಲೆ, ಮುಕ್ಕೂರು ಹಿ.ಪ್ರಾ. ಶಾಲೆ, ಸವಣೂರು, ಪೆರುವಾಜೆ ಕಾಲೇಜುಗಳಿಗೆ ಹೋಗುತ್ತಿದ್ದಾರೆ. ಯಾವ ಸಂದರ್ಭದಲ್ಲಿ ಅಪಾಯ ತಂದೊಡ್ಡಬಹುದು ಎಂಬುದನ್ನು ಊಹಿಸಲು ಅಸಾಧ್ಯ.
ಈ ಬಾರಿ ನಿರ್ಮಾಣ
ಈ ಬಾರಿ ಖಂಡಿತವಾಗಿಯೂ ಸೇತುವೆ ನಿರ್ಮಾಣ ಕಾಮಗಾರಿ ನಡೆಯಲಿದೆ. ಶಾಸಕರು ಭರವಸೆ ನೀಡಿದ್ದಾರೆ. ಶಾಸಕ ಅಂಗಾರರು ನೀಡಿದ ಭರವಸೆ ಈಡೇರುವ ಆಶಯ ನಮ್ಮದು.
– ಧೀರಜ್ ರೈ ಚೆನ್ನಾವರ
ಅಭ್ಯುದಯ ಯುವಕ ಮಂಡಲದ ಕಾರ್ಯದರ್ಶಿ
ಪ್ರವೀಣ್ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ