ಸಂಚಾರಕ್ಕೆ ಸಿದ್ಧಗೊಳ್ಳುತ್ತಿದೆ ಪಡೀಲ್‌ ಅಂಡರ್‌ ಪಾಸ್‌

ನನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಮರುಜೀವ

Team Udayavani, Feb 4, 2020, 5:29 AM IST

pro-31

ಮಹಾನಗರ: ಪಂಪ್‌ವೆಲ್‌ ಫ್ಲೈಓವರ್‌ ಕಾಮಗಾರಿ ರೀತಿಯಲ್ಲಿ ಎರಡು ವರ್ಷಗಳಿಂದ ನನೆಗುದಿಗೆ ಬಿದ್ದು ಬಾಕಿಯಾಗಿದ್ದ ರಾ.ಹೆ. 75ರ ಪಡೀಲ್‌ ಅಂಡರ್‌ಪಾಸ್‌ ಕಾಮಗಾರಿಗೆ ಇದೀಗ ಮರುಜೀವ ದೊರೆತಿದ್ದು, ಸಂಚಾರಕ್ಕೆ ಮುಕ್ತವಾಗುವ ಸನ್ನಿಹಿತದಲ್ಲಿದೆ.

ಹಲವು ವಿವಾದ ಹಾಗೂ ಗಡುವುಗಳನ್ನು ಎದುರಿಸುತ್ತ ಸಾಕಷ್ಟು ಸುದ್ದಿಯಾಗಿದ್ದ ಪಂಪ್‌ವೆಲ್‌ ಫ್ಲೈಓವರ್‌ ಇತ್ತೀಚೆಗೆ ಉದ್ಘಾಟನೆಗೊಂಡಿದ್ದು, ಪಡೀಲ್‌ ಅಂಡರ್‌ಪಾಸ್‌ ಯಾವಾಗ ಮುಗಿಯಲಿದೆ? ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿತ್ತು. ಸದ್ಯ ಕಾಮಗಾರಿ ನಡೆಯುತ್ತಿರುವ ರೀತಿಯನ್ನು ನೋಡುವುದಾದರೆ ಫೆಬ್ರವರಿ ತಿಂಗಳೊಳಗೆ ಪಡೀಲ್‌ ಅಂಡರ್‌ ಪಾಸ್‌ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ.

ಶೇ.90ರಷ್ಟು ಕಾಮಗಾರಿ ಪೂರ್ಣ
ಸದ್ಯ ಪಡೀಲ್‌ ಅಂಡರ್‌ಪಾಸ್‌ನ ಶೇ.90ರಷ್ಟು ಕಾಮಗಾರಿ ಪೂರ್ಣವಾಗಿದೆ. ಅಂಡರ್‌ಪಾಸ್‌ನ ಒಳಭಾಗದಲ್ಲಿ ಪೈಂಟಿಂಗ್‌ ಕೆಲಸ ನಡೆಯುತ್ತಿದೆ. ಜತೆಗೆ, ಅಂಡರ್‌ಪಾಸ್‌ ಮುಂಭಾಗ ಕಮಾನು ಮಾದರಿಯನ್ನು ಸದ್ಯ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಕಾಮಗಾರಿ ಕೆಲವೇ ದಿನಗಳಲ್ಲಿ ಆರಂಭ ವಾಗುವ ನಿರೀಕ್ಷೆಯಿದೆ. ಇಲ್ಲಿಯವರೆಗಿನ ಕಾಮಗಾರಿಯನ್ನು ರೈಲ್ವೇ ಇಲಾಖೆ ಮಾಡಿದ್ದು, ಮುಂದೆ ಅಂಡರ್‌ಪಾಸ್‌ಗೆ ಹೆದ್ದಾರಿ ಸಂಪರ್ಕ ಕಾಮಗಾರಿಯನ್ನು ಹೆದ್ದಾರಿ ಇಲಾಖೆ ನಡೆಸಲಿರುವುದರಿಂದ ಕೆಲವೇ ದಿನಗಳಲ್ಲಿ ಕಾಮಗಾರಿ ಜವಾಬ್ದಾರಿ ಹೆದ್ದಾರಿ ಇಲಾಖೆಯ ಹೆಗಲೇರಲಿದೆ. ಸಂಸದ ನಳಿನ್‌ ಕುಮಾರ್‌ ಕಟೀಲು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇತ್ತೀಚೆಗೆ ಮಂಗಳೂರಿನಲ್ಲಿ ಸಭೆ ನಡೆಸಿ, ರೈಲ್ವೇ ಇಲಾಖೆಯಿಂದ ಹೆದ್ದಾರಿ ಇಲಾಖೆಗೆ ಕಾಮಗಾರಿಗಾಗಿ ವಹಿಸಿ ಕೊಡುವ ಬಗ್ಗೆ ಸೂಚನೆ ನೀಡಲಾಗಿತ್ತು. ಹೆದ್ದಾರಿ ಇಲಾಖೆಯು ರೈಲ್ವೇ ಇಲಾಖೆಗೆ ಪತ್ರ ಬರೆದಿದೆ.

ಇಲಾಖೆಗಳ ವಾದ- ವಿವಾದದಿಂದ ಸಮಸ್ಯೆ!
ಅಂಡರ್‌ಪಾಸ್‌ ನಿರ್ಮಾಣ ಕಾಮ ಗಾರಿಗೆ ಒಟ್ಟು 6 ಕೋಟಿ ರೂ. ವೆಚ್ಚ. “ಬಾಕ್ಸ್‌’ ಮಾದರಿಯ ಕಾಂಕ್ರೀಟ್‌ ಬ್ರಿಡ್ಜ್ ನಿರ್ಮಿಸಿ ಅಂಡರ್‌ಪಾಸ್‌ ನಿರ್ಮಾಣ ಮಾಡಲಾಗಿದೆ. ಈ ಕಾಮಗಾರಿ ಮುಗಿದು ಹಲವು ತಿಂಗಳು ಕಳೆದಿವೆ. ಆದರೆ ಆ ಬಳಿಕ ಕೆಲಸ ನಿಧಾನವಾಗಲು ಆರಂಭವಾಯಿತು. ಒಪ್ಪಂದದ ಪ್ರಕಾರ; ಮಳೆ ನೀರು ಹರಿದು ಹೋಗಲು ಓಪನ್‌ ಡ್ರೈನೇಜ್‌ ನಿರ್ಮಾಣ, ಮರ, ವಿದ್ಯುತ್‌ ಕಂಬ ತೆರವು ರೈಲ್ವೇ ಇಲಾಖೆ ಮಾಡಬೇಕಿತ್ತು ಎಂಬುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಾದವಾಗಿತ್ತು. ಆದರೆ, ಈ ಎಲ್ಲ ಕೆಲಸಗಳನ್ನು ಹೆದ್ದಾರಿ ಇಲಾಖೆ ಮಾಡಬೇಕು ಎಂಬುದು ರೈಲ್ವೇ ಇಲಾಖೆಯ ಪ್ರತಿವಾದವಾಗಿತ್ತು. ಈ ವಾದ-ಪ್ರತಿವಾದವೇ ಕಾಮಗಾರಿ ನಿಧಾನವಾಗಲು ಕಾರಣವಾಯಿತು. ಸದ್ಯ ಸ್ಥಳದಲ್ಲಿದ್ದ ಬೃಹತ್‌ ಮರಗಳನ್ನು ಹೆದ್ದಾರಿ ಇಲಾಖೆ ವಿಲೇವಾರಿ ಮಾಡಿದ್ದು, ವಿದ್ಯುತ್‌ ಕಂಬಳನ್ನೂ ತೆರವು ಮಾಡಲಾಗಿದೆ.

ನಿರ್ವಹಣೆಯಿಲ್ಲದ ಹಳೆ ಅಂಡರ್‌ಪಾಸ್‌
ಈ ಮಧ್ಯೆ, ವಾಹನಗಳು ನಿತ್ಯ ಸಂಚಾರ ನಡೆಸುತ್ತಿರುವ ಪಡೀಲ್‌ನ ಮೊದಲ ಅಂಡರ್‌ಪಾಸ್‌ ಸದ್ಯ ನಿರ್ವಹಣೆ ಇಲ್ಲದೆ ಸೊರಗಿದೆ. ಇನ್ನೊಂದು ಅಂಡರ್‌ಪಾಸ್‌ ನಿರ್ಮಾಣವಾಗದ ಕಾರಣದಿಂದ ಅಲ್ಲಿಯವರೆಗೆ ಏಕ ಮುಖ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ವಾಹನಗಳ ಎಡೆಬಿಡದ ಸಂಚಾರದಿಂದ ಅಂಡರ್‌ಪಾಸ್‌ ಸಮಸ್ಯೆಗಳಿಗೆ ಸಿಲುಕಿದೆ. ಡಾಮರು ಎದ್ದು ಹೋಗಿ ರಸ್ತೆಯೂ ಸಂಪೂರ್ಣ ಹಾಳಾಗಿದೆ. ಇತ್ತೀಚೆಗೆ ಪ್ಯಾಚ್‌ವರ್ಕ್‌ ಮಾಡಿದ್ದರೂ ಅರೆಬರೆ ಕಾಮಗಾರಿ ನಡೆದಿದೆ. ಇಲ್ಲಿ ಸರಿಯಾದ ಚರಂಡಿ ನಿರ್ಮಿಸದೆ ಮಳೆಗಾಲದಲ್ಲಿ ಸೇತುವೆಯೊಳಗೆ ಹಲವು ಅಡಿಗಳಷ್ಟು ನೀರು ನಿಲ್ಲುತ್ತದೆ.

5.50 ಮೀ. ಎತ್ತರದ ಅಂಡರ್‌ಪಾಸ್‌
ರಾ.ಹೆ.75ರ ಪಡೀಲ್‌ನಲ್ಲಿ ವರ್ಷಗಳ ಹಿಂದೆ ನಿರ್ಮಾಣವಾಗಿರುವ ಹೊಸ ರೈಲ್ವೇ ಕೆಳಸೇತುವೆಯ ಪಕ್ಕದಲ್ಲೇ ಹಳೆಯ ಕೆಳಸೇತುವೆಯನ್ನು ಸುಸಜ್ಜಿತ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಇಂಡಿಯನ್‌ ರೋಡ್ಸ್‌ ಕಾಂಗ್ರೆಸ್‌(ಐಆರ್‌ಸಿ) ನಿಯಮದಂತೆ 5.50 ಮೀ. ಎತ್ತರದಲ್ಲಿ ಹಾಗೂ ಸುಮಾರು 14 ಮೀ. ಅಗಲದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿದೆ. ಆರ್‌ಟಿಒ ನಿಯಮದಂತೆ ಕಂಟೈನರ್‌ ಸಹಿತ ಒಂದು ವಾಹನವು ಗರಿಷ್ಠ 4.8 ಮೀ. ಎತ್ತರವನ್ನು ಮಾತ್ರ ಹೊಂದಿರಬಹುದಾಗಿದೆ ಎಂಬುದು ಹೆದ್ದಾರಿ ಇಲಾಖೆಯ ಅಧಿಕಾರಿಗಳ ಲೆಕ್ಕಾಚಾರ. ಪಾದಚಾರಿಗಳಿಗೆ ಸಂಚರಿಸಲು ಅನುವಾಗುವಂತೆ ಹೊಸ ಅಂಡರ್‌ಪಾಸ್‌ನಲ್ಲಿ ಸೌಕರ್ಯವಿದೆ. ಮಳೆ ನೀರು ನಿಲ್ಲದಂತೆ, ಮಳೆಗಾಲದಲ್ಲಿ ಸಮಸ್ಯೆ ಆಗದಂತೆ ಚರಂಡಿ ಕಾಮಗಾರಿ ಮಾಡಲಾಗಿದೆ.

ರೈಲ್ವೇ ಕೆಲಸ ಮುಗಿದ ತತ್‌ಕ್ಷಣ ರಸ್ತೆ ನಿರ್ಮಾಣ
ರೈಲ್ವೇ ಇಲಾಖೆಯ ಕಾಮಗಾರಿ ಮುಗಿದ ತತ್‌ಕ್ಷಣವೇ ಅಂಡರ್‌ಪಾಸ್‌ ಸಂಪರ್ಕದ ರಸ್ತೆ ಕಾಮಗಾರಿ ಆರಂಭಿಸಲಾಗುವುದು. ಈ ಸಂಬಂಧ ರೈಲ್ವೇ ಇಲಾಖೆಗೆ ಪ್ರಾಧಿಕಾರದಿಂದ ಪತ್ರ ಬರೆಯಲಾಗಿದೆ. ಶೀಘ್ರದಲ್ಲಿ ಸಂಚಾರಕ್ಕೆ ಅನುವಾಗುವಂತೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು.
 - ಶಿಶು ಮೋಹನ್‌, ಯೋಜನ ನಿರ್ದೇಶಕರು,ರಾ.ಹೆ. ಪ್ರಾಧಿಕಾರ-ಮಂಗಳೂರು

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.