ಮಳೆಕೊಯ್ಲು ಅಳವಡಿಸಿ ನೀರಿನ ಸಮಸ್ಯೆಯಿಂದ ದೂರವಿರಿ: ಡಾ| ಭರತ್‌ ಶೆಟ್ಟಿ 


Team Udayavani, Jul 1, 2019, 5:28 AM IST

male-koilu

ಮಹಾನಗರ: ಮನೆಗಳಲ್ಲಿ ಮಳೆಕೊಯ್ಲು ಅಳವಡಿಸದಿದ್ದರೆ ಮುಂದಿನ ಬೇಸಗೆಯಲ್ಲಿ ಜಲಕ್ಷಾಮ ಎದುರಿ ಸಬೇಕಾದ ಪರಿಸ್ಥಿತಿ ಬರಬಹುದು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದರು.

ಭಾರತ್‌ಮಾತ ನಾಗರಿಕ ಪರಿಸರ ವೇದಿಕೆ ಕೋಡಿಕಲ್ ವತಿಯಿಂದ ನಗರದ ಕೋಡಿಕಲ್ನಲ್ಲಿರುವ ಜಿಎಸ್‌ಬಿ ಸಭಾಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಪರಿಸರದಲ್ಲಿ ಗಿಡನೆಡುವ ಮತ್ತು ವಾರ್ಡ್‌ ನ ಮನೆ-ಮನೆಗಳಿಗೆ ಔಷಧ ಗಿಡ ಕೊಡುವ ಹಾಗೂ ಮಳೆಕೊಯ್ಲಿನ ವಿಷಯದ ಬಗ್ಗೆ ಮಾಹಿತಿ, ಪ್ರಾತ್ಯಕ್ಷಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಳೆಕೊಯ್ಲು ಅಳ ವಡಿಸಿದರೆ, ಅತ್ಯಂತ ಶುದ್ಧವಾದ ನೀರು ಪಡೆ ಯಲು ಸಾಧ್ಯ. ಅಲ್ಲದೆ, ಅಂತರ್ಜಲ ಮಟ್ಟ ಏರಿಕೆಯಾಗಲೂ ಸಾಧ್ಯವಿದೆ ಎಂದರು.

ಈ ವರ್ಷ ನಗರದಲ್ಲಿ ಅತೀ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಎದುರಿಸ ಬೇಕಾಯಿತು. ಮಳೆ ಬಂದಾಗ ಅತಿವೃಷ್ಟಿ ಯಾಗುತ್ತದೆ, ಮಳೆ ಬರದಿದ್ದರೆ ಬರ ಇರುತ್ತದೆ. ಸಮತೋಲನದಲ್ಲಿ ಮಳೆ ಬಂದರೆ ಮಾತ್ರ ಮಳೆ ನೀರು ಭೂಮಿಯಲ್ಲಿ ಇಂಗುತ್ತದೆ. ಪರಿಸರ ನಾಶವಾಗುತ್ತಿದೆ. ಮರಗಳನ್ನು ಕಡಿದು, ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಕಂಡಕಂಡಲ್ಲಿ ಹಾಕಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ ಎಂದರು.

ಅಸಮರ್ಪಕ ಒಳಚರಂಡಿ ವ್ಯವಸ್ಥೆ

ನಗರದಲ್ಲಿರುವ ಅಸಮರ್ಪಕ ಒಳ ಚರಂಡಿ ವ್ಯವಸ್ಥೆಯಿಂದ ನೀರು ಕಲುಷಿತ ವಾಗುತ್ತಿದೆ. ಮನೆಗಳ ಬಾವಿಗಳಲ್ಲಿ, ಕೆರೆಗಳಲ್ಲಿ ನೀರು ಮಲಿನವಾಗಿದೆ. ಇದನ್ನು ಸರಿಪಡಿಸಲು ಪಾಲಿಕೆಗೆ ಸಾಧ್ಯ ವಾಗಿಲ್ಲ. ತ್ಯಾಜ್ಯ ವಿಲೇವಾರಿಯ ಬಗ್ಗೆ ಗಮನ ಹರಿಸಬೇಕಾಗಿದೆ. ‘ನಿಮ್ಮ ಮನೆಯ ತ್ಯಾಜ್ಯಗಳಿಗೆ ನೀವೇ ಹೊಣೆಗಾರರು’ ಎಂಬ ಕಾನೂನನ್ನು ಕೇರಳ ರಾಜ್ಯದಲ್ಲಿ ತರಲಾಗಿದೆ. ಇದನ್ನು ರಾಜ್ಯದಲ್ಲೂ ಅಳವಡಿಸಬೇಕಾದ ಅನಿವಾರ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸ ಬೇಕು. ಪ್ರಕೃತಿಯನ್ನು ಪ್ರೀತಿಸಿದರೆ ಅದೂ ನಮ್ಮನ್ನು ಪ್ರೀತಿಸುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪತ್ರಾಂಕಿತ ವ್ಯವಸ್ಥಾಪಕಿ ಪೂರ್ಣಿಮಾ ರಾಜಗೋಪಾಲ ರೈ, ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಗಳೂರು ಉತ್ತರಮಂಡಲ ಬಿಜೆಪಿ ಪ್ರ. ಕಾರ್ಯದರ್ಶಿ ಅಶೋಕ್‌ ಕೃಷ್ಣಾಪುರ, ಉಮಾನಾಥ ಅಮೀನ್‌, ವಕೀಲ ಬಿ.ಆರ್‌. ಸದಾಶಿವ, ಶೈಲಜಾ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಕಾರ್ಯದರ್ಶಿ ಶೈಲಜಾ ಸತೀಶ್‌, ಬಿ. ರಾಮದಾಸ್‌ ನಾಯಕ್‌, ಡಾ| ಎಂ. ಮುರಳಿ ಕುಮಾರ್‌ ಚಿಲಿಂಬಿ, ಜಾನ್‌ರಾಜ್‌ ಕೋಡಿಕಲ್, ಗಣೇಶ್‌ ಕಾಮತ್‌, ಸುಂದರ್‌ ಮೊದಲಾದವರಿದ್ದರು. ಲೋಕನಾಥ ಬಂಗೇರ ಸ್ವಾಗತಿಸಿ, ಪ್ರಿಯಾ ಹರೀಶ್‌ ನಿರೂಪಿಸಿದರು.

ಕೋಡಿಕಲ್ ಶ್ರೀ ಮೂಕಾಂಬಿಕಾ, ಮಹಾಕಾಳಿ, ಕೊರಗಜ್ಜ ಕ್ಷೇತ್ರದ ಧರ್ಮ ದರ್ಶಿ ಜಯ ಪಾತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದ ನಳಿನ್‌ ಕುಮಾರ್‌ ಕಟೀಲು ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಟ್ಟರು. ಇ.ಆರ್‌. ಕಲ್ಬಾವಿ ರಾಜೇಂದ್ರ ರಾವ್‌ ಮಳೆ ಕೊಯ್ಲು ಕುರಿತು ಪ್ರಾತ್ಯಕ್ಷಿಕೆ ನೀಡಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.