ಕರಾವಳಿಯ ವಿವಿಧೆಡೆ ಉತ್ತಮ ಮಳೆ
Team Udayavani, May 31, 2017, 2:54 PM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮುಂಗಾರು ಪೂರ್ವ ಮಳೆಯಾಗಿದೆ. ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಮೋಡ, ಬಿಸಿಲಿನ ನಡುವೆ ಮಳೆಯಾಗಮನವಾಗಿದ್ದು, ಬಿಸಿಲಿನ ಕಾವು ಇಳಿದು, ಇಳೆ ತಂಪಾಗಿದೆ.
ಮಂಗಳೂರು, ಉಡುಪಿಯಲ್ಲಿ ಬೆಳಗ್ಗಿನಿಂದಲೇ ಬಿಸಿಲು-ಮೋಡದ ವಾತಾವರಣವಿದ್ದು, ಮಧ್ಯಾಹ್ನ, ಸಂಜೆ ಸಾಧಾರಣ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಗಾಗ, ಸುಳ್ಯದಲ್ಲಿ ಬೆಳಗ್ಗೆ ಸ್ವಲ್ಪ, ಮಧ್ಯಾಹ್ನದ ಬಳಿಕ ಗಾಳಿ ಸಹಿತ ಸಾಧಾರಣ ಮಳೆ ಬಂದಿದೆ. ಇಲ್ಲಿ ಸೋಮವಾರ ತಡರಾತ್ರಿ ಮಿಂಚು ಸಹಿತ ಮಳೆಯಾಗಿತ್ತು. ಮೂಡಬಿದಿರೆಯಲ್ಲಿ ಹನಿ ಮಳೆಯಾಗಿದೆ. ಬಂಟ್ವಾಳದಲ್ಲಿ ಬೆಳಗ್ಗೆ ಮತ್ತು ಸಂಜೆ ಮಳೆಯಾಗಿದೆ.ಮೂಲ್ಕಿಯಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆಯಾಗಿದೆ.
ಬಜಪೆಯಲ್ಲಿ ಸ್ವಲ್ಪ ಮಳೆ ಬಂದಿದೆ. ಪುತ್ತೂರಿನಲ್ಲಿ ಕಡಿಮೆ ಮಳೆಯಾಗಿದೆ. ಉಡುಪಿ, ಮಣಿಪಾಲ, ಕೋಟ, ತೆಕ್ಕಟ್ಟೆ, ಕೊಲ್ಲೂರು, ಕುಂದಾಪುರ, ಬ್ರಹ್ಮಾವರ, ಪಡುಬಿದ್ರಿ ಮೊದಲಾದೆಡೆ ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ