ಬೀಡಾಡಿ ಗೋವುಗಳಿಗೆ ದೇವಸ್ಥಾನಗಳಲ್ಲೇ ಗೋಶಾಲೆ !
ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ, ಜಮೀನು ನಿಗದಿಗೆ ವರದಿ
Team Udayavani, Nov 11, 2020, 6:20 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಗೋ ಸಂತತಿ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಠ ಮಂದಿರ, ಸಂಘ- ಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಗೋಶಾಲೆಗಳ ಜತೆಗೆ ಆಯ್ದ 25 ದೇವಸ್ಥಾನಗಳ ನೇತೃತ್ವದಲ್ಲಿ ಪ್ರತ್ಯೇಕ ಗೋಶಾಲೆ ನಿರ್ಮಿಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.
ಗೋಶಾಲೆ ನಿರ್ಮಾಣಕ್ಕೆ ದೇವಸ್ಥಾನಗಳಿಗೆ ಜಮೀನು ಒದಗಿಸುವ ನಿಟ್ಟಿನಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ರಾಜ್ಯದಲ್ಲಿ “ಎ’ ದರ್ಜೆಯ ದೇವಸ್ಥಾನಗಳ ಪೈಕಿ 10 ಕೋ. ರೂ.ಗಳಿಗೂ ಮಿಕ್ಕಿ ಆದಾಯವಿರುವ ದೇವ ಸ್ಥಾನಗಳಲ್ಲಿ ಗೋಶಾಲೆ ಸಾಕಾರವಾಗಲಿದೆ. ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳಲ್ಲಿ ಇದು ಸಾಕಾರಗೊಳ್ಳಲಿದೆ.
ಗೋಶಾಲೆಗಳ ಸಂಕಷ್ಟ
ಸರಕಾರ ಹೊಸದಾಗಿ ಗೋಶಾಲೆಗಳ ಆರಂಭಕ್ಕೆ ಮುಂದಾಗಿದ್ದರೂ ಸದ್ಯ ಕಾರ್ಯ ನಿರ್ವಹಿಸುತ್ತಿರುವ ಗೋಶಾಲೆಗಳ ಪೈಕಿ ಕೆಲವು ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಸರಕಾರದ ಪ್ರಕಾರ, ಜಾನುವಾರು ನಿರ್ವಹಣಾ ವೆಚ್ಚ ಪ್ರತೀ ದಿನಕ್ಕೆ 70 ರೂ. ಆಗಿದೆ. ಇದರಲ್ಲಿ ಶೇ. 25ರಷ್ಟನ್ನು (17.50 ರೂ.) ಮಾತ್ರ ಗೋಶಾಲೆಗಳಿಗೆ ಸರಕಾರ ಸಹಾಯಧನವಾಗಿ ನೀಡುತ್ತಿದೆ.
ಗೋಶಾಲೆಯಲ್ಲಿ 400ರಷ್ಟು ದನ-ಕರುಗಳಿದ್ದರೆ ಸರಕಾರದ ಅನುದಾನ ಸಿಗುವುದು ಕೇವಲ 200ಕ್ಕೆ. ಲಾಕ್ಡೌನ್ ಬಳಿಕ ಹಣ ಹೊಂದಿಸುವುದೇ ಕಷ್ಟವಾಗುತ್ತಿದೆ.
ಅಕ್ರಮ ಸಾಗಾಟ ತಡೆದು ಪೊಲೀಸರು ವಶಪಡಿಸಿಕೊಂಡ ಗೋವುಗಳನ್ನು ಗೋಶಾಲೆ ಗಳಿಗೆ ಕಳುಹಿಸಲಾಗುತ್ತಿದೆ. ಇತ್ತೀಚೆಗೆ ಈ ಸಂಖ್ಯೆಯೂ ಏರಿಕೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಗೋ ಶಾಲೆಯವರಿಗೆ ನಿರ್ವಹಣೆಯ ಸವಾಲು ಎದುರಾಗಿದೆ.
ಕೊಯಿಲದ ಜಾನುವಾರು ಗೋಶಾಲೆಗೆ !
ಗೋಶಾಲೆಗಳಿಗೆ ಇದೀಗ ಪುತ್ತೂರು ತಾಲೂಕಿನ ಕೊಯಿಲದ ಜಾನುವಾರು ಸಂವರ್ಧನ ಕೇಂದ್ರದಲ್ಲಿರುವ ಕೆಲವು ಜಾನುವಾರುಗಳನ್ನು ತೆಗೆದುಕೊಂಡು ಹೋಗುವ ಹೊಸ ಸವಾಲು ಎದುರಾಗಿದೆ. ಮುರ್ರಾ ಕೋಣ/ಗಂಡು ಕರು, ಸುರ್ತಿ ಕೋಣ, ಮಲೆನಾಡು ಗಿಡ್ಡ ಗಂಡು ರಾಸು, ಮಿಶ್ರತಳಿ ಗಂಡು ರಾಸುಗಳನ್ನು ನಿಯಮಿತವಾಗಿ ಎಲ್ಲ ಗೋಶಾಲೆಯವರು ಪಡೆದುಕೊಂಡು ಹೋಗುವಂತೆ ಕೇಂದ್ರದಿಂದ ಸೂಚನೆ ನೀಡಲಾಗಿದೆ. ಇದರ ನಿರ್ವಹಣೆಯನ್ನು ಗೋಶಾಲೆಯವರೇ ನೋಡಿ ಕೊಳ್ಳಬೇಕು.
ಬೀಡಾಡಿ ಗೋವುಗಳಿಗೆ ರಕ್ಷಣೆ ಹಾಗೂ ಪೊಲೀಸರು ವಶಪಡಿಸಿಕೊಂಡ ಗೋವುಗಳಿಗೆ ನೀರು, ಮೇವು ಒದಗಿಸಿಕೊಡುವ ನೆಲೆಯಲ್ಲಿ ರಾಜ್ಯದ ಆಯ್ದ 25 ದೇವಸ್ಥಾನಗಳ ನೇತೃತ್ವದಲ್ಲಿಯೇ ಗೋಶಾಲೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು..
– ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ದತ್ತಿ ಇಲಾಖೆ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’
D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ
MUST WATCH
ಹೊಸ ಸೇರ್ಪಡೆ
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ