ಗೋಸಂಜೀವಿನಿ ಯೋಜನೆಯಿಂದ  ಗೋಸಂರಕ್ಷಣೆ : ರಾಘವೇಶ್ವರ ಶ್ರೀ


Team Udayavani, Aug 13, 2017, 6:50 AM IST

13-BEL-2.jpg

ವಿಟ್ಲ: ಮಲೆಮಹದೇಶ್ವರ ಬೆಟ್ಟದ ಪರಿಸರದಲ್ಲಿ 70 ಸಾವಿರಕ್ಕೂ ಅಧಿಕ ಗೋವುಗಳನ್ನು ಶ್ರೀ ರಾಮಚಂದ್ರಾಪುರ ಮಠದ ನೇತೃತ್ವದಲ್ಲಿ ಎಲ್ಲರ ಸಹಕಾರದಲ್ಲಿ ಸಂರಕ್ಷಿಸಲಾಗಿದೆ. ಅಲ್ಲೇ ಪಕ್ಕದ ಅಂದಿಯೂರಿನಲ್ಲಿ  ನಡೆದ  ಆಡಿಜಾತ್ರೆಯಲ್ಲಿ ಗೋವುಗಳನ್ನು ಕಟುಕರು ಖರೀದಿಸಿ, ಗೋಮಾಂಸಕ್ಕಾಗಿ ಬಳಸುತ್ತಾರೆ. ಇದರ ಬದಲಾಗಿ ಶಾಂತಿ, ಸಮಾಧಾನದಲ್ಲಿ ರೈತರು ಮಾರುವ ಗೋವುಗಳನ್ನು ರೈತರೇ ಖರೀದಿಸುವಂತೆ ಶ್ರೀಮಠ ಪ್ರೇರೇಪಿಸಲಿದೆ. ಅಸಾಧ್ಯವೆಂದಾದಲ್ಲಿ ಶ್ರೀಮಠ ಗೋಸಂಜೀವಿನಿ ಯೋಜನೆ ಮೂಲಕ ಗೋಸಂರಕ್ಷಣೆ ಮಾಡಲಿದೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ತಿಳಿಸಿದರು.

ಅವರು ಬೆಂಗಳೂರು ಗಿರಿನಗರ ರಾಮಾಶ್ರಮದಲ್ಲಿ ವಿಟ್ಲ, ಕೇಪು, ಕಲ್ಲಡ್ಕ, ಕುಂದಾಪುರ ವಲಯಗಳ ಸರ್ವಸೇವೆ ಯನ್ನು ಸ್ವೀಕರಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ, ಆಶೀರ್ವಚನ ನೀಡಿದರು. ಬೆಟ್ಟದಲ್ಲಿ 15 ವರ್ಷಗಳಿಂದ ಮಳೆ ಸುರಿಯದೇ ರೈತರು ಕಂಗಾಲಾಗಿದ್ದರು. ಬೆಟ್ಟಕ್ಕೆ ಬೇಲಿ ಹಾಕಿದ್ದರು. ಇದೆಲ್ಲದರ ಪರಿಣಾಮ ಗೋವುಗಳಿಗೆ ಮೇವು ಇರಲಿಲ್ಲ. ಮಠವು ಗೋಪ್ರೇಮಿಗಳ ಸಹಾಯಹಸ್ತದಿಂದ ಮೇವು ಪೂರೈಸಿದೆ. ಮಳೆಯೂ ಬಂದಿದೆ. ಮೇವು ಲಭ್ಯವಾಗುತ್ತಿದೆ. ಸೇವೆ ಮತ್ತು ಶುದ್ಧ ಮನಸ್ಸಿನ ಭಕ್ತಿಯು ದೈವಾನುಗ್ರಹಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಇದೇ ಉದಾಹರಣೆ ಎಂದರು.

ಗೋಸಂಜೀವಿನಿ ಯೋಜನೆಗೆ ಭಕ್ತರು ಉದಾರ ಕೊಡುಗೆ ನೀಡಿ, ಆಡಿಜಾತ್ರೆಗೆ ಪರ್ಯಾಯವಾಗಿ ಹನೂರು ಸಮೀಪದ ಕೆಂಪಯ್ಯನಹಟ್ಟಿಯಲ್ಲಿ ಮಠದ ನೇತೃತ್ವದಲ್ಲಿ ನಡೆದ  ಅಭಯಜಾತ್ರೆಯಲ್ಲಿ ಗೋವುಗಳನ್ನು ರಕ್ಷಿಸಬೇಕು. ಮನೆಮನೆಗೆ ಗೋವುಗಳನ್ನು ಸ್ವಾಗತಿಸಬೇಕು. ಅಥವಾ ಗೋಸಂರಕ್ಷಣೆಯಲ್ಲಿ ಪಾಲುದಾರನಾಗ ಬೇಕು ಎಂದವರು ಕರೆ ನೀಡಿದರು.

ಸಂಗೀತ ನಿರ್ದೇಶಕ ವಿ. ಮನೋಹರ್‌ ಅವರು ಭಾಗವಹಿಸಿ, ಶ್ರೀಮಠದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಭಯಾಕ್ಷರ ಅಭಿಯಾನದಲ್ಲಿ ಪಾಲ್ಗೊಳ್ಳಲು ಆಸಕ್ತಿಯಿದೆ ಎಂದರು. ಇದೇ ಸಂದರ್ಭ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರ ವೇರಿಸಲಾಯಿತು. ವಿವಿಧ ಯೋಜನೆಗಳಿಗೆ ಶಿಷ್ಯ ಭಕ್ತರಿಂದ ಸಮರ್ಪಣೆ ನಡೆಯಿತು. ಮಠದ ಅಕ್ಷರದೀಕ್ಷೆ ಯೋಜನೆಯಲ್ಲಿ ಅನೇಕ ಮಂದಿ ಸೇರ್ಪಡೆಗೊಂಡು, ಶ್ರೀಗಳಿಂದ ದೀಕ್ಷಾ ಪ್ರತಿಜ್ಞೆ ಸ್ವೀಕರಿಸಿದರು.

ವಲಯ ಸಭೆ 
ಇದಕ್ಕೂ ಮುನ್ನ ಹವ್ಯಕ ಮಹಾ ಮಂಡಲ, ಮಂಗಳೂರು ಹವ್ಯಕ ಮಂಡಲ ಮಾರ್ಗದರ್ಶನದಲ್ಲಿ ವಿಟ್ಲ, ಕೇಪು, ಕಲ್ಲಡ್ಕ, ಕುಂದಾಪುರ ವಲಯಗಳ ಜಂಟಿ ಸಭೆಯನ್ನು ಆಯೋಜಿಸಲಾಗಿತ್ತು. ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರೀ ಬೇರ್ಕಡವು ಅಧ್ಯಕ್ಷತೆ ವಹಿಸಿದ್ದರು. ಕೋಶಾಧ್ಯಕ್ಷ ಜಿ.ಎಸ್‌. ಹೆಗಡೆ ವಿಜಯ ನಗರ, ಮಾತೃಪ್ರಧಾನ ಕಲ್ಪನಾ ತಲವಾಟ, ಮುಷ್ಟಿಭಿಕ್ಷೆ ಪ್ರಧಾನ ಮಲ್ಲಿಕಾ ಜಿ.ಭಟ್‌, ಮಂಗಳೂರು ಹವ್ಯಕ ಮಂಡಲ ಅಧ್ಯಕ್ಷ ಸೇರಾಜೆ ಸುಬ್ರಹ್ಮಣ್ಯ ಭಟ್‌, ಪ್ರಧಾನ ಕಾರ್ಯದರ್ಶಿ ಪೆದಮಲೆ ನಾಗರಾಜ ಭಟ್‌, ಕೋಶಾಧ್ಯಕ್ಷ ನೂಜಿಬೈಲು ರಮೇಶ ಭಟ್‌, ಮಾತೃಪ್ರಧಾನ ಸುಮಾ ರಮೇಶ್‌, ಸಂಸ್ಕಾರ ಪ್ರಧಾನ ಪಾರ್ವತೀ ಮೋಂತಿಮಾರು, ಮುಷ್ಟಿಭಿಕ್ಷೆ ಪ್ರಧಾನ ಜಯಲಕ್ಷ್ಮೀ ಕುಕ್ಕಿಲ, ಕೇಪು ವಲಯ ಅಧ್ಯಕ್ಷ ಜನಾರ್ದನ ಭಟ್‌ ಅಮೈ, ಕೋಶಾಧ್ಯಕ್ಷ  ಸುಬ್ಬರಾಜ ಶಾಸ್ತ್ರಿಮಣಿಲ, ವಿಟ್ಲ ವಲಯ ಅಧ್ಯಕ್ಷ ಚಂದ್ರಶೇಖರ ಭಟ್‌ ಪಡಾರು, ದಿಗªರ್ಶಕ ಸತೀಶ ಪಂಜಿಗದ್ದೆ, ಕಲ್ಲಡ್ಕ ವಲಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಭಟ್‌, ಕಲ್ಲಡ್ಕ ಗೇರುಕಟ್ಟೆ ಶ್ರೀಉಮಾಶಿವ ಕ್ಷೇತ್ರ ಅಧ್ಯಕ್ಷ ರಾಕೋಡಿ ಈಶ್ವರ ಭಟ್‌ ಮೊದಲಾದವರು ಉಪಸ್ಥಿತರಿದ್ದರು.

ಕೇಪು ವಲಯ ಪ್ರಧಾನ ಕಾರ್ಯದರ್ಶಿ ಮೋಹನ ಎ., ವಿಟ್ಲ ವಲಯ ಪ್ರಧಾನ ಕಾರ್ಯದರ್ಶಿ ರಾಜನಾರಾಯಣ ಸರವು, ಕಲ್ಲಡ್ಕ ವಲಯ ಅಧ್ಯಕ್ಷ ಯು.ಎಸ್‌.ಚಂದ್ರಶೇಖರ ಭಟ್‌ ನೆಕ್ಕಿದರವು ಹಾಗೂ ಕುಂದಾಪುರ ವಲಯ ಪ್ರಧಾನ ಕಾರ್ಯದರ್ಶಿ ಗುರುದತ್ತ ರಾವ್‌ ವರದಿ ಮಂಡಿಸಿದರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.