ಕರಾವಳಿಯಲ್ಲಿ ಸಿಡಿಲು ಸಹಿತ ಉತ್ತಮ ಮಳೆ

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೂರ್‍ನಾಲ್ಕು ದಿನ ಮಳೆ ಸಂಭವ

Team Udayavani, Nov 3, 2021, 7:00 AM IST

ಕರಾವಳಿಯಲ್ಲಿ ಸಿಡಿಲು ಸಹಿತ ಉತ್ತಮ ಮಳೆ

ಮಂಗಳೂರು/ಉಡುಪಿ: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮುಂದಿನ ಮೂರು-ನಾಲ್ಕು ದಿನ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಹಿಂಗಾರು ಚುರುಕುಗೊಂಡಿದ್ದು, ದ.ಕ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆಯವರೆಗೆ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಉಳಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ನ.4 ಮತ್ತು 5ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

ಗುಡುಗು ಸಹಿತ ಮಳೆ
ಉಡುಪಿ: ತಾಲೂಕಿನಾದ್ಯಂತ ಮಂಗಳವಾರ ಮಧ್ಯಾಹ್ನದ ಅನಂತರ ಭಾರೀ ಗುಡುಗು ಸಹಿತ ಮಳೆಯಾಗಿದೆ. ವಿವಿಧೆಡೆಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ಏಕಾಏಕಿಯಾಗಿ ಭಾರೀ ಮಳೆಯಾಗಿದೆ. ಭಾರೀ ಮಳೆಗೆ ನಗರದ ಬಡಗುಪೇಟೆ ಸೇರಿದಂತೆ ವಿವಿಧ ಭಾಗಗಳ ರಸ್ತೆಗಳು ಕೆಲಕಾಲ ಜಲಾವೃತ್ತಗೊಂಡಿತ್ತು. ಹಬ್ಬದ ಅಂಗವಾಗಿ ಖರೀದಿಗೆ ನಗರಕ್ಕೆ ಆಗಮಿಸಿದವರು ಹಾಗೂ ರಸ್ತೆ ಬದಿ ವ್ಯಾಪಾರಿಗಳ ವಸ್ತುಗಳ ಮಾರಾಟಗಾರರು ಮಳೆಯಿಂದ ತೊಂದರೆ ಅನುಭವಿಸಿದರು. ಮಳೆಯಿಂದಾಗಿ ಕೆಲ ಹೊತ್ತು ಟ್ರಾಫಿಕ್‌ ಜಾಮ್‌ ಎದುರಾಯಿತು.

ಕುಂದಾಪುರ ತಾಲೂಕಿನ ಇಡೂರು ಕುಂಜ್ಞಾಡಿ ಗ್ರಾಮದ ಪಾರ್ವತಿ ಶೆಡ್ತಿ ಅವರ ಮನೆಯ ಜಾನುವಾರುವಿಗೆ ಸಿಡಿಲು ಬಡಿದು ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್‌ ಗ್ರಾಮದ ವಿಶ್ವನಾಥ್‌ ಪಾಟ್ಕರ್‌ ಅವರ ಮನೆಗೆ ಸಿಡಿಲು ಬಡಿದು ಮನೆಯ ಛಾವಣಿ, ವಿದ್ಯುತ್‌ ಉಪಕರಣಗಳು ಹಾನಿಗೊಳಗಾಗಿವೆ. ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದ ಸುಜಾತಾ ಅವರ ವಾಸ್ತವ್ಯದ ಪಕ್ಕಾ ಮನೆ ಸಂಪೂರ್ಣ ಹಾನಿಯಾಗಿದೆ.

ಬಂಟ್ವಾಳದ ಹಲವೆಡೆ ಹಾನಿ
ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ಸೋಮವಾರ ಸಂಜೆ ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಮಳೆಯ ತೀವ್ರತೆಯ ಪರಿಣಾಮ ಹಲವೆಡೆ ಮನೆ ಹಾಗೂ ಕೃಷಿ ತೋಟಗಳಿಗೆ ಹಾನಿಯಾಗಿದೆ.

ಬಿ.ಮೂಡ ಗ್ರಾಮದ ನಂದರಬೆಟ್ಟುನಲ್ಲಿ ಬಿಫಾತುಮ ಹಮ್ಮಬ್ಬ ಅವರ ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ. ಶಂಭೂರು ಗ್ರಾಮದ ದೇವಕಿ ಅವರ ಮನೆಗೆ ಮಳೆಯಿಂದ ಹಾನಿಯಾಗಿದೆ. ಮಾಣಿ ಗ್ರಾಮದ ವನಜಾಕ್ಷಿ ಆಳ್ವ ಅವರ ತೋಟದ ಅಡಿಕೆ ಮರಗಳಿಗೆ ಸಿಡಿಲು ಬಡಿದು ಹಾನಿಯಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.