ಗೌರಿ ಲಂಕೇಶ್ ಕೊಲೆಗೆ ವ್ಯಾಪಕ ಖಂಡನೆ
Team Udayavani, Sep 7, 2017, 9:54 AM IST
ಮಂಗಳೂರು: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಗೆ ವ್ಯಾಪಕ ಖಂಡನೆ ಮತ್ತು ಪ್ರತಿಭಟನೆ ವ್ಯಕ್ತವಾಗಿದೆ. ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಸಂಜೆ ಲಾಲ್ಬಾಗ್ ಜಂಕ್ಷನ್ ಎದುರು ಮೊಂಬತ್ತಿ ಉರಿಸಿ ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಯಿತು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶಾಲೆಟ್ ಪಿಂಟೊ, ರಾಜ್ಯ ಉಪಾಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ ಹಾಗೂ ಮೇಯರ್ ಕವಿತಾ ಸನಿಲ್ ಅವರು ಮಾತನಾಡಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಸಿಎಫ್ಐ ವತಿಯಿಂದ ಜ್ಯೋತಿ ಜಂಕ್ಷನ್ನಲ್ಲಿ, ವೆಲ್ಫೆರ್ ಪಾರ್ಟಿ ಆಫ್ ಇಂಡಿಯಾ, ಡಿವೈಎಫ್ಐ ಮತ್ತು ಇತರ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು, ಪಿಎಫ್ಐ ವತಿಯಿಂದ ಪುರಭವನ ಎದುರಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಮತ್ತು ಭಾರತೀಯ ವಿಚಾರ ವಾದಿಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನರೇಂದ್ರ ನಾಯಕ್ ಅವರು ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿದ್ದಾರೆ. ಗೌರಿ ಲಂಕೇಶ್ ಅವರ ಹತ್ಯೆ ಮಾನವೀಯ ಸಮಾಜ ತಲೆ ತಗ್ಗಿಸುವಂತಹ ಕೃತ್ಯವಾಗಿದೆ ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಗರ ಕಾರ್ಯದರ್ಶಿ ಮಣಾಲ ತಿಳಿಸಿದ್ದು, ಗೌರಿ ಲಂಕೇಶ್ ಮತ್ತು ಈ ಹಿಂದೆ ನಡೆದ ಹತ್ಯೆಗಳಿಗೆ ಕಾರಣರಾದವರನ್ನು ಕೂಡಲೇ ಬಂಧಿಸ ಬೇಕೆಂದು ಆಗ್ರಹಿಸಿದ್ದಾರೆ.
ಸಮುದಾಯ ಕರ್ನಾಟಕ ರಾಜ್ಯ ಸಮಿತಿ ಉಪಾಧ್ಯಕ್ಷ ವಾಸುದೇವ ಉಚ್ಚಿಲ, ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ| ಇಸ್ಮಾಯಿಲ್ ಎನ್., ಕರ್ನಾಟಕ ಇಸ್ಲಾಮಿಕ್ ಸಾಹಿತ್ಯ ಅಕಾಡೆಮಿಯ ಪದಾಧಿಕಾರಿಗಳು ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ