“ಜ್ಞಾನಪೀಠ’ಕ್ಕೆ ಸರಕಾರಿ ಲಾಕರ್‌

ಕಾರಂತಜ್ಜನಿಗೆ ಸಿಕ್ಕ ಪ್ರಶಸ್ತಿ ಜನ್ಮದಿನದಂದು ಪ್ರದರ್ಶನಕ್ಕೆ ಸೀಮಿತ

Team Udayavani, Oct 11, 2019, 10:48 AM IST

u-44

ಶಿವರಾಮ ಕಾರಂತ ಅವರಿಗೆ ಲಭಿಸಿದ "ಜ್ಞಾನಪೀಠ' ಪುರಸ್ಕಾರ.

ಪುತ್ತೂರು: ಸಾಹಿತ್ಯ ಕ್ಷೇತ್ರದ ಮೇರು ಪುರಸ್ಕಾರ ಜ್ಞಾನಪೀಠ ಪ್ರಶಸ್ತಿಯನ್ನು ನೋಡಲು ಸಿಗುವ ಅವಕಾಶವೇ ವಿಶೇಷ ಅನುಭವ. ಪುತ್ತೂರಿನಲ್ಲಿ ಮೇರು ಸಾಹಿತಿ ಡಾ| ಕೆ. ಶಿವರಾಮ ಕಾರಂತರ ಕಾರಣದಿಂದ ಈ ಮಹಾ ಪಾರಿತೋಷಕವನ್ನು ಸಾಹಿತ್ಯಾಭಿಮಾನಿಗಳು ಕಣ್ತುಂಬಿ ಕೊಳ್ಳಬಹುದಾದರೂ ಮೂರು ವರ್ಷಗಳ ಬಳಿಕ ಅ. 10ರಂದು ಕಾರಂತ ಜನ್ಮದಿನದ ದಿನವಷ್ಟೇ ಈ ಅವಕಾಶ ಲಭಿಸಿದೆ.

ಕಡಲ ತಡಿಯ ಭಾರ್ಗವ ಡಾ| ಕೆ. ಶಿವರಾಮ ಕಾರಂತ 1936ರಿಂದ 1978ರ ತನಕ ಪುತ್ತೂರು ಪರ್ಲಡ್ಕದ ಬಾಲವನವನ್ನು ತಮ್ಮ ಸಾಹಿತ್ಯ, ಸಾಂಸ್ಕೃತಿಕ ಕೃಷಿಯ ಕರ್ಮಭೂಮಿಯನ್ನಾಗಿಸಿಕೊಂಡಿದ್ದರು. ಡಾ| ಶಿವರಾಮ ಕಾರಂತರ “ಮೂಕಜ್ಜಿಯ ಕನಸುಗಳು’ ಮಹಾ ಕಾದಂಬರಿಗೆ 1976ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿತ್ತು.

ಪ್ರಶಸ್ತಿ ಕರ್ಮಭೂಮಿಯಲ್ಲಿ…
ಡಾ| ಕಾರಂತರು ತಮ್ಮ ಕೊನೆಯ ದಿನ ಗಳಲ್ಲಿ ಪುತ್ತೂರಿನಿಂದ ದೂರವಾದರೂ ಜ್ಞಾನಪೀಠ ಪ್ರಶಸ್ತಿ ಬಾಲವನದ ಕರ್ಮ ಭೂಮಿಯಲ್ಲಿಯೇ ಇರಿಸಿದ್ದರು.

ಪುನಶ್ಚೇತನ, ಭದ್ರತೆಗಾಗಿ ಸ್ಥಳಾಂತರ
ಮೂರು ವರ್ಷಗಳ ಹಿಂದೆ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ಪುನಶ್ಚೇತನ ಕಾಮಗಾರಿಗಳನ್ನು ಆರಂಭಿಸ ಲಾಗಿದೆ. ಕಾರಂತರ ಮನೆಯನ್ನು 30 ಲಕ್ಷ ರೂ. ವೆಚ್ಚದಲ್ಲಿ ಪುನಶ್ಚೇತನ ಮಾಡುವ ಸಂದರ್ಭದಲ್ಲಿ ಭದ್ರತೆಯ ಕಾರಣಕ್ಕಾಗಿ ಜ್ಞಾನಪೀಠ ಪ್ರಶಸ್ತಿಯನ್ನು ಬಾಲವನದಿಂದ ಸರಕಾರಿ ಲಾಕರ್‌ಗೆ ಸ್ಥಳಾಂತರ ಮಾಡಲಾಗಿತ್ತು.

2018ರಲ್ಲಿ ಕಾರಂತರ ಪುನಶ್ಚೇತನಗೊಂಡ ಮನೆ ಉದ್ಘಾಟನೆ ಗೊಂಡರೂ ಸದ್ಯಕ್ಕೆ ಭದ್ರತೆ ಹಾಗೂ ಲಾಕರ್‌ ವ್ಯವಸ್ಥೆ ಮಾಡಲು ಸಾಧ್ಯವಾಗದೇ ಇರುವುದರಿಂದ ಜ್ಞಾನಪೀಠ ಪ್ರಶಸ್ತಿ ಸರಕಾರಿ ಲಾಕರ್‌ನಲ್ಲೇ ಉಳಿದಿತ್ತು.

ಈ ಬಾರಿ ಅ. 10ರಂದು ಕಾರಂತರ ಜನ್ಮದಿನೋತ್ಸವದ ಸಂದರ್ಭದಲ್ಲಿ ಸಾಹಿತ್ಯಾಸಕ್ತರ ಬೇಡಿಕೆಯ ಮೇರೆಗೆ ಬಾಲವನದಲ್ಲಿ ಪ್ರದರ್ಶನಕ್ಕೆ ಇಡುವ ವ್ಯವಸ್ಥೆಯನ್ನು ಸಹಾಯಕ ಆಯುಕ್ತರ ನೇತೃತ್ವದ ಸಮಿತಿಯ ಮೂಲಕ ಮಾಡಲಾಗಿತ್ತು. ಜತೆಗೆ ವಿಶೇಷವಾಗಿ ಪೊಲೀಸ್‌ ಭದ್ರತೆಯನ್ನೂ ನಿಯೋಜಿಸಲಾಗಿತ್ತು.

ಬಾಲವನದಲ್ಲಿ ಕಾರಂತರ ಮನೆಯ ಪುನಶ್ಚೇತನ ಕಾಮಗಾರಿ ನಡೆದಿದ್ದರೂ ಕಾರಂತರ ನಾಟ್ಯಶಾಲೆ, ರಂಗಮಂದಿರ, ಪ್ರಿಂಟಿಂಗ್‌ ಪ್ರಸ್‌ ಇದ್ದ ಗ್ರಂಥಾಲಯ ಮುಂತಾದವುಗಳ ಪುನಶ್ಚೇತನ ಕಾಮಗಾರಿ ನಡೆಯಬೇಕಿದೆ.

ಇದಕ್ಕಾಗಿ ಸರಕಾರ 1 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ. ಸ್ವಲ್ಪ ಮಟ್ಟಿನ ಕೆಲಸ ನಡೆದಿದ್ದರೂ ಹೆಚ್ಚುವರಿ ಹಣಕ್ಕಾಗಿ ಗುತ್ತಿಗೆದಾರ ಸಂಸ್ಥೆ ಮನವಿ ಮಾಡಿದೆ.
ಬಾಲವನದಲ್ಲಿ ಒಟ್ಟು ಪುನಶ್ಚೇತನ ಕಾಮಗಾರಿ ನಡೆದ ಬಳಿಕವಷ್ಟೇ ಜ್ಞಾನಪೀಠ ಪ್ರಶಸ್ತಿ ಸ್ಥಳಾಂತರಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆಯ ದೃಷ್ಟಿ
ಡಾ| ಶಿವರಾಮ ಕಾರಂತರಿಗೆ ಲಭಿಸಿದ ಅತ್ಯುಚ್ಚ ಗೌರವ ಜ್ಞಾನಪೀಠ ಪ್ರಶಸ್ತಿಗೆ ಭಾರೀ ಮೌಲ್ಯವಿರುವುದರಿಂದ ಭದ್ರತೆ ದೃಷ್ಟಿಯಿಂದ ಸರಕಾರಿ ಲಾಕರ್‌ಗೆ
ಸ್ಥಳಾಂತರ ಮಾಡಲಾಗಿದೆ. ಬೇಡಿಕೆಯ ಮೇರೆಗೆ ಒಂದು ದಿನ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಾಲವನದಲ್ಲಿ ಪುನಶ್ಚೇತನ ಕಾಮಗಾರಿ ಸಹಿತ ಒಟ್ಟು ವ್ಯವಸ್ಥೆಗಳು ಸಮರ್ಪಕವಾದ ಬಳಿಕ ಭದ್ರವಾದ ಲಾಕರ್‌ ನಿರ್ಮಿಸಿ ಅಲ್ಲಿಗೆ ಮರು ಸ್ಥಳಾಂತರ ಮಾಡಲಾಗುತ್ತದೆ.
– ಎಚ್‌.ಕೆ. ಕೃಷ್ಣಮೂರ್ತಿ, ಸಹಾಯಕ ಆಯುಕ್ತ, ಪುತ್ತೂರು

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.