ಮುಚ್ಚಿ ತೆರೆದ ನಾರ್ಯಬೈಲು ಶಾಲೆಗೆ ಸುವರ್ಣ ಸಂಭ್ರಮ


Team Udayavani, Dec 15, 2017, 4:50 PM IST

15-Dec-15.jpg

ಕಾಣಿಯೂರು: ಮಕ್ಕಳ ಸಂಖ್ಯೆ ಕಡಿಮೆಯಾಗಿದ್ದರಿಂದ ಸರಕಾರದ ಮಾರ್ಗಸೂಚಿಯಂತೆ ಒಂದು ಬಾರಿ ಮುಚ್ಚಿ, ಊರಿನ ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ಪುನರಾರಂಭಗೊಂಡ ಬೆಳಂದೂರು ಗ್ರಾ.ಪಂ. ವ್ಯಾಪ್ತಿಯ ಕಾಯಿಮಣ ಗ್ರಾಮದ ನಾರ್ಯಬೈಲು ಸರಕಾರಿ ಕಿರಿಯ
ಪ್ರಾಥಮಿಕ ಶಾಲೆಗೆ ಈ ಬಾರಿ ಸುವರ್ಣ ಮಹೋತ್ಸವದ ಸಂಭ್ರಮ.

1ರಿಂದ 5ನೇ ತರಗತಿವರೆಗೆ ಶಿಕ್ಷಣ ನೀಡುತ್ತಿರುವ ಈ ಶಾಲೆಯಲ್ಲಿ ಈಗ 23 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಪ್ರಸ್ತುತ ಸುವರ್ಣ ಮಹೋತ್ಸವ ಸಂದರ್ಭದಲ್ಲಿರುವ ಈ ಶಾಲೆ ವಿದ್ಯಾರ್ಥಿಗಳ ಕೊರತೆಯನ್ನು ಈಗಲೂ ಎದುರಿಸುತ್ತಿದೆ. ಇದಕ್ಕೆ ಮುಖ್ಯ ಕಾರಣ, ಇಲ್ಲಿ ಅಂಗನವಾಡಿ ಕೇಂದ್ರ ಇಲ್ಲದಿರುವುದು. ಕಾಯಿಮಣದಲ್ಲಿ ಅಂಗನವಾಡಿ ಮಂಜೂರು ಮಾಡಿದರೆ ಈ ಶಾಲೆ ಉಳಿಯುತ್ತದೆ. ಶಾಲೆಗೆ ಮಕ್ಕಳು ಲಭ್ಯರಾಗುತ್ತಾರೆ ಎಂಬುದು ಇಲ್ಲಿನ ಪ್ರಮುಖರ ಅಭಿಮತ.

2011ರಲ್ಲಿ ಮುಚ್ಚಿತ್ತು!
ವಿದ್ಯಾರ್ಥಿಗಳ ಕೊರತೆಯ ಕಾರಣದಿಂದ 2011ರಲ್ಲಿ ಈ ಶಾಲೆಯನ್ನು ಮುಚ್ಚಲಾಗಿತ್ತು. ಊರಿನವರ ಪರಿಶ್ರಮದ ಫಲವಾಗಿ 2013ರಲ್ಲಿ ಮತ್ತೆ ಈ ಶಾಲೆ ಆರಂಭವಾಯಿತು. ಆದರೆ ಮಕ್ಕಳ ಸಂಖ್ಯೆ ಹೆಚ್ಚಳವಾಗಲಿಲ್ಲ.

ಎಲ್‌ಕೆಜಿ ಆರಂಭವಾಗಿತ್ತು
ಊರವರು ಸೇರಿ ಸ್ಥಳೀಯ ಯುವಕ ಮಂಡಲದ ಕಚೇರಿಯಲ್ಲಿ ಎಲ್‌ಕೆಜಿ ತರಗತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೌಖೀಕ ಆದೇಶದಂತೆ ಆರಂಭಿಸಿದ್ದರು. ಬಳಿಕ ಸರಕಾರದ ಸೂಚನೆಯಂತೆ ಇದನ್ನು ಮುಚ್ಚಲಾಯಿತು. ಎಲ್‌ಕೆಜಿಗೆ 18 ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದರು. ಅವರಿಗೆ ಯಾವುದೇ ಶುಲ್ಕ ವಿಧಿಸದೆ ಶಾಲೆಯ ಉಳಿವಿನ ಹಿತದೃಷ್ಟಿಯಿಂದ ತರಗತಿ ನಿರ್ವಹಣೆಯನ್ನು ಊರ ಶಿಕ್ಷಣಾಭಿಮಾನಿಗಳು ಮಾಡಿದ್ದರು.

ಅಂಗನವಾಡಿ ಬೇಕು, ಮಕ್ಕಳೂ ಬರಬೇಕು!
ಕಾಯಿಮಣ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಇದ್ದರೂ ಇಲ್ಲಿ ಅಂಗನವಾಡಿ ಇಲ್ಲ. ಪಕ್ಕದ ಊರುಗಳಲ್ಲಿ ಅಂಗನವಾಡಿ ಇದೆ. ಇಲ್ಲಿನ ಪುಟಾಣಿಗಳು ಮುಂದಿನ ಶಿಕ್ಷಣಕ್ಕಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗೆ ಸೇರ್ಪಡೆಯಾಗುತ್ತಿದ್ದಾರೆ. ಆದ ಕಾರಣ ಕಾಯಿಮಣದಲ್ಲಿ ಅಂಗನವಾಡಿಯನ್ನು ಮಂಜೂರು ಮಾಡಿದರೆ ನಾರ್ಯಬೈಲು ಕಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಸ್ಥಳೀಯರು, ಈ ಕುರಿತು ಪ್ರಯತ್ನಗಳನ್ನು ಮುಂದುವರಿಸಿದ್ದಾರೆ.

ಸರಕಾರಿ ಲೆಕ್ಕಾಚಾರದಂತೆ ಶಾಲೆಯ ಆರ್‌ಟಿಸಿಯಲ್ಲಿ 4.30 ಎಕ್ರೆ ನಿವೇಶನ ಇದೆ. ಆದರೆ ಅಳತೆ ಮಾಡಿ ನೋಡಿದಾಗ 1.85 ಎಕ್ರೆ ಮಾತ್ರ ಶಾಲೆ ವಶದಲ್ಲಿದೆ. ಉಳಿದ ನಿವೇಶನ ಏನಾಯಿತು ಎಂಬುದನ್ನರಿಯಲು ಸರ್ವೆ ಇಲಾಖೆಯಿಂದ ಗಡಿ ಗುರುತು ಕಾರ್ಯ ನಡೆಯಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಾಲಾಭಿವೃದ್ಧಿ ಸಮಿತಿಯಿಂದ ಈ ಬಗ್ಗೆ ಸರ್ವೆ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.

ಡಿ. 16: ಸುವರ್ಣ ಮಹೋತ್ಸವ
ನಾರ್ಯಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಸುವರ್ಣ ಮಹೋತ್ಸವ ಮತ್ತು ರಂಗಮಂದಿರ ಉದ್ಘಾಟನ ಸಮಾರಂಭ ಡಿ. 16ರಂದು ನಡೆಯಲಿದೆ. ಶಾಲೆಯು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ 50 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ ಹಿರಿಮೆಯನ್ನು ಹೊಂದಿದೆ. ಕಾಯಿಮಣ ಗ್ರಾಮದಲ್ಲಿರುವ ಏಕೈಕ ಶಾಲೆ ಇದು. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸುವ ಉದ್ದೇಶದಿಂದ ಸುವರ್ಣ ಮಹೋತ್ಸವ ಸಮಿತಿ ಹಾಗೂ ಊರವರ ಸಹಕಾರದಲ್ಲಿ ಸಿದ್ಧತೆ ಮಾಡಲಾಗಿದೆ.
-ರಾಧಾಕೃಷ್ಣ ಮುಂಡಾಳ, ಎಸ್‌ಡಿಎಂಸಿ ಅಧ್ಯಕ್ಷರು

ಅಂಗನವಾಡಿ ತೆರೆದರೆ ಶಾಲೆ ಉಳಿದೀತು
ಇಲ್ಲಿ ಅಂಗನವಾಡಿ ಆರಂಭಿಸಿದರೆ ಮಾತ್ರ ನಾರ್ಯಬೈಲು ಶಾಲೆ ತನ್ನ ಅಸ್ತಿತ್ವ ಉಳಿಸಿಕೊಂಡೀತು. ಇಲ್ಲದಿದ್ದರೆ ಶಾಲೆಗೆ ಸೇರ್ಪಡೆಯಾಗುವ ಮಕ್ಕಳ ಸಂಖ್ಯೆ ವೃದ್ಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಬೇಕು.
ಕಳುವಾಜೆ ವೆಂಕಟ್ರಮಣ ಗೌಡ,
   ಅಧ್ಯಕ್ಷರು ಸುವರ್ಣ ಮಹೋತ್ಸವ ಸಮಿತಿ

ನೂತನ ರಂಗಮಂದಿರ
ಶಾಲೆಗೆ 6 ಲಕ್ಷ ರೂ. ವೆಚ್ಚದಲ್ಲಿ ನೂತನ ರಂಗಮಂದಿರವನ್ನು ನಿರ್ಮಾಣ ಮಾಡಲಾಗಿದೆ. ಶಾಸಕರ, ಜಿಲ್ಲಾ ಪಂಚಾಯತ್‌ನ ಯಾವುದೇ ಅನುದಾನ ಲಭ್ಯವಾಗಿಲ್ಲ. ಊರ ದಾನಿಗಳ ಸಹಕಾರದಿಂದ ಈ ಕಾರ್ಯ ನಡೆಯುತ್ತಿದೆ. ವಿದ್ಯಾಭಿಮಾನಿಗಳಿಂದ ಇನ್ನಷ್ಟು ಧನಸಹಾಯವನ್ನು ನಿರೀಕ್ಷಿಸಲಾಗಿದೆ.
ಚಂದ್ರಶೇಖರ್‌ ಮುಂಡಾಳ ,
  ಕಾರ್ಯದರ್ಶಿ ಸುವರ್ಣ ಮಹೋತ್ಸವ ಸಮಿತಿ

ವಿಶೇಷ ವರದಿ

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.