ಕರಾವಳಿಯ ವಿವಿಧೆಡೆ ಉತ್ತಮ ಮಳೆ, ಹಲವೆಡೆ ಹಾನಿ
Team Udayavani, Apr 10, 2022, 12:47 AM IST
ಮಂಗಳೂರು/ಉಡುಪಿ/ಕಾಸರಗೋಡು: ಕರಾವಳಿಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಗಾಳಿ ಮಳೆ ಬಂದಿದೆ.
ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಮಂಗಳೂರು, ಪಣಂಬೂರು, ಸುತ್ತಮುತ್ತ ಮಳೆ ಬಂದಿದೆ. 8 ಗಂಟೆ ವೇಳೆಗೆ ಕಿನ್ನಿಗೋಳಿ, ಮೂಲ್ಕಿ ಪ್ರದೇಶಗಳಲ್ಲಿ ಮಳೆಯಾಗಿದೆ. ಕಾಸರಗೋಡು, ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲೂ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳ್ತಂಗಡಿಯಲ್ಲಿ ಉತ್ತಮ ಮಳೆ
ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಶನಿವಾರ ಸಂಜೆ ವೇಳೆಗೆ ಗಾಳಿ, ಗುಡುಗು ಸಹಿತ ಭಾರಿ ಸುರಿದಿದೆ. ಸಂಜೆ ಆರಂಭವಾದ ಮಳೆ ನಿರಂತರ ಒಂದು ತಾಸು ಬಿರುಸಾಗಿ ಸುರಿದು, ಬಳಿಕ ತುಂತುರು ಮಳೆ ಹಾಗೂ ಗುಡುಗು ರಾತ್ರಿ 8 ಗಂಟೆ ತನಕ ಮುಂದುವರಿಯಿತು. ಹಳ್ಳಿಗಳಲ್ಲಿ ನೀರು ತುಂಬಿ ಹರಿಯಲಾರಂಭಿಸಿದೆ.
ತಾಲೂಕಿನ ಮುಂಡಾಜೆ, ಕಲ್ಮಂಜ ಹಾಗೂ ಪಿಲಿಕಳ ಪ್ರದೇಶದಲ್ಲಿ ವಿದ್ಯುತ್ ಲೈನ್ ಮೇಲೆ ಮಳೆ-ಗಾಳಿಗೆ ಮರ ಬಿದ್ದ ಪರಿಣಾಮ 4 ಕಂಬಗಳು ಮುರಿದು ಬಿದ್ದಿವೆ.
ಶುಕ್ರವಾರ ಸಂಜೆಯೂ ಉತ್ತಮ ಮಳೆಯಾಗಿದ್ದು ಗ್ರಾಮೀಣ ಭಾಗದ ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡು ಶನಿವಾರ ಮಧ್ಯಾಹ್ನದ ಹೊತ್ತಿಗೆ ಪೂರೈಕೆಯಾಗಿತ್ತು. ಮತ್ತೆ ಸಂಜೆ 5 ಗಂಟೆಗೆ ಮಾಯವಾದ ವಿದ್ಯುತ್ ತಡರಾತ್ರಿವರೆಗೂ ಪೂರೈಕೆಯಾಗಿಲ್ಲ. ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಯಿತು.
ಹಾರಿ ಹೋದ ಮೇಲ್ಛಾವಣಿ
ಕಡಬ ಪರಿಸರದಲ್ಲಿ ಶನಿವಾರ ಸಂಜೆಯ ಗುಡುಗು ಸಹಿತ ಗಾಳಿ ಮಳೆಗೆ ನೂಜಿಬಾಳ್ತಿಲ ಗ್ರಾಮದ ಪಲಯಮಜಲು ದೇವಸ್ಯ ಅವರ ಮನೆಯ ಮೇಲ್ಛಾವಣಿಯ ಶೀಟು ಹಾರಿ ಹೋಗಿದೆ. ಅಪಾರ ನಷ್ಟ ಸಂಭವಿಸಿದೆ. ಮನೆಯೊಳಗಿನ ಸಾಮಗ್ರಿಗಳು ಒದ್ದೆಯಾಗಿ ಹಾನಿ ಸಂಭವಿಸಿದೆ.
ಮನೆಗೆ ಸಿಡಿಲು :
ಇಬ್ಬರಿಗೆ ಗಾಯ
ಬಂಟ್ವಾಳ: ಪೆರಾಜೆ ಗ್ರಾಮದ ಸಾದಿಕುಕ್ಕಿನಲ್ಲಿ ಮನೆಗೆ ಸಿಡಿಲು ಬಡಿದು ಮನೆ ಹಾಗೂ ಸೊತ್ತುಗಳಿಗೆ ಹಾನಿಯಾಗಿ ರುವ ಜತೆಗೆ ಇಬ್ಬರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಸಾದಿಕುಕ್ಕು ನಿವಾಸಿ ದಿ| ಮೋನಪ್ಪ ನಾಯ್ಕ ಅವರ ಪತ್ನಿ ಗೀತಾ ನಾಯ್ಕ ಅವರ ಮನೆಗೆ ಸಿಡಿಲು ಬಡಿದಿದ್ದು, ಮಕ್ಕ ಳಾದ ಜೀವನ್ ಅವರ ಮುಖಕ್ಕೆ ಗಾಯ ವಾಗಿದ್ದು, ಸಚಿನ್ ಅವರಿಗೆ ಸಿಡಿಲಿನ ಆಘಾತವಾಗಿದೆ. ಮೇಲ್ಛಾವಣಿ, ಗೋಡೆ ಬಿರುಕು ಬಿಟ್ಟಿದ್ದು, ಸೊತ್ತುಗಳಿಗೆ ಹಾನಿಯಾಗಿದೆ. ಮನೆಯ ಸಮೀಪದ ಅಕೇಶಿಯಾ ಮರ ವೊಂದು ಸಿಡಿಲಿನ ತೀವ್ರತೆಗೆ ಸಂಪೂರ್ಣ ಛಿದ್ರವಾಗಿದೆ. ಪೆರಾಜೆ ಪಿಡಿಒ ಸುನೀಲ್ ಕುಮಾರ್, ಗ್ರಾಮಕರಣಿಕೆ ಸುರಕ್ಷಾ ಸೇರಿ ದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ