ಗೋವಾದ ಹೈ ಅಲರ್ಟ್ ಸ್ಥಿತಿ ಕರಾವಳಿಯಲ್ಲಿ ಇಲ್ಲ
Team Udayavani, Apr 9, 2018, 8:01 AM IST
ಮಂಗಳೂರು/ಉಡುಪಿ: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಗೋವಾ ಕರಾವಳಿಯಲ್ಲಿ ಗೋವಾ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದರೂ ಮಂಗಳೂರು ಕರಾವಳಿಯಲ್ಲಿ ಇದುವರೆಗೆ ಅಂತಹ ಯಾವುದೇ ಪರಿಸ್ಥಿತಿ ಇಲ್ಲ.
ಕರಾವಳಿ ತೀರದಲ್ಲಿ ಸಾಮಾನ್ಯವಾಗಿ ಉಗ್ರರ ಭೀತಿ, ತುಫಾನು, ಚಂಡ ಮಾರುತ ಇತ್ಯಾದಿ ಯಾವುದೇ ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಪ್ರಥಮವಾಗಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರಿಗೆ ಎಚ್ಚರಿಕೆ ನೀಡಲಾಗುತ್ತದೆ. ಆದರೆ ಅಂತಹ ಯಾವುದೇ ಎಚ್ಚರಿಕೆ ಇದುವರೆಗೆ ಬಂದಿಲ್ಲ ಎಂದು ಮೀನುಗಾರಿಕಾ ಮೂಲಗಳು ತಿಳಿಸಿವೆ. ಕರಾವಳಿ ಕಾವಲು ಪಡೆಯ ಪೊಲೀಸರಿಗೂ ಯಾವುದೇ ಸೂಚನೆ ಬಂದಿಲ್ಲ.
ಇಲ್ಲಿನ ಜಿಲ್ಲಾಡಳಿತಕ್ಕೆ ಅಂತಹ ಯಾವುದೇ ಸೂಚನೆ ಬಂದಿಲ್ಲ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ದೇಶದ ಭದ್ರತೆಗೆ ಸಂಬಂಧಿಸಿದ ಕೆಲವೊಂದು ಸಂಗತಿಗಳನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲಾಗುತ್ತಿಲ್ಲ; ಈ ವಿಷಯದಲ್ಲಿ ಗೌಪ್ಯತೆಯನ್ನು ಕಾಯ್ದುಕೊಂಡು ಬರಲಾಗುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ