ಫೆ.6 : ಗೋಳ್ತಮಜಲಿನಲ್ಲಿ ಘನತ್ಯಾಜ್ಯ ಘಟಕ ಉದ್ಘಾಟನೆ

ಸುದಿನ ಫಾಲೋಅಪ್‌

Team Udayavani, Feb 5, 2023, 2:47 PM IST

GOLITHADY

ಬಂಟ್ವಾಳ: ಸ್ವತ್ಛ ಭಾರತ್‌ ಮಿಷನ್‌(ಗ್ರಾ) ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶದ 16 ಕಡೆಗಳಲ್ಲಿ ಬಹು ಗ್ರಾಮ ಮಲ ತ್ಯಾಜ್ಯ ನಿರ್ವಹಣ ಘಟಕ(ಎಫ್‌ಎಸ್‌ಟಿಪಿ)ಗಳನ್ನು ನಿರ್ಮಿಸುತ್ತಿದ್ದು, ದ.ಕ.ಜಿಲ್ಲೆಯ ಗೋಳ್ತಮಜಲು ಹಾಗೂ ಉಜಿರೆಯಲ್ಲಿ ಈ ಘಟಕ ನಿರ್ಮಾಣಗೊಂಡಿದೆ. ಗೋಳ್ತಮಜಲುವಿನಲ್ಲಿ ನಿರ್ಮಾಣವಾಗಿರುವ ಘಟಕವು ಫೆ. 6ರಂದು ಉದ್ಘಾಟನೆಗೊಳ್ಳಲಿದೆ. ದ.ಕ. ಜಿಲ್ಲೆಯ ಘಟಕಗಳು ದಿನಂಪ್ರತಿ ತಲಾ 3000 ಲೀ.(3 ಕೆಎಲ್‌ಡಿ) ಮಲ ತ್ಯಾಜ್ಯವನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದು, ಬಂಟ್ವಾಳ ಹಾಗೂ ಬೆಳ್ತಂಗಡಿ ತಾ.ಪಂ. ಈಗಾಗಲೇ 3 ಕೆಎಲ್‌ಡಿ ಸಾಮರ್ಥ್ಯದ ಸಕ್ಕಿಂಗ್‌ ವಾಹನವನ್ನು ಹೊಂದಿದೆ. ಗೋಳ್ತಮಜಲಿನ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಘಟಕವು ಫೆ. 6 ರಂದು ಬೆಳಗ್ಗೆ 10.30ಕ್ಕೆ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲ ಮನೆ ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ಶೌಚಾಲಯ ಗುಂಡಿ ತುಂಬಿದ್ದಲ್ಲಿ ಮಲವನ್ನು ತೆರವುಗೊಳಿಸಲು ತಾ.ಪಂ. ಸಕ್ಕಿಂಗ್‌ ವಾಹನದ ಸಹಾಯವಾಣಿಗೆ ಕರೆ ಮಾಡುವುದು ಅಥವಾ ಗ್ರಾ.ಪಂ. ತಿಳಿಸಿದಾಗ ಗುಂಡಿಯ ಮಲ ತ್ಯಾಜ್ಯವನ್ನು ಸಕ್ಕಿಂಗ್‌ ವಾಹನದ ಮೂಲಕ ತೆರವುಗೊಳಿಸಿ ಘಟಕಕ್ಕೆ ರವಾನಿಸಲಾಗುತ್ತದೆ. ಇದರ ಸಾಗಾಣಿಕೆಗೆ ಸಕ್ಕಿಂಗ್‌ ವಾಹನದ ಶುಲ್ಕವನ್ನು ಕಿ.ಲೋ. ಮೀಟರ್‌ಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

1.20 ಕೋ.ರೂ. ಅನುದಾನ ಬಳಕೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದಕೇಂದ್ರ ಸರಕಾರದ ಸ್ವಚ್ಛ ಭಾರತ್‌ ಮಿಷನ್‌(ಗ್ರಾ) ಯೋಜನೆಯಡಿ ಮಲ ತ್ಯಾಜ್ಯ ನಿರ್ವಹಣೆಗಾಗಿ ಪ್ರತೀ ವ್ಯಕ್ತಿಗೆ 230 ರೂ. ನಂತೆ ಅನುದಾನ ನೀಡಲಾಗಿದೆ. ಗೋಳ್ತಮಜಲಿನ ಘಟಕವು 25 ಗ್ರಾ.ಪಂ. ವ್ಯಾಪ್ತಿಯನ್ನು ಹೊಂದಿದ್ದು, 82,20,951 ರೂ. ಅನುದಾನ ಬಳಕೆಯಾಗಿದೆ. ಉಜಿರೆಯ ಘಟಕ 24 ಗ್ರಾ.ಪಂ. ವ್ಯಾಪ್ತಿ ಹೊಂದಿ 58,39,444 ರೂ. ಅನುದಾನ ಬಳಕೆಯಾಗಿದೆ. ಒಟ್ಟು 49 ಗ್ರಾ.ಪಂ. ವ್ಯಾಪ್ತಿಗೆ 1.20 ಕೋ.ರೂ. ಅನುದಾನ ಬಳಕೆ ಮಾಡಲಾಗಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.