ಕರಾವಳಿ, ಒಳನಾಡಿನಲ್ಲಿ ಉತ್ತಮ ಮಳೆ, ಕೆಲವೆಡೆ ಹಾನಿ


Team Udayavani, Apr 12, 2019, 6:30 AM IST

hani

ಮಂಗಳೂರು / ಉಡುಪಿ/ ಕಾಸರಗೋಡು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಅನೇಕ ಕಡೆ ಗುರುವಾರ ಉತ್ತಮ ಗಾಳಿ ಮಳೆಯಾದ ವರದಿಯಾಗಿದೆ.

ಕಾಸರಗೋಡು ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು ಸಹಿತ ಲಘು ಮಳೆಯಾಗಿದೆ. ಸಂಜೆ ಬೀಸಿದ ಗಾಳಿಗೆ ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನದ ಗದ್ದೆಯಲ್ಲಿ ಜಾತ್ರೆಗಾಗಿ ಅಳವಡಿಸ ಲಾಗಿದ್ದ ವ್ಯಾಪಾರ ಮಳಿಗೆಗಳ ತಗಡು ಶೀಟ್‌ಗಳು ಹಾರಿ ಹೋಗಿದೆ.

ಆಲಿಕಲ್ಲು ಮಳೆ
ಪುತ್ತೂರು ತಾಲೂಕು ಗ್ರಾಮಾಂತರ ಭಾಗಗಳಾದ ಕೌಡಿಚ್ಚಾರು, ಬಡಗ ನ್ನೂರು, ಈಶ್ವರಮಂಗಲ, ಸುಳ್ಯ ಪದವುಗಳಲ್ಲಿ ಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಪುತ್ತೂರು-ಮಂಗಳೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ಮರ ಉರುಳಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿಟ್ಲದಲ್ಲಿಯೂ ಗಾಳಿ ಮಳೆಗೆ ವಿದ್ಯುತ್‌ ಕಂಬಗಳು ಉರುಳಿ ವಿದ್ಯುತ್‌ ಸರಬರಾಜು ವ್ಯತ್ಯಯವಾಗಿತ್ತು.

ಕೊಡಿಪ್ಪಾಡಿಯ ಬಟ್ರಪಾಡಿ ಸುಂದರ ನಾಯ್ಕ… ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ. ಮನೆಯ ಮುಂದೆ ಇದ್ದ ಶ್ವಾನ ಸಿಡಿಲಿನ ಆಘಾತಕ್ಕೆ ಸತ್ತಿದೆ. ಮನೆಯಲ್ಲಿದ್ದ ಮಹಿಳೆ ಮತ್ತು ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿ¨ªಾರೆ.

ಬೆಳ್ಳಾರೆ ಪರಿಸರದಲ್ಲಿ ಉತ್ತಮ ಮಳೆ ಸುರಿದಿದೆ. ಉಪ್ಪಿನಂಗಡಿ, ವೇಣೂರು, ನಾರಾವಿ, ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಗುರುವಾಯನಕರೆ, ಕಡಬ, ಸುಳ್ಯ, ಬಂಟ್ವಾಳ, ಪುಂಜಾಲ ಕಟ್ಟೆ, ಮಲೆಬೆಟ್ಟು ಸೇರಿದಂತೆ ವಿವಿಧೆಡೆ ಉತ್ತಮ ಮಳೆಯಾಗಿದೆ.

ಉಪ್ಪಿನಂಗಡಿಯಲ್ಲಿ ಗಾಳಿಮಳೆ
ಗುರುವಾರ ಸಂಜೆ ಉಪ್ಪಿನಂಗಡಿ ಮತ್ತದರ ಸುತ್ತಮುತ್ತಲ ಪರಿಸರದಲ್ಲಿ ಬೀಸಿದ ಭಾರೀ ಗಾಳಿಮಳೆಗೆ ಹಲವೆಡೆ ಮರಗಳು ಉರುಳಿಬಿದ್ದು, ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿತ್ತು.

ಉಪ್ಪಿನಂಗಡಿಯ ಕೋಟೆ, 34ನೇ ನೆಕ್ಕಿಲಾಡಿ ಪರಿಸರದಲ್ಲಿ ಅಡಿಕೆ ಮರಗಳು ತುಂಡರಿಸಲ್ಪಟ್ಟು ವಿದ್ಯುತ್‌ ತಂತಿಯ ಮೇಲೆ ಬಿದ್ದ ಪರಿಣಾಮ ಕಂಬಗಳಿಗೆ ಹಾನಿಯಾಗಿದೆ.

ಬಿಳಿಯೂರು ಪರಿಸರದಲ್ಲಿ ಹಲವೆಡೆ ಮರಗಳು ಉರುಳಿ ಮನೆಗಳಿಗೂ ಹಾನಿಯುಂಟಾಗಿದೆ. ಮನೆಯಲ್ಲಿದ್ದ ಕೆಲವು ಮಂದಿ ಗಾಯಗೊಂಡಿರುವ ಬಗ್ಗೆಯೂ ಮಾಹಿತಿ ಲಭಿಸಿದೆ.

ಉಡುಪಿ ಜಿಲ್ಲೆ: ವಿವಿಧೆಡೆ ಮಳೆ
ಉಡುಪಿ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಕಾರ್ಕಳ, ಹೆಬ್ರಿ, ಸಿದ್ದಾಪುರ ಪರಿಸರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಯಾಗಿದೆ. ಉಡುಪಿಯಲ್ಲಿ ಹನಿ ಮಳೆಯಾಗಿದೆ. ಕಾರ್ಕಳದ ಮಾಲೆಬೆಟ್ಟಿನಲ್ಲಿ ಬೀಸಿದ ಗಾಳಿ ಮಳೆಗೆ ಮರಗಳು ಧರೆಗೆ ಉರುಳಿವೆ. ಕೊಲ್ಲೂರು, ಇಡೂರು, ಹಾಲ್ಕಲ್‌, ಜಡ್ಕಲ್‌, ವಂಡ್ಸೆಯಲ್ಲಿ ಮಳೆಯಾಗಿದೆ.

ಮುಡಿಪು: ಶಾಲೆಗೆ ಹಾನಿ
ಉಳ್ಳಾಲ ಮತ್ತು ಮುಡಿಪು ಪರಿಸರ ದಲ್ಲಿ ಸಂಜೆ ವೇಳೆಗೆ ಬಲವಾದ ಗಾಳಿ ಬೀಸಿದ್ದು, ಮುಡಿಪು ಬಳಿಯ ಹೂಹಾಕುವಕಲ್ಲು ಸರಕಾರಿ ಉ. ಪ್ರಾ. ಶಾಲೆ ಮತ್ತು ಪರಿಸರದ ಮನೆಗಳ ಹೆಂಚುಗಳು ಗಾಳಿಗೆ ಹಾರಿಹೋಗಿದೆ.

ಎರಡು ದಿನ ಮಳೆ ಸಾಧ್ಯತೆ
ಅರಬಿ ಸಮುದ್ರದ ಕಡೆಯಿಂದ ಗಾಳಿ ಬೀಸುತ್ತಿದ್ದು, ಅದರ ಪ್ರಭಾವ ದಿಂದ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಗಾಳಿ ಮಳೆಯಾಗಲಿದೆ ಎಂದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.