ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು
Team Udayavani, Apr 13, 2024, 7:00 AM IST
ಮಂಗಳೂರು: ಬೆಂಗಳೂರು-ಮಂಗಳೂರು ರೈಲಿನ ಎಸಿ ಕೋಚ್ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಜಪ್ಪುವಿನ 74 ವರ್ಷದ ವೃದ್ಧೆ, ಆಕೆಯ ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ಎ. 7ರಂದು ಬೆಂಗಳೂರಿನಿಂದ ಮಂಗಳೂರಿಗೆ ಬರುವ ರೈಲಿನಲ್ಲಿ ಹೊರಟು ಮರುದಿನ ಬೆಳಗ್ಗೆ ಮನೆಗೆ ತಲುಪಿದಾಗ ವ್ಯಾನಿಟಿ ಬ್ಯಾಗ್ನಲ್ಲಿ ಇಟ್ಟಿದ್ದ ಎರಡು ಬಳೆಗಳು, ಸರ ಸೇರಿದಂತೆ ಒಟ್ಟು 59.885 ಗ್ರಾಂ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ.
ಸಹ ಪ್ರಯಾಣಿಕನ ಕೃತ್ಯ?
ವೃದ್ಧೆಯ ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ರಾತ್ರಿ 11.30ಕ್ಕೆ ಮಲಗಿದ್ದರು. ವೃದ್ಧೆ ಎಚ್ಚರವಾಗಿದ್ದರು. ರೈಲು ಮೈಸೂರು ಬಿಟ್ಟ ಬಳಿಕ ಓರ್ವ ಪ್ರಯಾಣಿಕ ಅವರ ಪಕ್ಕದ ಸೀಟಿನಲ್ಲಿ ಬಂದು ಕುಳಿತಿದ್ದ. ಆತನ ಟಿಕೆಟ್ ಅನ್ನು ಟಿಟಿಇ ಪರಿಶೀಲಿಸಿ ಹೋಗಿದ್ದ. ಆ ವ್ಯಕ್ತಿ ಮಲಗದೆ ಲಗೇಜ್ಗಳನ್ನೇ ನೋಡುತ್ತಿದ್ದ. ಮೊಮ್ಮಕ್ಕಳ ಬ್ಯಾಗ್ಗಳನ್ನು ಕೂಡ ಮುಟ್ಟಿ ನೋಡುತ್ತಿದ್ದ. ಪ್ರಶ್ನಿಸಿದಾಗ ಸುಬ್ರಹ್ಮಣ್ಯದಲ್ಲಿ ಇಳಿಯುವುದಾಗಿ ಹೇಳಿದ್ದ. ಅನಂತರ ವೃದ್ಧೆಗೆ ನಿದ್ದೆ ಬಂದಿತ್ತು ಎಂದು ರೈಲ್ವೇ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.