ಹೈನುಗಾರರಿಗೆ ಸರಕಾರದ ನೆರವು: ಶಾಸಕ ಬಂಗೇರ
Team Udayavani, Dec 3, 2017, 3:54 PM IST
ಬೆಳ್ತಂಗಡಿ: ಕೃಷಿಕರನ್ನು ಆರ್ಥಿಕವಾಗಿ ಸಬಲರಾಗಿಸುವ ಉದ್ದೇಶದಿಂದ ಹೈನುಗಾರರಿಗೆ ದನಗಳ ಖರೀದಿಗಾಗಿ
ಸರಕಾರ ನೆರವಾಗುತ್ತಿದೆ. ಅಲ್ಲದೆ ಹಾಲಿಗೂ ಪ್ರೋತ್ಸಾಹಧನ ನೀಡುತ್ತಿದೆ ಎಂದು ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಅವರು ಬೆಳ್ತಂಗಡಿ ತಾ. ಪಂ. ಸಭಾ ಭವನದಲ್ಲಿ ಪಶು ಸಂಗೋಪನಾ ಇಲಾಖೆಯ ವತಿಯಿಂದ ಹೈನುಗಾರರಿಗೆ ದನಗಳ ಖರೀದಿಗೆ ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳಲ್ಲಿ 101 ಮಂದಿ ಹೈನುಗಾರರಿಗೆ 22.36 ಲ.ರೂ. ಸಹಾಯಧನ ವಿತರಿಸಲಾಯಿತು.
ವೇದಿಕೆಯಲ್ಲಿ ತಾ. ಪಂ. ಸದಸ್ಯೆ ಕೇಶವತಿ, ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಅಬ್ದುಲ್ ರಜಾಕ್,
ಯೋಗೀಶ್ ಕುಮಾರ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು. ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರತ್ನಾಕರ ಮಲ್ಯ ಸ್ವಾಗತಿಸಿದರು, ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್ ಕಾರ್ಯಕ್ರಮ ನಿರೂಪಿಸಿದರು. ಡಾ| ವಿನಯ ಫಲಾನುಭವಿಗಳ ಪಟ್ಟಿ ವಾಚಿಸಿದರು. ಡಾ| ಯತೀಶ್ ವಂದಿಸಿದರು.
ಮೂರು ಗೋಶಾಲೆಗೆ ಸಹಾಯಧನ
ತಾಲೂಕಿನ ಮೂರು ಗೋಶಾಲೆಗಳಿಗೆ ದನ ಸಾಕಲು ಸಹಾಯಧನ ನೀಡಲಾಗಿದೆ. ಸೌತಡ್ಕ ಗೋಶಾಲೆಗೆ 12.20 ಲ.ರೂ., ಹಳ್ಳಿಂಗೇರಿ ಗೋ ಶಾಲಾಗೆ 6.24 ಲ.ರೂ. , ಗುಂಡೂರಿ ಗೋಶಾಲೆಗೆ 3.60 ಲ.ರೂ. ನೀಡಲಾಗಿದೆ. ಧರ್ಮಸ್ಥಳ , ಬೆಳ್ತಂಗಡಿ ಪಶು ಸಂಗೋಪನಾ ಆಸ್ಪತ್ರೆಯ ನೂತನ ಕಟ್ಟಡಗಳಿಗೆ ತಲಾ 28.70 ಲ.ರೂ ಮಂಜೂರುಗೊಂಡಿದೆ.
– ಕೆ. ವಸಂತ ಬಂಗೇರ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್