ಕರಾವಳಿಯಾದ್ಯಂತ ಉತ್ತಮ ಮಳೆ
Team Udayavani, Jul 22, 2019, 5:19 AM IST
ಮಂಗಳೂರು/ಉಡುಪಿ/ ಕಾಸರಗೋಡು: ಮಹಾ ಮಳೆ ನಕ್ಷತ್ರ ಪುಷ್ಯಾದ ಎರಡನೆಯ ದಿನ ರವಿವಾರವೂ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮವಾದ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಮಳೆಯಾಗಿದೆ. ದ.ಕ. ಜಿಲ್ಲೆಯ ಎಲ್ಲೆಡೆ ಉತ್ತಮ ಮಳೆಯಾಗಿದೆ. ಉಡುಪಿ ನಗರ ಸಹಿತ ಜಿಲ್ಲೆಯಲ್ಲೂ ಸಾಕಷ್ಟು ಮಳೆ ಬಿದ್ದಿದೆ.
ಕಾಸರಗೋಡು: ಭಾರೀ ಗಾಳಿ ಮಳೆ ಮುನ್ನೆಚ್ಚರಿಕೆ
ಕಾಸರಗೋಡು ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆ ಮತ್ತು ಭಾರೀ ಗಾಳಿ ಬೀಸುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ಆರಂಭಿಸಿದೆ. ಗ್ರಾ.ಪಂ. ಕಾರ್ಯದರ್ಶಿ, ವಿಲೇಜ್ ಆಫೀಸರ್ಗಳಿಗೆ ಸಂಭಾವ್ಯ ಅಪಾಯಗಳ ಬಗ್ಗೆ ಎಚ್ಚರ ವಹಿಸಲು ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಜಾಗ್ರತೆ ವಹಿಸಲು ಕರೆ ಕೊಡಲಾಗಿದೆ.
ಗುಡ್ಡ ಕುಸಿದು ಮನೆಗೆ ಹಾನಿ
ಜಿಲ್ಲೆಯಾದ್ಯಂತ ರವಿವಾರವೂ ಉತ್ತಮ ಮಳೆಯಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಬದಿಯಡ್ಕ -ಪೆರ್ಲ ಮಧ್ಯೆ ಕರಿಂಬಿಲ ಎಂಬಲ್ಲಿ ಮುಖ್ಯ ರಸ್ತೆಗೆ ಗುಡ್ಡ ಜರಿದಿದೆ. ಬದಿಯಡ್ಕದ ಚೆನ್ನಾರ್ಕಟ್ಟೆಯ ವಿಶ್ವನಾಥ ರೈ ಅವರ ಮನೆಯ ತಾರಸಿಗೆ ಪಕ್ಕದ ಗುಡ್ಡ ಜರಿದು ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ