ಸರಕಾರಿ ಶಾಲೆಗಳ ಚಾಕ್‌ಪೀಸ್‌ಗೂ ತಟ್ಟಿದ ಅನುದಾನ ಬಿಸಿ!


Team Udayavani, Jan 18, 2023, 6:45 AM IST

ಸರಕಾರಿ ಶಾಲೆಗಳ ಚಾಕ್‌ಪೀಸ್‌ಗೂ ತಟ್ಟಿದ ಅನುದಾನ ಬಿಸಿ!

ಬೆಳ್ತಂಗಡಿ: ಸರಕಾರದ ನೇರ ನಿರ್ಲಕ್ಷ್ಯ ಹಾಗೂ ಖಾಸಗೀಕರಣದ ಮೇಲಾಟದಿಂದ ಕೆಲವೇ ವರ್ಷಗಳಲ್ಲಿ ಸರಕಾರಿ ಶಾಲೆಗಳು ಸಂಪೂರ್ಣ ನಶಿಸುವ ಭೀತಿ ಎದುರಾಗಿದೆ.

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದರೂ ಶಾಲೆಗಳ ನಿರ್ವಹಣೆಗೆ ಅನುದಾನ ಸಾಲುತ್ತಿಲ್ಲ. ಕಟ್ಟಡದ ಅವ್ಯವಸ್ಥೆ, ಕಲಿಕೋಪಕರಣಗಳ ಕೊರತೆ ಮೇಲ್ನೋಟಕ್ಕೆ ಕಂಡರೆ ಇದೀಗ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳೆರಡರ ಸೀಮೆಸುಣ್ಣ(ಚಾಕ್‌ಪೀಸ್‌)ಕ್ಕೂ ಅನುದಾನ ಸಿಗದೆ ಶಿಕ್ಷಕರೇ ಬೇಡುವ ಪರಿಸ್ಥಿತಿ ಬಂದಿದೆ. ಆ ಮಟ್ಟಿಗೆ ಸರಕಾರವು ತನ್ನ ಶಾಲೆಗಳನ್ನು ಬಡವಾಗಿಸಿದೆ.

ಸರಕಾರಿ ಶಾಲೆಗಳಿಗೆ ವಿದ್ಯುತ್‌ ಬಿಲ್‌, ಸೀಮೆಸುಣ್ಣ, ಡಸ್ಟರ್‌, ಕಚೇರಿ ದಾಖಲೆ ಪುಸ್ತಕ, ಹಾಜರಾತಿ ಪುಸ್ತಕ, ಕಟ್ಟಡದ ಸಣ್ಣಪುಟ್ಟ ದುರಸ್ತಿ, ಕ್ರೀಡಾ ಸಾಮಗ್ರಿ, ದಿನಪತ್ರಿಕೆ, ವಾರಪತ್ರಿಕೆ, ಸ್ವತ್ಛತೆ ವೆಚ್ಚ, ಶೌಚಾಲಯ ಮತ್ತು ಕುಡಿವ ನೀರಿನ ನಿರ್ವಹಣೆ ಸಹಿತ ಇತರ ಸಲಕರಣೆ ಖರೀದಿಗಾಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ನಿರ್ದಿಷ್ಟ ಅನುದಾನ ನೀಡಲಾಗುತ್ತಿತ್ತು. ಆದರೆ 2022ರ ಮೇಯಿಂದ ಕೇವಲ ಶೌಚಾಲಯ ಮತ್ತು ಕುಡಿವ ನೀರಿನ ನಿರ್ವಹಣೆಗಾಗಿ 4,000 ರೂ. ಅನುದಾನ ಬಿಡುಗಡೆ ಮಾಡಿದ್ದು ಬಿಟ್ಟರೆ ಶಾಲೆಯ ನಿರ್ವಹಣೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ.

ಎಸ್‌ಡಿಎಂಸಿಯಿಂದ ಸಂಗ್ರಹಕ್ಕೆ ವಿರೋಧ
ಹಿಂದೆ ಇದೇ ಸಮಸ್ಯೆಯಾದಾಗ ಎಸ್‌ಡಿಎಂಸಿಯಿಂದ ಹಣ ಸಂಗ್ರಹಿಸುವಂತೆ ಸರಕಾರ ಸೂಚಿಸಿದ್ದು, ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಇನ್ನೂ ಎಚ್ಚೆತ್ತುಕೊಳ್ಳದ ಸರಕಾರ ಪ್ರಸಕ್ತ ಮಕ್ಕಳ ಶೌಚಾಲಯ ಸ್ವತ್ಛತೆಗೆ ಫಿನಾಯಿಲ್‌ ಬಳಕೆ ಮಾಡದ ಸ್ಥಿತಿ ಬಂದೊದಗಿದೆ.

ಕೊರೊನಾದ ಲಾಭ ಪಡೆಯದ ಸರಕಾರ
ಕೊರೊನಾ ಕಾಲಘಟ್ಟದಲ್ಲಿ ಬಹುತೇಕ ಪೋಷಕರು ಶುಲ್ಕ ಹೊರೆ ಸಹಿತ ಇತ್ಯಾದಿ ಕಾರಣದಿಂದ ಸರಕಾರಿ ಶಾಲೆಯತ್ತ ಮುಖ ಮಾಡಿದ್ದರು. ಆದರೆ ಸರಕಾರ ಇಂತಹ ಸಮಯವನ್ನು ಧನಾತ್ಮಕವಾಗಿ ಪರಿವರ್ತಿಸದೆ ನಿರ್ಲಕ್ಷ್ಯ ತೋರಿದೆ. ಮತ್ತೂಂದೆಡೆ ರಾಜ್ಯದ ಪ್ರಾಥಮಿಕ ಶಾಲೆಗಳು ಪ್ರಸಕ್ತ 60 ಸಾವಿದಷ್ಟು ಪ್ರಾಥಮಿಕ ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ.

ಕಳೆದ ಜುಲೈಯಲ್ಲಿ ಒಂದನೇ ಕಂತು ಬಿಡುಗಡೆಯಾಗಿತ್ತು. ಬಳಿಕ ಆಗಿಲ್ಲ. ಬಿಸಿಯೂಟ ಜಂಟಿ ಖಾತೆಯಲ್ಲಿ ಕೆಲವು ಸರಕಾರ ಮಟ್ಟದ ತಾಂತ್ರಿಕ ಸಮಸ್ಯೆಯಿಂದ ಜಿಎಸ್‌ಟಿ ಬಿಲ್‌ ನೀಡದೆ ಅನುದಾನಗಳು ಬಾಕಿಯಾಗಿವೆ. ಈ ಕುರಿತು ಸಚಿವರಲ್ಲಿ ಮಾತುಕತೆ ನಡೆಸಲಾಗಿದೆ.
– ಶಂಭುಲಿಂಗನಗೌಡ ಪಾಟೀಲ, ಅಧ್ಯಕ್ಷರು, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಬೆಂಗಳೂರು

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ನಿರ್ವಹಣೆಗೆ ಪ್ರತ್ಯೇಕ ಮೊತ್ತ ನಿಗದಿ ಪಡಿಸಿ ಇನ್ನುಳಿದ 15 ದಿನದೊಳಗೆ ಅನುದಾನ ಬಿಡುಗಡೆಮಾಡಲಾಗುತ್ತದೆ.
– ಡಾ| ವಿಶಾಲ್‌ ಆರ್‌., ಆಯುಕ್ತರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು

– ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.