ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗಿಲ್ಲ
Team Udayavani, Dec 15, 2017, 8:10 AM IST
ಮಂಗಳೂರು: ಯಶವಂತಪುರ-ಮಂಗಳೂರು ಜಂಕ್ಷನ್- ಯಶವಂತಪುರ ಗೋಮಟೇಶ್ವರ ರೈಲನ್ನು ಮಂಗಳೂರು ಸೆಂಟ್ರಲ್ಗೆ ವಿಸ್ತರಿಸದಿರಲು ಮಂಗಳವಾರ ನಡೆದ ಪಾಲ್ಗಾಟ್ ವಿಭಾಗ ರೈಲ್ವೇ ಬಳಕೆದಾರರ ಸಲಹಾ ಸಮಿತಿ ಸಭೆಯು ನಿರ್ಧರಿಸಿದೆ. ಹೀಗಾಗಿ ಈ ರೈಲು ಮಂಗಳೂರು ಸೆಂಟ್ರಲ್ಗೆ ವಿಸ್ತರಣೆಯಾಗುವ ಸಾಧ್ಯತೆಗಳು ಕ್ಷೀಣಿಸಿವೆ.
ಈ ಹಿಂದೆ ನಡೆದಿದ್ದ ಪಾಲಾ^ಟ್ ವಿಭಾಗ ರೈಲ್ವೇ ಬಳಕೆದಾರರ ಸಲಹಾ ಸಮಿತಿ ಸಭೆ ಮಂಗಳೂರು ಸೆಂಟ್ರಲ್ಗೆ ಆಗಮಿಸುವ ಕಾಚಿಗುಡ ಎಕ್ಸ್ಪ್ರೆಸ್, ಮಂಗಳೂರು ಸೆಂಟ್ರಲ್- ಪುದುಚೇರಿ ಎಕ್ಸ್ಪ್ರೆಸ್ ಹಾಗೂ ಮಂಗಳೂರು ಸೆಂಟ್ರಲ್ -ಚೆನ್ನೈ ಎಗೊ¾àರ್ ಎಕ್ಸ್ಪ್ರೆಸ್ ರೈಲುಗಳನ್ನು ಕಂಕನಾಡಿ ಜಂಕ್ಷನ್ಗೆ ಸ್ಥಳಾಂತರಿಸಿ, ಗೋಮಟೇಶ್ವರ ಎಕ್ಸ್ಪ್ರೆಸ್ಗೆ ಮಂಗಳೂರು ಸೆಂಟ್ರಲ್ನಲ್ಲಿ ಅವಕಾಶ ಮಾಡಿಕೊvಬಹುದಾಗಿದೆ ಎಂದು ದಕ್ಷಿಣ ರೈಲ್ವೇಗೆ ಶಿಫಾರಸು ಮಾಡಿತ್ತು. ಮಂಗಳವಾರ ನಡೆದ ಸಭೆಯಲ್ಲಿ ಹಿಂದಿನ ಸಭೆಯ ನಿರ್ಧಾರಕ್ಕೆ ವ್ಯತಿರಿಕ್ತವಾದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಮಂಗಳೂರು ಸೆಂಟ್ರಲ್ನಲ್ಲಿ ಹೆಚ್ಚುವರಿ ಪ್ಲಾಟ್ಫಾರಂ ನಿರ್ಮಾಣವಾಗುವ ವರೆಗೆ ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ವಿಸ್ತರಣೆ ಆಗುವ ಸಾಧ್ಯತೆಗಳಿಲ್ಲ.
ಗೋಮಟೇಶ್ವರ ಎಕ್ಸ್ಪ್ರೆಸ್ ಪ್ರಯಾಣಿಕರಿಗಿಂತ ಹೆಚ್ಚು ಮಂದಿ ವಿಸ್ತರಣೆಗೆ ಗುರುತಿಸಲಾಗಿರುವ ಇತರ ಮೂರು ರೈಲುಗಳಲ್ಲಿ ಸಂಚರಿಸುತ್ತಿದ್ದು, ಇವುಗಳನ್ನು ಮಂಗಳೂರು ಜಂಕ್ಷನ್ಗೆ ಸ್ಥಳಾಂತರಿಸುವುದರಿಂದ ಪ್ರಯಾಣಿಕರಿಗೆ ಅನನುಕೂಲವಾಗುತ್ತದೆ ಎಂದು ಸಲಹಾ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಗೋಮಟೇಶ್ವರ ಎಕ್ಸ್ಪ್ರೆಸ್ ವಿಸ್ತರಣೆ ಪ್ರಸ್ತಾವವನ್ನು ಕೈಬಿಡಲಾಗಿದೆ. ಮಂಗಳೂರು ಸೆಂಟ್ರಲ್ನಲ್ಲಿ ಮುಂದೆ ಹೆಚ್ಚುವರಿ ಫ್ಲಾಟ್ಫಾರಂ ನಿರ್ಮಾಣಗೊಂಡ ಬಳಿಕ ಈ ರೈಲನ್ನು ಮಂಗಳೂರು ಸೆಂಟ್ರಲ್ಗೆ ವಿಸ್ತರಿಸುವುದನ್ನು ಪರಿಗಣಿಸುವ ಸಾಧ್ಯತೆಗಳಿವೆ ಎಂದು ಪಾಲಾ^ಟ್ ವಿಭಾಗದ ಮೂಲಗಳು ತಿಳಿಸಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ