Rain ಕರಾವಳಿಯಾದ್ಯಂತ ಉತ್ತಮ ಮಳೆ: ಸಿಡಿಲಿನ ಅಬ್ಬರಕ್ಕೆ ಬೆಚ್ಚಿದ ಜನತೆ


Team Udayavani, Nov 6, 2023, 11:34 PM IST

Rain ಕರಾವಳಿಯಾದ್ಯಂತ ಉತ್ತಮ ಮಳೆ: ಸಿಡಿಲಿನ ಅಬ್ಬರಕ್ಕೆ ಬೆಚ್ಚಿದ ಜನತೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿ ರವಿವಾರ ರಾತ್ರಿಯಿಂದ ಸೋಮವಾರ ಮುಂಜಾನೆ ವರೆಗೆ ಉತ್ತಮ ಮಳೆಯಾಗಿದೆ. ಮಳೆಗಿಂತಲೂ ಸಿಡಿಲಿನ ಅಬ್ಬರ ಜೋರಾಗಿದ್ದು, ಮಧ್ಯರಾತ್ರಿ ಜನರು ಬೆಚ್ಚಿ ಬೀಳುವಂತಾಯಿತು.

ಕರಾವಳಿಯಾದ್ಯಂತ ಸಂಜೆಯ ವೇಳೆಗೆ ಲಘುವಾಗಿ ಆರಂಭಗೊಂಡ ಮಳೆ ರಾತ್ರಿಯಾಗುತ್ತಿದ್ದಂತೆ ಬಿರು ಸಾಗಿ ಸುರಿಯಲಾರಂಭಿಸಿತು. ರಾತ್ರಿ ಯಂತೂ ಈ ಬಾರಿಯ ಮಳೆಗಾಲ ದಲ್ಲಿಯೂ ಕಾಣಿಸದಂತಹ ಸಿಡಿಲಿನ ಆರ್ಭಟದೊಂದಿಗೆ ಬಿರುಸಾಗಿ ಮಳೆ ಸುರಿಯಿತು.

ಸೋಮವಾರ ಹಗಲು ಬಿಸಿಲ ಝಳವಿತ್ತು. ಸಂಜೆ-ರಾತ್ರಿ ಬೆಳ್ತಂಗಡಿ, ಸುಳ್ಯ ತಾ|ನ ಗ್ರಾಮೀಣ ಭಾಗದ ಕೆಲವೆಡೆ ಮಳೆಯಾಗಿದೆ.

ಉಡುಪಿ: ಉತ್ತಮ ಮಳೆ
ಉಡುಪಿ: ಜಿಲ್ಲೆಯಾದ್ಯಂತ ರವಿವಾರ ತಡರಾತ್ರಿ ಧಾರಕಾರ ಮಳೆ ಸುರಿದಿದ್ದು, ಗುಡುಗು, ಸಿಡಿಲಿನ ಆರ್ಭಟಕ್ಕೆ ಕೆಲವು ಮನೆಗಳಲ್ಲಿ ಎಲೆಕ್ಟ್ರಾನಿಕ್‌ ವಸ್ತುಗಳಿಗೆ ಹಾನಿ ಸಂಭವಿಸಿದೆ. ಮಣಿಪಾಲ ಸುತ್ತಮುತ್ತ ತಡರಾತ್ರಿ ಸಿಡಿಲು ಶಬ್ದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಹಲವೆಡೆ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಸೋಮವಾರ ಮೋಡ ಕವಿದ ವಾತಾವರಣದ ಇತ್ತು.ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಗುಡುಗು ಸಿಡಿಲು ಸಹಿತ ಮಳೆಗೆ ಗಂಭೀರ ಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ.

ಸಿಡಿಲು ಬಡಿದು ಇಬ್ಬರಿಗೆ ಗಾಯ, ಹಾನಿ
ಕೈಕಂಬ: ಕುಪ್ಪೆಪದವಿನ ಕಲ್ಲಾಡಿ ಎಂಬಲ್ಲಿ ರವಿವಾರ ಸಂಜೆ ವಿಮಲಾ ಅವರ ಮನೆಯ ವಿದ್ಯುತ್‌ ಮೀಟರ್‌ ಬೋರ್ಡ್‌ಗೆ ಸಿಡಿಲು ಬಡಿದು ಇಬ್ಬರಿಗೆ ಗಾಯವಾಗಿದ್ದು ಕೇಬಲ್‌, ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಮಾತ್ರವಲ್ಲದೇ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ.

ಘಟನೆಯ ವೇಳೆ ವಿಮಲಾ ಅವರ ತಾಯಿ ಸುಂದರಿ ಅವರ ಹಣೆಗೆ ಗಾಯವಾಗಿ¨ದ್ದರೆ ವಿಮಲಾ ಅವರಿಗೆ ಶ್ರವಣ ಸಮಸ್ಯೆವುಂಟಾಗಿದೆ. ಘಟನೆಯಿಂದ 60 ಸಾವಿರ ರೂ. ನಷ್ಟವಾಗಿದೆ.ಗ್ರಾಮಕರಣಿಕ ಮುತ್ತಪ್ಪ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೊಂದೆಡೆ ಗುಡುಗು ಸಹಿತ ಮಳೆಗೆ ಕುಪ್ಪೆಪದವು-ಇರುವೈಲು ಮೂಡುಬಿದಿರೆ ರಸ್ತೆಯ ನೀರಳಿಕೆಯಲ್ಲಿ ಮರ ಉರುಳಿಬಿದ್ದು ವಿದ್ಯುತ್‌ ಕಂಬ ತುಂಡಾಗಿ ರಸ್ತೆಗೆ ಬಿದ್ದ ಪರಿಣಾಮ ಸ್ವಲ್ಪ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿದೆ.

ಎರಡು ದಿನ ಎಲ್ಲೋ ಅಲರ್ಟ್‌
ಮಂಗಳೂರು: ಕರಾವಳಿಗೆ ಇನ್ನೆರಡು ದಿನ ಎಲ್ಲೋ ಅಲರ್ಟ್‌ ಇದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 30.1 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 23.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕೃಷಿ ಕಾರ್ಯಕ್ಕೆ ತೊಡಕು
ಕರಾವಳಿಯಾದ್ಯಂತ ಪ್ರಸ್ತುತ ಭತ್ತದ ಕಟಾವು ನಡೆಯುತ್ತಿದ್ದು, ಈ ವೇಳೆ ಮಳೆ ಸುರಿಯುತ್ತಿರುವುದರಿಂದ ಭತ್ತದ ಪೈರು ಬಿದ್ದು ನೆಲ ಕಚ್ಚುತ್ತದೆ. ಇದು ಯಂತ್ರದ ಮೂಲಕ ಕಟಾವಿಗೆ ಸಮಸ್ಯೆಯಾಗುತ್ತಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.