ದಂತವೈದ್ಯಕೀಯ ಸೇವೆಗೆ ಉತ್ತಮ ಅವಕಾಶ: ಶ್ಯಾಮ್‌ ಭಟ್‌


Team Udayavani, Sep 24, 2017, 4:03 PM IST

24Maniapl-13.jpg

ಸುಳ್ಯ : ದಂತ ವೈದ್ಯಕೀಯ ಸೇವೆಗೆ ಸಾಕಷ್ಟು ಬೇಡಿಕೆ, ಅವಕಾಶಗಳಿದ್ದು ಪದವೀಧರರು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಮ್‌ ಭಟ್‌ ಕರೆ ನೀಡಿದರು.

ಸುಳ್ಯ ವೆಂಕಟ್ರಮಣ ಗೌಡ ಸಮುದಾಯ ಭವನದಲ್ಲಿ ಶನಿವಾರ ಜರಗಿದ ಕೆವಿಜಿ ದಂತ ವೈದ್ಯಕೀಯ ಕಾಲೇಜಿನ 22ನೇ ವರ್ಷದ ಪದವಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಪದವೀಧರ ವಿದ್ಯಾರ್ಥಿಗಳು ವೈಯಕ್ತಿಕ, ಔದ್ಯೋಗಿಕವಾಗಿ ಜೀವನಮೌಲ್ಯಗಳನ್ನು ಅಳವಡಿಸಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದರು. ಸಂಸ್ಥೆಯ ಸಂಸ್ಥಾಪಕ ಕುರುಂಜಿ ವೆಂಕಟ್ರಮಣ ಗೌಡರು ಗ್ರಾಮೀಣ ಪ್ರದೇಶವನ್ನು ಶೈಕ್ಷಣಿಕ ಕ್ಷೇತ್ರವನ್ನಾಗಿಸಿದ್ದಾರೆ. ಕೆವಿಜಿ ಸಂಸ್ಥೆ ಶೈಕ್ಷಣಿಕ ಮತ್ತು ವೈದ್ಯಕೀಯ ಸೇವೆಗೆ ನೀಡಿದ ಕೊಡುಗೆಯಿಂದಾಗಿ ಸುಳ್ಯ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದರು.

ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ನ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಎ.ಬಿ. ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಡೀನ್‌ ಡಾ| ಯು.ಎಸ್‌. ಕೃಷ್ಣ ನಾಯಕ್‌ ಮುಖ್ಯ ಅತಿಥಿಯಾಗಿದ್ದರು.  ಕೆವಿಜಿ ಕಾನೂನು ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪಡ್ಡಂಬೈಲು ವೆಂಕಟ್ರಮಣ ಗೌಡ, ದಂತವೈದ್ಯಕೀಯ ಕಾಲೇಜಿನ ಡಾ| ಶರತ್‌ ಕುಮಾರ್‌ ಶೆಟ್ಟಿ, ಡಾ| ನಸ್ರೀತ್‌ ಫರೀದ್‌, ಡಾ| ಜಯಪ್ರಕಾಶ್‌ ಆನೆಕಾರ್‌, ಡಾ| ಮಹಾಬಲೇಶ್ವರ ಸಿ.ಎಚ್‌., ಡಾ| ರಾಮರಾಜ್‌ ಪಿ.ಎನ್‌., ಡಾ| ಸವಿತಾ ಸತ್ಯಪ್ರಸಾದ್‌, ಡಾ| ಹರಿಶ್ಚಂದ್ರ ರೈ, ಡಾ| ಪ್ರಸನ್ನ ವೇದಿಕೆಯಲ್ಲಿದ್ದರು.

ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ನ ಕಾರ್ಯದರ್ಶಿ ಡಾ| ರೇಣುಕಾ ಪ್ರಸಾದ್‌ ಪ್ರಸ್ತಾವನೆಗೈದರು. ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಮೋಕ್ಷ ನಾಯಕ್‌ ಸ್ವಾಗತಿಸಿದರು. ಡಾ| ನಮೃತಾ ರಮೇಶ್‌ ಕಾರ್ಯಕ್ರಮ ನಿರೂಪಿಸಿದರು. ಡಾ| ಪ್ರಸನ್ನ ಕುಮಾರ್‌ ವಂದಿಸಿದರು.

ಸಮ್ಮಾನ 
ಸಮಾರಂಭದಲ್ಲಿ ಟಿ. ಶ್ಯಾಮ್‌ ಭಟ್‌ ಹಾಗೂ ಡಾ| ಯು.ಎಸ್‌. ಕೃಷ್ಣನಾಯಕ್‌ ಅವರನ್ನು ಸಮ್ಮಾನಿಸಲಾಯಿತು. ಡಾ| ಕೃಷ್ಣಪ್ರಸಾದ್‌ ಅವರು ಬಿಡಿಎಸ್‌ ಮತ್ತು ಎಂಡಿಎಸ್‌ ಪದವೀಧರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಒಟ್ಟು 88 ಮಂದಿ ಬಿಡಿಎಸ್‌ ಮತ್ತು 30 ಮಂದಿ ಎಂಡಿಎಸ್‌ನವರಿಗೆ ಪದವಿ ಪ್ರದಾನ ನಡೆಯಿತು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.