ವಿವಿಧೆಡೆ ಉತ್ತಮ ಮಳೆ
ದ.ಕ., ಕಾಸರಗೋಡು, ಕೊಡಗು
Team Udayavani, Apr 9, 2019, 6:00 AM IST
ಮಂಗಳೂರು/ಮಡಿಕೇರಿ/ಕಾಸರಗೋಡು: ಕರಾವಳಿ ಮತ್ತು ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ವೇಳೆಗೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಕಾದ ಕಾವಲಿಯಂತಾಗಿದ್ದ ಇಳೆ ತಂಪಾಗಿದೆ.
ಸುಳ್ಯ ತಾಲೂಕಿನಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಬಂಗಾಡಿಯಲ್ಲಿ ಗುಡುಗು ಸಹಿತ ಮಳೆಯಾದರೆ, ಮಂಗಳೂರು, ಮೂಲ್ಕಿಯಲ್ಲಿ ಮೋಡ ಆವರಿಸಿತ್ತು. ಬೆಳ್ತಂಗಡಿ ತಾಲೂಕಿನಲ್ಲಿ ಗಾಳಿ, ಸಿಡಿಲು ಸಹಿತ ಮಳೆಯಾಗಿದೆ. ಉಜಿರೆ, ಧರ್ಮಸ್ಥಳ, ನಾರಾವಿಯಲ್ಲಿ ಉತ್ತಮ ವರ್ಷ ಧಾರೆಯಾಗಿದೆ. ವೇಣೂರು, ಪುಂಜಾಲಕಟ್ಟೆಯಲ್ಲಿ ಗಾಳಿ ಸಹಿತ ಮಳೆ ಬಂದಿದೆ. ಸುಬ್ರಹ್ಮಣ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬಂದಿದೆ. ಕಡಬ, ವಿಟ್ಲ, ಪುತ್ತೂರಿನಲ್ಲಿ ಉತ್ತಮ ಮಳೆಯಾದರೆ, ಬಂಟ್ವಾಳದಲ್ಲಿ ಹನಿ ಮಳೆಯಾಗಿದೆ.
ಕೊಡಗಿನಲ್ಲಿ ಸಿಡಿಲಬ್ಬರ
ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿತ್ತು. ಸೋಮವಾರಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮತ್ತೆ ಆಲಿಕಲ್ಲು ಮಳೆ ಸುರಿದಿದ್ದು ರೈತರು ಆತಂಕಕ್ಕೊಳಗಾಗಿದ್ದಾರೆ. ಚೆಟ್ಟಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಗಾಳಿಮಳೆಗೆ ಮರದ ಕೊಂಬೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
ವಿರಾಜಪೇಟೆ ಪಟ್ಟಣದಲ್ಲಿ ಹನಿಮಳೆಯಾಗಿದ್ದು, ಕಾಕೋಟುಪರಂಬು, ಹೆಗ್ಗಳ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಸೋಮವಾರ ಮುಸ್ಸಂಜೆ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಲಘು ಮಳೆಯಾಗಿದೆ. ಇನ್ನು ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಿದೆ.
ಕಾಸರಗೋಡು ಜಿಲ್ಲೆಯ ಕುಂಡಂಗುಳಿ ಮೊದಲಾದೆಡೆ ಗುಡುಗು ಮಿಂಚು ಸಹಿತ ಮಳೆಯಾದರೆ ಪೆರ್ಲ, ಉಕ್ಕಿನಡ್ಕ, ಪಳ್ಳತ್ತಡ್ಕ, ಚೇವಾರು, ಉಪ್ಪಳ, ಕುಂಬಳೆ, ಶಿರಿಯಾ, ಚೆರ್ಕಳ ನೆಲ್ಲಿಕಟ್ಟೆ ಮೊದಲಾದೆಡೆ ಸಾಮಾನ್ಯ ಮಳೆಯಾಗಿದೆ. ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮೋಡ ಆವರಿಸಿಕೊಳ್ಳುವ ಮೂಲಕ ಜನ ಮಳೆಗಾಗಿ ಕಾತರಿಸುವಂತಾಗಿತ್ತು.
ಎರಡು ದಿನ ಮಳೆ
ಅರಬಿ ಸಮುದ್ರದ ಕಡೆಯಿಂದ ಗಾಳಿ ಬೀಸುತ್ತಿದ್ದು, ಅದರ ಪ್ರಭಾವದಿಂದ ದಕ್ಷಿಣದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುತ್ತಿದೆ. ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಪೂರ್ವ ಮುಂಗಾರಿನಲ್ಲಿ ಸಾಧಾರಣವಾಗಿ ಆಗುವ ಪ್ರಕ್ರಿಯೆ ಇದು. ಕಳೆದೆರಡು ದಿನಗಳಿಂದ ಇದೇ ರೀತಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ. ಸಾಧಾರಣ ಮಳೆಯೊಂದಿಗೆ ಗುಡುಗು, ಸಿಡಿಲು ಮತ್ತು ಗಾಳಿಯೂ ಇರಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ